<p><strong>ಕೊಪ್ಪಳ:</strong> ಜಿಲ್ಲೆಯ ಗಂಗಾವತಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಕಾಮಗಾರಿಯನ್ನು ಕಳಪೆಯಾಗಿ ನಿರ್ವಹಣೆ ಮಾಡಿದ್ದಕ್ಕೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.</p>.ಕೊಪ್ಪಳ: ಕನಕದಾಸರ ಮೂರ್ತಿ ಭಗ್ನ; ಹಾಲುಮತ ಸಮಾಜದ ಆಕ್ರೋಶ .<p>ಇಲಾಖೆಯ ಕೊಪ್ಪಳದ ಕಾರ್ಯಪಾಲಕ ಎಂಜಿನಿಯರ್ ಎಚ್. ಸತ್ಯಪ್ಪ ಮತ್ತು ಗಂಗಾವತಿ ಉಪವಿಭಾಗದ ಪ್ರಭಾರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪಿ. ವಿಜಯಕುಮಾರ್ ಅಮಾನತುಗೊಂಡವರು.</p><p>ಎಂಜಿನಿಯರಿಂಗ್ ಕಾಲೇಜಿಗೆ ಲ್ಯಾಬೋರೇಟರಿ ಉಪಕರಣಗಳು, ಡಿಜಿಟಲ್ ಗ್ರಂಥಾಲಯ, ವಾಚನಾಲಯಕ್ಕೆ ಪೀಠೋಪಕರಣಗಳು, ಐದು ಕಂಪ್ಯೂಟರ್ಗಳ ಸೆಟ್, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಇತರ ಕಾಮಗಾರಿಗಳನ್ನು ಇಲಾಖೆ ವತಿಯಿಂದ ಮಾಡಲಾಗಿತ್ತು. ಈ ಎಲ್ಲ ಕಾಮಗಾರಿಗಳನ್ನು ₹68.40 ಲಕ್ಷ ವೆಚ್ಚದಲ್ಲಿ ನಿರ್ವಹಿಸಲು ಅನುಮೋದನೆ ನೀಡಲಾಗಿತ್ತು.</p>.ಕೊಪ್ಪಳ: ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ.<p>ಕಾರ್ಯಾದೇಶದ ಅನ್ವಯ ಒಟ್ಟು 90 ಸಾಮಗ್ರಿಗಳನ್ನು ಒದಗಿಸಬೇಕಿತ್ತು. ಇದರಲ್ಲಿ 82 ಸಾಮಗ್ರಿಗಳನ್ನು ಮಾತ್ರ ನೀಡಲಾಗಿದೆ. ಲ್ಯಾಬೋರೇಟರಿಗಳಿಗೆ ಒದಗಿಸಿದ 47 ಯಂತ್ರೋಪಕರಣಗಳಲ್ಲಿ 18ರಲ್ಲಿ ಸಾಕಷ್ಟು ನ್ಯೂನ್ಯತೆಗಳು ಕಂಡುಬಂದಿವೆ. ನಿಯಮಗಳಿಗೆ ಅನುಗುಣವಾಗಿ ಅವುಗಳನ್ನು ಅಳವಡಿಸಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p><p>ಅಮಾನತಿನ ಜೊತೆಗೆ ಇಬ್ಬರೂ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಹೊರಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಚೇತನ ಎಂ. ಆದೇಶದಲ್ಲಿ ತಿಳಿಸಿದ್ದಾರೆ.</p> .ಕೊಪ್ಪಳ | ಬೋಧಕ ಆಸ್ಪತ್ರೆಯ ಉದ್ಘಾಟನೆಗೆ ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಜಿಲ್ಲೆಯ ಗಂಗಾವತಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಕಾಮಗಾರಿಯನ್ನು ಕಳಪೆಯಾಗಿ ನಿರ್ವಹಣೆ ಮಾಡಿದ್ದಕ್ಕೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.</p>.ಕೊಪ್ಪಳ: ಕನಕದಾಸರ ಮೂರ್ತಿ ಭಗ್ನ; ಹಾಲುಮತ ಸಮಾಜದ ಆಕ್ರೋಶ .<p>ಇಲಾಖೆಯ ಕೊಪ್ಪಳದ ಕಾರ್ಯಪಾಲಕ ಎಂಜಿನಿಯರ್ ಎಚ್. ಸತ್ಯಪ್ಪ ಮತ್ತು ಗಂಗಾವತಿ ಉಪವಿಭಾಗದ ಪ್ರಭಾರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪಿ. ವಿಜಯಕುಮಾರ್ ಅಮಾನತುಗೊಂಡವರು.</p><p>ಎಂಜಿನಿಯರಿಂಗ್ ಕಾಲೇಜಿಗೆ ಲ್ಯಾಬೋರೇಟರಿ ಉಪಕರಣಗಳು, ಡಿಜಿಟಲ್ ಗ್ರಂಥಾಲಯ, ವಾಚನಾಲಯಕ್ಕೆ ಪೀಠೋಪಕರಣಗಳು, ಐದು ಕಂಪ್ಯೂಟರ್ಗಳ ಸೆಟ್, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಇತರ ಕಾಮಗಾರಿಗಳನ್ನು ಇಲಾಖೆ ವತಿಯಿಂದ ಮಾಡಲಾಗಿತ್ತು. ಈ ಎಲ್ಲ ಕಾಮಗಾರಿಗಳನ್ನು ₹68.40 ಲಕ್ಷ ವೆಚ್ಚದಲ್ಲಿ ನಿರ್ವಹಿಸಲು ಅನುಮೋದನೆ ನೀಡಲಾಗಿತ್ತು.</p>.ಕೊಪ್ಪಳ: ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ.<p>ಕಾರ್ಯಾದೇಶದ ಅನ್ವಯ ಒಟ್ಟು 90 ಸಾಮಗ್ರಿಗಳನ್ನು ಒದಗಿಸಬೇಕಿತ್ತು. ಇದರಲ್ಲಿ 82 ಸಾಮಗ್ರಿಗಳನ್ನು ಮಾತ್ರ ನೀಡಲಾಗಿದೆ. ಲ್ಯಾಬೋರೇಟರಿಗಳಿಗೆ ಒದಗಿಸಿದ 47 ಯಂತ್ರೋಪಕರಣಗಳಲ್ಲಿ 18ರಲ್ಲಿ ಸಾಕಷ್ಟು ನ್ಯೂನ್ಯತೆಗಳು ಕಂಡುಬಂದಿವೆ. ನಿಯಮಗಳಿಗೆ ಅನುಗುಣವಾಗಿ ಅವುಗಳನ್ನು ಅಳವಡಿಸಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p><p>ಅಮಾನತಿನ ಜೊತೆಗೆ ಇಬ್ಬರೂ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಹೊರಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಚೇತನ ಎಂ. ಆದೇಶದಲ್ಲಿ ತಿಳಿಸಿದ್ದಾರೆ.</p> .ಕೊಪ್ಪಳ | ಬೋಧಕ ಆಸ್ಪತ್ರೆಯ ಉದ್ಘಾಟನೆಗೆ ಮನವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>