<p>ಗಂಗಾವತಿ: ವಿಧಾನಸಭಾ ಕ್ಷೇತ್ರದ ಚಿಕ್ಕಬೆಣಕಲ್-ಹಿರೇಬೆಣಕಲ್ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಸೋಮವಾರ ಮೂರು ಚಕ್ರದ ಎರಡು ಆಟೋಗಳು ನಿಯಂತ್ರಣತಪ್ಪಿ, ಭತ್ತದ ಗದ್ದೆಗೆ ಉರುಳಿದ್ದು, ರಭಸಕ್ಕೆ ಒಬ್ಬ ಯುವತಿ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.</p>.<p>ಗಂಗಾವತಿಯ ಮೆಹಬೂಬ ನಗರದ ನಿವಾಸಿ ರುಬಿನಾ(24) ಮುತೃರು ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಸದಸ್ಯರು 2 ಆಟೊಗಳಲ್ಲಿ ಖಾಸಗಿ ಕೆಲಸದ ನಿಮಿತ್ತ ಕೊಪ್ಪಳಕ್ಕೆ ಹೊರಟಿದ್ದರು. ಚಿಕ್ಕಬೆಣಕಲ್ ಮತ್ತು ಹಿರೆಬೇಣಕಲ್ ಗ್ರಾಮದ ಮಾರ್ಗದ ಮಧ್ಯೆ ಎರಡು ಆಟೊಗಳು ಒಂದರ ಹಿಂದೆ ಒಂದು ಹೋಗುವಾಗ, ನಿಯಂತ್ರಣ ತಪ್ಪಿ ಭತ್ತದ ಗದ್ದೆಯಲ್ಲಿ ಉರುಳಿವೆ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆಯಲ್ಲಿ ಒಟ್ಟು 17 ಜನರು ಗಾಯಾಗೊಂಡಿದ್ದು, ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ರವಾನಿಸಲಾಗಿದೆ. ಉಳಿದವರು ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-35-222575743</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ವಿಧಾನಸಭಾ ಕ್ಷೇತ್ರದ ಚಿಕ್ಕಬೆಣಕಲ್-ಹಿರೇಬೆಣಕಲ್ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಸೋಮವಾರ ಮೂರು ಚಕ್ರದ ಎರಡು ಆಟೋಗಳು ನಿಯಂತ್ರಣತಪ್ಪಿ, ಭತ್ತದ ಗದ್ದೆಗೆ ಉರುಳಿದ್ದು, ರಭಸಕ್ಕೆ ಒಬ್ಬ ಯುವತಿ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.</p>.<p>ಗಂಗಾವತಿಯ ಮೆಹಬೂಬ ನಗರದ ನಿವಾಸಿ ರುಬಿನಾ(24) ಮುತೃರು ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಸದಸ್ಯರು 2 ಆಟೊಗಳಲ್ಲಿ ಖಾಸಗಿ ಕೆಲಸದ ನಿಮಿತ್ತ ಕೊಪ್ಪಳಕ್ಕೆ ಹೊರಟಿದ್ದರು. ಚಿಕ್ಕಬೆಣಕಲ್ ಮತ್ತು ಹಿರೆಬೇಣಕಲ್ ಗ್ರಾಮದ ಮಾರ್ಗದ ಮಧ್ಯೆ ಎರಡು ಆಟೊಗಳು ಒಂದರ ಹಿಂದೆ ಒಂದು ಹೋಗುವಾಗ, ನಿಯಂತ್ರಣ ತಪ್ಪಿ ಭತ್ತದ ಗದ್ದೆಯಲ್ಲಿ ಉರುಳಿವೆ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆಯಲ್ಲಿ ಒಟ್ಟು 17 ಜನರು ಗಾಯಾಗೊಂಡಿದ್ದು, ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ರವಾನಿಸಲಾಗಿದೆ. ಉಳಿದವರು ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-35-222575743</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>