<p>ಕೊಪ್ಪಳ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರಿಗೆ ತಾಲ್ಲೂಕಿನಲ್ಲಿ ನಾಲ್ಕು ತಿಂಗಳಿಂದ ಜಮೆಯಾಗಿಲ್ಲ. ಈ ಕುರಿತು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಯಿತು.</p>.<p>ಯೋಜನೆಗಳ ಅನುಷ್ಠಾನದ ತಾಲ್ಲೂಕು ಮಟ್ಟದ ಅಧ್ಯಕ್ಷ ಬಾಲಚಂದ್ರನ್ ಎಸ್. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು 2026ರ ಜನವರಿ ತನಕ ಅನುದಾನ ಜಮೆಯಾಗಿದೆ. ಮಾಹಿತಿ ನಿಯಂತ್ರಣ ಫಲಕದಲ್ಲಿ ಅಪಡೇಟ್ ಆಗಿಲ್ಲ ಎಂದರು.</p>.<p>ಬಾಲಚಂದ್ರನ್ ಇದಕ್ಕೆ ಪ್ರತಿಕ್ರಿಯಿಸಿ ‘ಐಟಿ, ಜಿಎಸ್ಟಿ ನೋಂದಣಿಯಾದ ಫಲಾನುಭವಿಗಳು ಸೌಲಭ್ಯ ಪಡೆಯಲು ಅನರ್ಹರಾಗಿರುತ್ತಾರೆ. ಒಮ್ಮೆ ನೋಂದಣಿಯಾದರೆ ಸೌಲಭ್ಯ ಲಭಿಸುವುದಿಲ್ಲ. ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು ಜಿಲ್ಲಾಮಟ್ಟದ ಸಭೆಯ ಮೂಲಕ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದರು.</p>.<p>’ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮರಣ ಹೊಂದಿದಲ್ಲಿ ಅವರ ಖಾತೆಗೆ ಅನುದಾನ ಜಮೆಯಾಗುತ್ತದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿ ಮರಣ ಹೊಂದಿದ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ವಿವರ ಸಲ್ಲಿಸಬೇಕು’ ಎಂದು ಸೂಚಿಸಿದರು.</p>.<p>ಸದಸ್ಯೆ ಜ್ಯೋತಿ ಗೊಂಡಬಾಳ ಮಾತನಾಡಿ ‘ಮುಂಡರಗಿ ಫಲಾನುಭವಿಯೊಬ್ಬರಿಗೆ ಸೂಕ್ತ ದಾಖಲೆಗಳು ಇಲ್ಲದ ಪ್ರಯುಕ್ತ ಇದುವರೆಗೆ ಅನುದಾನ ಬಂದಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು’ ಎಂದು ಕೋರಿದರು.</p>.<p>ತಾಲ್ಲುಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ತಹಶೀಲ್ದಾರ್ ಬಸವರಾಜ ತೆನ್ನಳ್ಳಿ, ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ಅನ್ವರ್ ಹುಸೇನ ಗಡಾದ, ಮಾನ್ವಿ ಪಾಷಾ, ಅನ್ನದಾನಯ್ಯಸ್ವಾಮಿ, ರಾಮಣ್ಣ ಚೌಡ್ಕಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-35-564012005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರಿಗೆ ತಾಲ್ಲೂಕಿನಲ್ಲಿ ನಾಲ್ಕು ತಿಂಗಳಿಂದ ಜಮೆಯಾಗಿಲ್ಲ. ಈ ಕುರಿತು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಯಿತು.</p>.<p>ಯೋಜನೆಗಳ ಅನುಷ್ಠಾನದ ತಾಲ್ಲೂಕು ಮಟ್ಟದ ಅಧ್ಯಕ್ಷ ಬಾಲಚಂದ್ರನ್ ಎಸ್. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು 2026ರ ಜನವರಿ ತನಕ ಅನುದಾನ ಜಮೆಯಾಗಿದೆ. ಮಾಹಿತಿ ನಿಯಂತ್ರಣ ಫಲಕದಲ್ಲಿ ಅಪಡೇಟ್ ಆಗಿಲ್ಲ ಎಂದರು.</p>.<p>ಬಾಲಚಂದ್ರನ್ ಇದಕ್ಕೆ ಪ್ರತಿಕ್ರಿಯಿಸಿ ‘ಐಟಿ, ಜಿಎಸ್ಟಿ ನೋಂದಣಿಯಾದ ಫಲಾನುಭವಿಗಳು ಸೌಲಭ್ಯ ಪಡೆಯಲು ಅನರ್ಹರಾಗಿರುತ್ತಾರೆ. ಒಮ್ಮೆ ನೋಂದಣಿಯಾದರೆ ಸೌಲಭ್ಯ ಲಭಿಸುವುದಿಲ್ಲ. ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು ಜಿಲ್ಲಾಮಟ್ಟದ ಸಭೆಯ ಮೂಲಕ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದರು.</p>.<p>’ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮರಣ ಹೊಂದಿದಲ್ಲಿ ಅವರ ಖಾತೆಗೆ ಅನುದಾನ ಜಮೆಯಾಗುತ್ತದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿ ಮರಣ ಹೊಂದಿದ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ವಿವರ ಸಲ್ಲಿಸಬೇಕು’ ಎಂದು ಸೂಚಿಸಿದರು.</p>.<p>ಸದಸ್ಯೆ ಜ್ಯೋತಿ ಗೊಂಡಬಾಳ ಮಾತನಾಡಿ ‘ಮುಂಡರಗಿ ಫಲಾನುಭವಿಯೊಬ್ಬರಿಗೆ ಸೂಕ್ತ ದಾಖಲೆಗಳು ಇಲ್ಲದ ಪ್ರಯುಕ್ತ ಇದುವರೆಗೆ ಅನುದಾನ ಬಂದಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು’ ಎಂದು ಕೋರಿದರು.</p>.<p>ತಾಲ್ಲುಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ತಹಶೀಲ್ದಾರ್ ಬಸವರಾಜ ತೆನ್ನಳ್ಳಿ, ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ಅನ್ವರ್ ಹುಸೇನ ಗಡಾದ, ಮಾನ್ವಿ ಪಾಷಾ, ಅನ್ನದಾನಯ್ಯಸ್ವಾಮಿ, ರಾಮಣ್ಣ ಚೌಡ್ಕಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-35-564012005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>