<p><strong>ಯಲಬುರ್ಗಾ:</strong> ‘ಸ್ಪಷ್ಟವಾದ ಗುರಿಯನ್ನಿಟ್ಟುಕೊಂಡು ಸತತ ಪ್ರಯತ್ನದಿಂದ ಅದನ್ನು ಮುಟ್ಟಿ, ಜಗತ್ತಿಗೆ ಮಾದರಿಯಾಗುವ ಸಾಮರ್ಥ್ಯ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಇರುತ್ತದೆ. ಆದರೆ ದೃಢ ಸಂಕಲ್ಪದಿಂದ ಕಾರ್ಯಪ್ರವೃತ್ತರಾಗುವುದು ಮುಖ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.</p>.<p>ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗೆ ಚಾಲನೆ ನೀಡಿ ಮಾತನಾಡಿದರು.</p>.<p>ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ನಿರಂತರ ಅಧ್ಯಯನ ಹಾಗೂ ಹೆಚ್ಚಿನ ಪರಿಶ್ರಮ ಅವಶ್ಯಕ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಶಿಕ್ಷಕರು ಹಾಗೂ ಪೋಷಕರು ಪ್ರೇರಣೆ ನೀಡಬೇಕು ಎಂದು ಕಿವಿ ಮಾತು ಹೇಳಿದರು.</p>.<p>ಈ ವಸತಿ ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಹಾಗೆಯೇ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳು ಮಕ್ಕಳ ಬುದ್ಧಿಮಟ್ಟವನ್ನು ಹೆಚ್ಚಿಸುವುದರಿಂದ ಈ ವಿಷಯಗಳನ್ನು ಶಿಕ್ಷಕರು ಇಚ್ಛಾಶಕ್ತಿಯಿಂದ ಕಲಿಸಬೇಕು. ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಗುರುತಿಸಿ ಅವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಶಾಲೆಯ ಮುಖ್ಯೋಪಾಧ್ಯಾಯ ವಿರೂಪಾಕ್ಷಪ್ಪ ಹನಮಶೆಟ್ಟಿ ಮಾತನಾಡಿದರು.</p>.<p>ತಹಶೀಲ್ದಾರ್ ಶ್ರೀಶೈಲ ತಳವಾರ, ಗುರುರಾಜ ಛಲವಾದಿ, ಗ್ರಾ.ಪಂ. ಅಧ್ಯಕ್ಷೆ ಶಾರದಾ ಕೊಡತಗೇರಿ, ಉಪಾಧ್ಯಕ್ಷೆ ರೇಣುಕಾ ತೊಗರಿ, ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್ ಪಾಟೀಲ, ವೀರಣ್ಣ ಹುಬ್ಬಳ್ಳಿ, ಅಂದಾನಗೌಡ ಪೋಲೀಸ್ ಪಾಟೀಲ, ಪ್ರಭುರಾಜ ಕಲಬುರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಸ್ಪಷ್ಟವಾದ ಗುರಿಯನ್ನಿಟ್ಟುಕೊಂಡು ಸತತ ಪ್ರಯತ್ನದಿಂದ ಅದನ್ನು ಮುಟ್ಟಿ, ಜಗತ್ತಿಗೆ ಮಾದರಿಯಾಗುವ ಸಾಮರ್ಥ್ಯ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಇರುತ್ತದೆ. ಆದರೆ ದೃಢ ಸಂಕಲ್ಪದಿಂದ ಕಾರ್ಯಪ್ರವೃತ್ತರಾಗುವುದು ಮುಖ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.</p>.<p>ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗೆ ಚಾಲನೆ ನೀಡಿ ಮಾತನಾಡಿದರು.</p>.<p>ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ನಿರಂತರ ಅಧ್ಯಯನ ಹಾಗೂ ಹೆಚ್ಚಿನ ಪರಿಶ್ರಮ ಅವಶ್ಯಕ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಶಿಕ್ಷಕರು ಹಾಗೂ ಪೋಷಕರು ಪ್ರೇರಣೆ ನೀಡಬೇಕು ಎಂದು ಕಿವಿ ಮಾತು ಹೇಳಿದರು.</p>.<p>ಈ ವಸತಿ ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಹಾಗೆಯೇ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳು ಮಕ್ಕಳ ಬುದ್ಧಿಮಟ್ಟವನ್ನು ಹೆಚ್ಚಿಸುವುದರಿಂದ ಈ ವಿಷಯಗಳನ್ನು ಶಿಕ್ಷಕರು ಇಚ್ಛಾಶಕ್ತಿಯಿಂದ ಕಲಿಸಬೇಕು. ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಗುರುತಿಸಿ ಅವರು ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಶಾಲೆಯ ಮುಖ್ಯೋಪಾಧ್ಯಾಯ ವಿರೂಪಾಕ್ಷಪ್ಪ ಹನಮಶೆಟ್ಟಿ ಮಾತನಾಡಿದರು.</p>.<p>ತಹಶೀಲ್ದಾರ್ ಶ್ರೀಶೈಲ ತಳವಾರ, ಗುರುರಾಜ ಛಲವಾದಿ, ಗ್ರಾ.ಪಂ. ಅಧ್ಯಕ್ಷೆ ಶಾರದಾ ಕೊಡತಗೇರಿ, ಉಪಾಧ್ಯಕ್ಷೆ ರೇಣುಕಾ ತೊಗರಿ, ಪ.ಪಂ. ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್.ಪೊಲೀಸ್ ಪಾಟೀಲ, ವೀರಣ್ಣ ಹುಬ್ಬಳ್ಳಿ, ಅಂದಾನಗೌಡ ಪೋಲೀಸ್ ಪಾಟೀಲ, ಪ್ರಭುರಾಜ ಕಲಬುರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>