<p><strong>ಕುಷ್ಟಗಿ:</strong> ‘ಪದೇ ಪದೆ ಬರ ಪರಿಸ್ಥಿತಿ ಎದುರಿಸುತ್ತಿರುವ ಈ ಭಾಗದ ರೈತರ ಹೊಲಗಳಿಗೆ ನೀರುಣಿಸಬಹುದಾದ ಕೊಪ್ಪಳ ಏತ ನೀರಾವರಿ ಮಹತ್ವದ ಯೋಜನೆಯನ್ನು ಕಾರ್ಯಗತಗೊಳಿಸುವ ಇರಾದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾವು ಜಲಸಂಪನ್ಮೂಲ ಸಚಿವರಿದ್ದಾಗ ಕೃಷ್ಣಾ ಬಿ ಸ್ಕೀಂನಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆ ಅನುಷ್ಠಾನ ಗೊಳಿಸುವುದಕ್ಕೆ ಚಾಲನೆ ನೀಡಿದ್ದರಿಂದ ಕುಷ್ಟಗಿ ತಾಲ್ಲೂಕಿನವರೆಗೂ ನೀರು ಹರಿಸುವುದಕ್ಕೆ ಸಾಧ್ಯವಾಗಿತ್ತು. ಆದರೆ ಆಗ ನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರ ಸರ್ಕಾರ ‘ಬಿ’ ಸ್ಕೀಂ ವಿಚಾರ ಸುಪ್ರೀಂ ಕೋರ್ಟ್ನಲ್ಲಿರುವುದರಿಂದ ನ್ಯಾಯಾಂಗ ನಿಂದನೆ ಎದುರಿಸಿ ಜೈಲು ಸೇರಬೇಕಾಗುತ್ತದೆ ಎಂದು ನೆಪ ಹೇಳುತ್ತ ಬಂದಿತು. ಈಗ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯರೆಡ್ಡಿ ಸ್ವತಃ, ‘ಕೊಪ್ಪಳ ಏತ ನೀರಾವರಿ ಯೋಜನೆ ಆಗದ ಮಾತು’ ಎಂದು ಲೇವಡಿ ಮಾಡಿ, ಆಗ ಈ ಯೋಜನೆಗೆ ಒಂದು ರೂಪಾಯಿ ಸಹ ಅನುದಾನ ನೀಡಿರಲಿಲ್ಲ. ಆದರೆ ಈಗ ಅದೇ ಯೋಜನೆಯಲ್ಲಿ ಕನಿಷ್ಠ ಕೆರೆ ತುಂಬಿಸಲು ಸಾಧ್ಯವಾಗಿದೆ. ಆದರೆ ರೈತರ ಹೊಲಗಳಿಗೆ ಹನಿ ನೀರಿನ ವ್ಯವಸ್ಥೆ ಅನುಷ್ಠಾನವಾಗಬೇಕು ಎಂಬ ತಮ್ಮ ಸಲಹೆಗೆ ರಾಜ್ಯ ಸರ್ಕಾರ ಕಿವಿಗೊಡದೆ ನಿರ್ಲಕ್ಷ್ಯವಹಿಸಿದೆ’ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ 17ನೇ ಬಾರಿ ಮಂಡಿಸಿದ ಬಜೆಟ್ ತೀರಾ ಕಳಪೆಯಾಗಿದ್ದು, ಪಕ್ಷದ ಆಂತರಿಕ ಕಲಹಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಕಾಲಹರಣ ಮಾಡುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕರು ಆಕ್ಷೇಪ ಎತ್ತಿದ್ದಾರೆ. ರಾಜ್ಯ ಕಾಂಗ್ರೆಸ್ದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಣ ಬಡಿದಾಟ ತಾರಕಕ್ಕೇರಿದೆ. ಎರಡು ಬಾರಿ ಶಾಸಕರಾದವರು, ಹಿರಿಯ ಶಾಸಕರೂ ಸಚಿವ ಸ್ಥಾನಕ್ಕಾಗಿ ಶಾಸಕರು ದುಂಬಾಲು ಬಿದ್ದಿದ್ದು ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವುದರಲ್ಲಿಯೇ ಸಿದ್ದರಾಮಯ್ಯ ಹೈರಾಣಾಗುವ ಪರಿಸ್ಥಿತಿ ಬಂದಿದೆ. ರಾಷ್ಟ್ರೀಯ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷ ಮೂಲೆಗುಂಪಾಗುವ ಎಲ್ಲ ಲಕ್ಷಣಗಳೂ ಇವೆ. ಒಡಿಶಾ, ಹರಿಯಾಣ ರಾಜ್ಯಗಳ ಶಾಸಕರನ್ನು ಬೇರೆ ರಾಜ್ಯಗಳಿಗೆ ಕಳಿಸಿ ಹಿಡಿತದಲ್ಲಿಟ್ಟುಕೊಳ್ಳಲು ಪಕ್ಷದ ಹೈಕಮಾಂಡ್ ಪರದಾಡುತ್ತಿದೆ. ಪಕ್ಷದ ಈ ಪರಿಸ್ಥಿತಿ ಮುಂದಿನ ಚುನಾವಣೆ ವೇಳೆಗೆ ಕರ್ನಾಟಕ ಮತ್ತು ತೆಲಂಗಾಣಗಳಿಗೂ ಬರಲಿದೆ’ ಎಂದು ಹೇಳಿದರು.</p>.<p>ರೈಲ್ವೆ ಮಾರ್ಗ: ಕುಷ್ಟಗಿ ನರಗುಂದ ಘಟಪ್ರಭ ಹೊಸ ರೈಲು ಮಾರ್ಗ ಆದರೆ ಈ ಭಾಗದ ಜನರಿಗೆ ಬಹಳಷ್ಟು ಅನುಕೂಲ ಆಗಲಿದೆ ಎಂದ ಬಸವರಾಜ ಬೊಮ್ಮಾಯಿ, ಈ ವಿಷಯದಲ್ಲಿ ತಾವು ಮತ್ತು ಬಾಗಲಕೋಟೆ ಸಂಸದ ಗದ್ದಿಗೌಡರ ಹಾಗೂ ಇತರೆ ಸಂಸದರಿಂದಲೂ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿರುವುದಾಗಿ ಬೊಮ್ಮಾಯಿ ತಿಳಿಸಿದರು.</p>.<p>ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಹಾಲಪ್ಪ ಆಚಾರ, ಬಿಜೆಪಿ ಅಧ್ಯಕ್ಷ ಮಹಾಂತೇಶ ಬದಾಮಿ, ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ, ಕೆ.ಮಹೇಶ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ‘ಪದೇ ಪದೆ ಬರ ಪರಿಸ್ಥಿತಿ ಎದುರಿಸುತ್ತಿರುವ ಈ ಭಾಗದ ರೈತರ ಹೊಲಗಳಿಗೆ ನೀರುಣಿಸಬಹುದಾದ ಕೊಪ್ಪಳ ಏತ ನೀರಾವರಿ ಮಹತ್ವದ ಯೋಜನೆಯನ್ನು ಕಾರ್ಯಗತಗೊಳಿಸುವ ಇರಾದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾವು ಜಲಸಂಪನ್ಮೂಲ ಸಚಿವರಿದ್ದಾಗ ಕೃಷ್ಣಾ ಬಿ ಸ್ಕೀಂನಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆ ಅನುಷ್ಠಾನ ಗೊಳಿಸುವುದಕ್ಕೆ ಚಾಲನೆ ನೀಡಿದ್ದರಿಂದ ಕುಷ್ಟಗಿ ತಾಲ್ಲೂಕಿನವರೆಗೂ ನೀರು ಹರಿಸುವುದಕ್ಕೆ ಸಾಧ್ಯವಾಗಿತ್ತು. ಆದರೆ ಆಗ ನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರ ಸರ್ಕಾರ ‘ಬಿ’ ಸ್ಕೀಂ ವಿಚಾರ ಸುಪ್ರೀಂ ಕೋರ್ಟ್ನಲ್ಲಿರುವುದರಿಂದ ನ್ಯಾಯಾಂಗ ನಿಂದನೆ ಎದುರಿಸಿ ಜೈಲು ಸೇರಬೇಕಾಗುತ್ತದೆ ಎಂದು ನೆಪ ಹೇಳುತ್ತ ಬಂದಿತು. ಈಗ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯರೆಡ್ಡಿ ಸ್ವತಃ, ‘ಕೊಪ್ಪಳ ಏತ ನೀರಾವರಿ ಯೋಜನೆ ಆಗದ ಮಾತು’ ಎಂದು ಲೇವಡಿ ಮಾಡಿ, ಆಗ ಈ ಯೋಜನೆಗೆ ಒಂದು ರೂಪಾಯಿ ಸಹ ಅನುದಾನ ನೀಡಿರಲಿಲ್ಲ. ಆದರೆ ಈಗ ಅದೇ ಯೋಜನೆಯಲ್ಲಿ ಕನಿಷ್ಠ ಕೆರೆ ತುಂಬಿಸಲು ಸಾಧ್ಯವಾಗಿದೆ. ಆದರೆ ರೈತರ ಹೊಲಗಳಿಗೆ ಹನಿ ನೀರಿನ ವ್ಯವಸ್ಥೆ ಅನುಷ್ಠಾನವಾಗಬೇಕು ಎಂಬ ತಮ್ಮ ಸಲಹೆಗೆ ರಾಜ್ಯ ಸರ್ಕಾರ ಕಿವಿಗೊಡದೆ ನಿರ್ಲಕ್ಷ್ಯವಹಿಸಿದೆ’ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ 17ನೇ ಬಾರಿ ಮಂಡಿಸಿದ ಬಜೆಟ್ ತೀರಾ ಕಳಪೆಯಾಗಿದ್ದು, ಪಕ್ಷದ ಆಂತರಿಕ ಕಲಹಗಳನ್ನು ಮುಚ್ಚಿಕೊಳ್ಳುವ ಸಲುವಾಗಿ ಕಾಲಹರಣ ಮಾಡುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕರು ಆಕ್ಷೇಪ ಎತ್ತಿದ್ದಾರೆ. ರಾಜ್ಯ ಕಾಂಗ್ರೆಸ್ದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಣ ಬಡಿದಾಟ ತಾರಕಕ್ಕೇರಿದೆ. ಎರಡು ಬಾರಿ ಶಾಸಕರಾದವರು, ಹಿರಿಯ ಶಾಸಕರೂ ಸಚಿವ ಸ್ಥಾನಕ್ಕಾಗಿ ಶಾಸಕರು ದುಂಬಾಲು ಬಿದ್ದಿದ್ದು ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವುದರಲ್ಲಿಯೇ ಸಿದ್ದರಾಮಯ್ಯ ಹೈರಾಣಾಗುವ ಪರಿಸ್ಥಿತಿ ಬಂದಿದೆ. ರಾಷ್ಟ್ರೀಯ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷ ಮೂಲೆಗುಂಪಾಗುವ ಎಲ್ಲ ಲಕ್ಷಣಗಳೂ ಇವೆ. ಒಡಿಶಾ, ಹರಿಯಾಣ ರಾಜ್ಯಗಳ ಶಾಸಕರನ್ನು ಬೇರೆ ರಾಜ್ಯಗಳಿಗೆ ಕಳಿಸಿ ಹಿಡಿತದಲ್ಲಿಟ್ಟುಕೊಳ್ಳಲು ಪಕ್ಷದ ಹೈಕಮಾಂಡ್ ಪರದಾಡುತ್ತಿದೆ. ಪಕ್ಷದ ಈ ಪರಿಸ್ಥಿತಿ ಮುಂದಿನ ಚುನಾವಣೆ ವೇಳೆಗೆ ಕರ್ನಾಟಕ ಮತ್ತು ತೆಲಂಗಾಣಗಳಿಗೂ ಬರಲಿದೆ’ ಎಂದು ಹೇಳಿದರು.</p>.<p>ರೈಲ್ವೆ ಮಾರ್ಗ: ಕುಷ್ಟಗಿ ನರಗುಂದ ಘಟಪ್ರಭ ಹೊಸ ರೈಲು ಮಾರ್ಗ ಆದರೆ ಈ ಭಾಗದ ಜನರಿಗೆ ಬಹಳಷ್ಟು ಅನುಕೂಲ ಆಗಲಿದೆ ಎಂದ ಬಸವರಾಜ ಬೊಮ್ಮಾಯಿ, ಈ ವಿಷಯದಲ್ಲಿ ತಾವು ಮತ್ತು ಬಾಗಲಕೋಟೆ ಸಂಸದ ಗದ್ದಿಗೌಡರ ಹಾಗೂ ಇತರೆ ಸಂಸದರಿಂದಲೂ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿರುವುದಾಗಿ ಬೊಮ್ಮಾಯಿ ತಿಳಿಸಿದರು.</p>.<p>ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಹಾಲಪ್ಪ ಆಚಾರ, ಬಿಜೆಪಿ ಅಧ್ಯಕ್ಷ ಮಹಾಂತೇಶ ಬದಾಮಿ, ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ, ಕೆ.ಮಹೇಶ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>