ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ ಘರ್ಷಣೆ: ಆರು ತಂಡ ರಚನೆ-10 ಮಂದಿ ಬಂಧನ

Last Updated 12 ಆಗಸ್ಟ್ 2022, 21:39 IST
ಅಕ್ಷರ ಗಾತ್ರ

ಕನಕಗರಿ: ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿ, 15 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

‘ವಶಪಡಿಸಿಕೊಂಡ ಕೆಲವರ ನಡೆ ಅನುಮಾನಾಸ್ಪದಾಗಿದ್ದು, ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರ ಆರು ತಂಡ ರಚಿಸಲಾಗಿದೆ‘ ಎಂದು ಜಿಲ್ಲಾ ಪೊಲೀಸ್ಅರುಣಾಂಗ್ಷು ಗಿರಿ ತಿಳಿಸಿದರು.

‘ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ. ನಿಜವಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗುವುದು. ತಪ್ಪಿತಸ್ಥರು ಅಲ್ಲದವರನ್ನು ಬಿಡುಗಡೆ ಮಾಡಲಾಗುವುದು’ ಎಂದರು.

ಊರು ತೊರೆದ ಗ್ರಾಮಸ್ಥರು: ಗ್ರಾಮದಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಂಧನದ ಭೀತಿಯಿಂದ ವೃದ್ಧರು ಮತ್ತು ಮಹಿಳೆಯರು ಹೊರತು ಪಡಿಸಿ ಬಹುತೇಕ ಜನರು ಗ್ರಾಮ ತೊರೆದಿದ್ದಾರೆ. ಕೆಲ ಮಹಿಳೆಯರು ತವರು ಮನೆಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT