<p>ಕನಕಗಿರಿ: ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿ.ಜೆ.ರಾಮಚಂದ್ರ ಅವರು, ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ರೋಗಿಗಳ ಆಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ‘ಕರ್ತವ್ಯದ ಸಮಯದಲ್ಲಿ ವೈದ್ಯರು ಇರಲಿಲ್ಲ. ರೋಗಿಗಳು ತಪಾಸಣೆಗಾಗಿ ಕಾದು ಸಾಕಾಗಿ ಕುರ್ಚಿಯಲ್ಲಿ ಮಲಗಿದ್ದರು’ ಎಂದು ತಿಳಿಸಿದರು.</p>.<p>ಸ್ತ್ರೀರೋಗ ತಜ್ಞ ಡಾ.ಈಶ್ವರ ಸವಡಿ ಮಾ.16ರಂದು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಆದರೆ ಇಲ್ಲಿವರೆಗೆ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕುರಿತು ಡಾ.ಸವಡಿ ಅವರಿಗೆ ದೂರವಾಣಿ ಕರೆ ಮಾಡಿದ ತನುಶ್ರೀ ಅವರು, ‘ವರ್ಗಾವಣೆಗೊಂಡು 10 ದಿನಗಳಾದರೂ ಒಂದು ದಿನವೂ ಕೆಲಸ ಮಾಡಿಲ್ಲ ಏಕೆ’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಡಾ.ಸವಡಿ ಅವರು, ‘ಮೇಲಧಿಕಾರಿಗಳ ಸೂಚನೆ ಮೇರೆಗೆ ವಿವಿಧೆಡೆ ನಡೆಯುವ ಆರೋಗ್ಯ ಶಿಬಿರದಲ್ಲಿ ಭಾಗವಹಿಸುತ್ತಿದ್ದೇನೆ. ಅಧಿಕಾರಿಗಳು ಆಸ್ಪತ್ರೆಯಲ್ಲಿಯೇ ಉಳಿದು ಕೆಲಸ ಮಾಡಿ ಎಂದು ಸೂಚನೆ ನೀಡಿದರೆ, ಇಲ್ಲಿಯೇ ಕೆಲಸ ಮಾಡುತ್ತೇನೆ’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದ ತನುಶ್ರೀ, ‘ಮಹಿಳೆಯರು ಹಾಗೂ ಇತರೆ ರೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಡಾ.ಸವಡಿ ಅವರನ್ನು ಶಿಬಿರಗಳ ಬದಲಾಗಿ ಇಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಸೇವೆಗೆ ಆದೇಶ ಮಾಡಬೇಕು ಎಂದು ಕೋರಿದರು.</p>.<p>ಚುಚ್ಚುಮದ್ದು ತಜ್ಞೆ ಡಾ.ಸುಜಾತಾ ಎಂಬುವವರು ಸಹ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಸ್ಪತ್ರೆಗೆ ಬರುವುದು ಅಪರೂಪವಾಗಿದೆ. ಹೀಗಾದರೆ ಬಡವರ ಆರೋಗ್ಯದ ಗತಿ ಏನು? ಎಂದು ಖಾರವಾಗಿ ಪ್ರಶ್ನಿಸಿದರು. ಆರೋಗ್ಯ ಕೇಂದ್ರದಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಆಸ್ಪತ್ರೆಯಲ್ಲಿ ಸೊಳ್ಳೆಗಳ ಕಾಟವಿದೆ. ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದು ಸೂಚಿಸಿದರು.</p>.<p>ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವೆಂಕೋಬ ಭೋವಿ, ರಾಜು ಬೆಲ್ಲಂಕೊಂಡಿಮಠ, ಸಾಧಿಕಪಾಷ ಬೀಡಿ, ಹನುಮೇಶ ವಾಲೇಕಾರ ಇತರರು ಇದ್ದರು.</p>.<p>ಶುಕ್ರವಾರ ಆಸ್ಪತ್ರೆಯಲ್ಲಿ ಡಾ.ಶರಣೇಗೌಡ ಹೇರೂರು ಹಾಗೂ ಇತರೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಊಟದ ಸಮಯದಲ್ಲಿ ಭೇಟಿ ನೀಡಿದಾಗ ಇತರೆ ಸಿಬ್ಬಂದಿಯೂ ಇರಲಿಲ್ಲ. ಹೀಗಾಗಿ ಕುರ್ಚಿಯಲ್ಲಿ ರೋಗಿಗಳು ವಿಶ್ರಾಂತಿಗಾಗಿ ಮಲಗಿದ್ದಾರೆ ಎಂದು ಹೆಸರು ಹೇಳಲು ಬಯಸದ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-35-1183646878</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿ.ಜೆ.ರಾಮಚಂದ್ರ ಅವರು, ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ರೋಗಿಗಳ ಆಹವಾಲು ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ‘ಕರ್ತವ್ಯದ ಸಮಯದಲ್ಲಿ ವೈದ್ಯರು ಇರಲಿಲ್ಲ. ರೋಗಿಗಳು ತಪಾಸಣೆಗಾಗಿ ಕಾದು ಸಾಕಾಗಿ ಕುರ್ಚಿಯಲ್ಲಿ ಮಲಗಿದ್ದರು’ ಎಂದು ತಿಳಿಸಿದರು.</p>.<p>ಸ್ತ್ರೀರೋಗ ತಜ್ಞ ಡಾ.ಈಶ್ವರ ಸವಡಿ ಮಾ.16ರಂದು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಆದರೆ ಇಲ್ಲಿವರೆಗೆ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕುರಿತು ಡಾ.ಸವಡಿ ಅವರಿಗೆ ದೂರವಾಣಿ ಕರೆ ಮಾಡಿದ ತನುಶ್ರೀ ಅವರು, ‘ವರ್ಗಾವಣೆಗೊಂಡು 10 ದಿನಗಳಾದರೂ ಒಂದು ದಿನವೂ ಕೆಲಸ ಮಾಡಿಲ್ಲ ಏಕೆ’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಡಾ.ಸವಡಿ ಅವರು, ‘ಮೇಲಧಿಕಾರಿಗಳ ಸೂಚನೆ ಮೇರೆಗೆ ವಿವಿಧೆಡೆ ನಡೆಯುವ ಆರೋಗ್ಯ ಶಿಬಿರದಲ್ಲಿ ಭಾಗವಹಿಸುತ್ತಿದ್ದೇನೆ. ಅಧಿಕಾರಿಗಳು ಆಸ್ಪತ್ರೆಯಲ್ಲಿಯೇ ಉಳಿದು ಕೆಲಸ ಮಾಡಿ ಎಂದು ಸೂಚನೆ ನೀಡಿದರೆ, ಇಲ್ಲಿಯೇ ಕೆಲಸ ಮಾಡುತ್ತೇನೆ’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದ ತನುಶ್ರೀ, ‘ಮಹಿಳೆಯರು ಹಾಗೂ ಇತರೆ ರೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಡಾ.ಸವಡಿ ಅವರನ್ನು ಶಿಬಿರಗಳ ಬದಲಾಗಿ ಇಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಸೇವೆಗೆ ಆದೇಶ ಮಾಡಬೇಕು ಎಂದು ಕೋರಿದರು.</p>.<p>ಚುಚ್ಚುಮದ್ದು ತಜ್ಞೆ ಡಾ.ಸುಜಾತಾ ಎಂಬುವವರು ಸಹ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಸ್ಪತ್ರೆಗೆ ಬರುವುದು ಅಪರೂಪವಾಗಿದೆ. ಹೀಗಾದರೆ ಬಡವರ ಆರೋಗ್ಯದ ಗತಿ ಏನು? ಎಂದು ಖಾರವಾಗಿ ಪ್ರಶ್ನಿಸಿದರು. ಆರೋಗ್ಯ ಕೇಂದ್ರದಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಆಸ್ಪತ್ರೆಯಲ್ಲಿ ಸೊಳ್ಳೆಗಳ ಕಾಟವಿದೆ. ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದು ಸೂಚಿಸಿದರು.</p>.<p>ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವೆಂಕೋಬ ಭೋವಿ, ರಾಜು ಬೆಲ್ಲಂಕೊಂಡಿಮಠ, ಸಾಧಿಕಪಾಷ ಬೀಡಿ, ಹನುಮೇಶ ವಾಲೇಕಾರ ಇತರರು ಇದ್ದರು.</p>.<p>ಶುಕ್ರವಾರ ಆಸ್ಪತ್ರೆಯಲ್ಲಿ ಡಾ.ಶರಣೇಗೌಡ ಹೇರೂರು ಹಾಗೂ ಇತರೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಊಟದ ಸಮಯದಲ್ಲಿ ಭೇಟಿ ನೀಡಿದಾಗ ಇತರೆ ಸಿಬ್ಬಂದಿಯೂ ಇರಲಿಲ್ಲ. ಹೀಗಾಗಿ ಕುರ್ಚಿಯಲ್ಲಿ ರೋಗಿಗಳು ವಿಶ್ರಾಂತಿಗಾಗಿ ಮಲಗಿದ್ದಾರೆ ಎಂದು ಹೆಸರು ಹೇಳಲು ಬಯಸದ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-35-1183646878</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>