<p><strong>ಕೊಪ್ಪಳ:</strong> ಆಗಸ್ಟ್ 3ರಂದು ವಾಲ್ಮೀಕಿ ಸಮುದಾಯದ ಗವಿಸಿದ್ಧಪ್ಪ ನಾಯಕ ಅವರನ್ನು ಮುಸ್ಲಿಂ ಯುವಕ ಕೊಲೆ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<p>ಕೊಲೆಯಾದ ಯುವಕನ ಪೋಷಕರ ಮನವಿ ಮೇರೆಗೆ ವ್ಯಾಪಾರಿಗಳು ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾದರು. ಮೆರವಣಿಯಲ್ಲಿ ಸಾವಿರಾರು ಜನ ಸೇರಿದ್ದರು.</p>.<p>ಮಾಜಿ ಸಚಿವ ರಾಜೂಗೌಡ ನಾಯಕ ಮಾತನಾಡಿ, ‘ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮುದಾಯ ಮಾತ್ರವಲ್ಲ; ಕೊಪ್ಪಳದ ಸಮಸ್ತ ಹಿಂದೂಗಳು ಭಾಗಿಯಾಗಿದ್ದರಿಂದ ಸಮಾಜದ ಶಕ್ತಿ ಸಾಬೀತಾಗಿದೆ. ಯುವಕನನ್ನು ಸುಪಾರಿ ನೀಡಿ ಕೊಲೆ ಮಾಡಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಮುಂಜಾಗ್ರತೆಯಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದು, ಬಳ್ಳಾರಿ ವಲಯದ ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ಭದ್ರತಾ ವ್ಯವಸ್ಥೆ ನೇತೃತ್ವ ವಹಿಸಿದ್ದರು.</p>.<div><div class="bigfact-title"><strong>ಬಾಲಮಂದಿರಕ್ಕೆ ಬಾಲಕಿ:</strong></div><div class="bigfact-description"><strong>ಕೊಲೆ ಪ್ರಕರಣದಲ್ಲಿ ಕೇಳಿಬಂದಿದ್ದ, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕಿಯನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಬಾಲ<br>ಮಂದಿರದಲ್ಲಿ ಇರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಕೊಲೆಯಾದ ಯುವಕನ ತಂದೆ ಈ ಬಗ್ಗೆ ದೂರು ನೀಡಿದ್ದರು.</strong></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಆಗಸ್ಟ್ 3ರಂದು ವಾಲ್ಮೀಕಿ ಸಮುದಾಯದ ಗವಿಸಿದ್ಧಪ್ಪ ನಾಯಕ ಅವರನ್ನು ಮುಸ್ಲಿಂ ಯುವಕ ಕೊಲೆ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.</p>.<p>ಕೊಲೆಯಾದ ಯುವಕನ ಪೋಷಕರ ಮನವಿ ಮೇರೆಗೆ ವ್ಯಾಪಾರಿಗಳು ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾದರು. ಮೆರವಣಿಯಲ್ಲಿ ಸಾವಿರಾರು ಜನ ಸೇರಿದ್ದರು.</p>.<p>ಮಾಜಿ ಸಚಿವ ರಾಜೂಗೌಡ ನಾಯಕ ಮಾತನಾಡಿ, ‘ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮುದಾಯ ಮಾತ್ರವಲ್ಲ; ಕೊಪ್ಪಳದ ಸಮಸ್ತ ಹಿಂದೂಗಳು ಭಾಗಿಯಾಗಿದ್ದರಿಂದ ಸಮಾಜದ ಶಕ್ತಿ ಸಾಬೀತಾಗಿದೆ. ಯುವಕನನ್ನು ಸುಪಾರಿ ನೀಡಿ ಕೊಲೆ ಮಾಡಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಮುಂಜಾಗ್ರತೆಯಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದು, ಬಳ್ಳಾರಿ ವಲಯದ ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ಭದ್ರತಾ ವ್ಯವಸ್ಥೆ ನೇತೃತ್ವ ವಹಿಸಿದ್ದರು.</p>.<div><div class="bigfact-title"><strong>ಬಾಲಮಂದಿರಕ್ಕೆ ಬಾಲಕಿ:</strong></div><div class="bigfact-description"><strong>ಕೊಲೆ ಪ್ರಕರಣದಲ್ಲಿ ಕೇಳಿಬಂದಿದ್ದ, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕಿಯನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಬಾಲ<br>ಮಂದಿರದಲ್ಲಿ ಇರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಕೊಲೆಯಾದ ಯುವಕನ ತಂದೆ ಈ ಬಗ್ಗೆ ದೂರು ನೀಡಿದ್ದರು.</strong></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>