<p><strong>ಮುನಿರಾಬಾದ್:</strong> ಇಲ್ಲಿನ ಹುಲಿಗಿ-ಮುನಿರಾಬಾದ್ ರೈಲು ನಿಲ್ದಾಣ ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯ ಅಡಿ ಅಭಿವೃದ್ಧಿ ಹೊಂದಿದ್ದರೂ ಇನ್ನೂ ಕೆಲವು ಸಮಸ್ಯೆಗಳಿದ್ದು ಕ್ರಮ ಕೈಗೊಳ್ಳಲು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.</p>.<p>ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ, ಶಕ್ತಿಪೀಠ ಹುಲಿಗೆಮ್ಮ ದೇವಿಯ ದೇವಸ್ಥಾನ ಹೊಂದಿರುವ ಈ ಗ್ರಾಮಕ್ಕೆ ಸಾವಿರಾರು ಭಕ್ತರು ಶುಕ್ರವಾರ, ಮಂಗಳವಾರ, ಹುಣ್ಣಿಮೆ ಮತ್ತು ಜಾತ್ರೆ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ದೇವಿಯ ದರ್ಶನಕ್ಕೆ ರೈಲಿನ ಮೂಲಕ ಬರುತ್ತಾರೆ.</p>.<p>ನಿಲ್ದಾಣ ಅಭಿವೃದ್ಧಿಗೊಂಡರೂ 1ನೇ ಪ್ಲಾಟ್ ಫಾರ್ಮ್ನಲ್ಲಿ ಪ್ರಯಾಣಿಕರಿಗೆ ಸಾಮಾನ್ಯ ಮೂತ್ರಾಲಯಗಳಿಲ್ಲ. 2ನೇ ಪ್ಲಾಟ್ ಫಾರ್ಮ್ನಲ್ಲಿ ಮೂತ್ರಾಲಯ, ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಕೂಡ ಆಗಿಲ್ಲ.</p>.<p>ಇನ್ನು ಲಿಫ್ಟ್ ವ್ಯವಸ್ಥೆ ನಿರ್ಮಾಣವಾಗಿದ್ದರೂ ಇನ್ನು ಪ್ರಯಾಣಿಕರ ಬಳಕೆಗೆ ಸಿಗುತ್ತಿಲ್ಲ. ನಿಲ್ದಾಣದಲ್ಲಿ ಖಾಲಿ ಜನ ಆಸನಗಳ ಮೇಲೆ ಮಲಗಿಕೊಂಡಿರುತ್ತಾರೆ. ಇದರಿಂದ ರೈಲು ಪ್ರಯಾಣಿಕರಿಗೆ ಕೂಡಲು ಸ್ಥಳಾವಕಾಶ ದೊರೆಯುತ್ತಿಲ್ಲ, ಇದರ ನಿಯಂತ್ರಣಕ್ಕೆ ಕಾಯಂ ರೈಲ್ವೆ ಪೊಲೀಸರ ಅಗತ್ಯವಿದೆ ಎನ್ನುತ್ತಾರೆ ಗ್ರಾಮದ ರಾಘವೇಂದ್ರ ಕುಲಕರ್ಣಿ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-35-1839916451</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನಿರಾಬಾದ್:</strong> ಇಲ್ಲಿನ ಹುಲಿಗಿ-ಮುನಿರಾಬಾದ್ ರೈಲು ನಿಲ್ದಾಣ ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯ ಅಡಿ ಅಭಿವೃದ್ಧಿ ಹೊಂದಿದ್ದರೂ ಇನ್ನೂ ಕೆಲವು ಸಮಸ್ಯೆಗಳಿದ್ದು ಕ್ರಮ ಕೈಗೊಳ್ಳಲು ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.</p>.<p>ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ, ಶಕ್ತಿಪೀಠ ಹುಲಿಗೆಮ್ಮ ದೇವಿಯ ದೇವಸ್ಥಾನ ಹೊಂದಿರುವ ಈ ಗ್ರಾಮಕ್ಕೆ ಸಾವಿರಾರು ಭಕ್ತರು ಶುಕ್ರವಾರ, ಮಂಗಳವಾರ, ಹುಣ್ಣಿಮೆ ಮತ್ತು ಜಾತ್ರೆ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ದೇವಿಯ ದರ್ಶನಕ್ಕೆ ರೈಲಿನ ಮೂಲಕ ಬರುತ್ತಾರೆ.</p>.<p>ನಿಲ್ದಾಣ ಅಭಿವೃದ್ಧಿಗೊಂಡರೂ 1ನೇ ಪ್ಲಾಟ್ ಫಾರ್ಮ್ನಲ್ಲಿ ಪ್ರಯಾಣಿಕರಿಗೆ ಸಾಮಾನ್ಯ ಮೂತ್ರಾಲಯಗಳಿಲ್ಲ. 2ನೇ ಪ್ಲಾಟ್ ಫಾರ್ಮ್ನಲ್ಲಿ ಮೂತ್ರಾಲಯ, ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಕೂಡ ಆಗಿಲ್ಲ.</p>.<p>ಇನ್ನು ಲಿಫ್ಟ್ ವ್ಯವಸ್ಥೆ ನಿರ್ಮಾಣವಾಗಿದ್ದರೂ ಇನ್ನು ಪ್ರಯಾಣಿಕರ ಬಳಕೆಗೆ ಸಿಗುತ್ತಿಲ್ಲ. ನಿಲ್ದಾಣದಲ್ಲಿ ಖಾಲಿ ಜನ ಆಸನಗಳ ಮೇಲೆ ಮಲಗಿಕೊಂಡಿರುತ್ತಾರೆ. ಇದರಿಂದ ರೈಲು ಪ್ರಯಾಣಿಕರಿಗೆ ಕೂಡಲು ಸ್ಥಳಾವಕಾಶ ದೊರೆಯುತ್ತಿಲ್ಲ, ಇದರ ನಿಯಂತ್ರಣಕ್ಕೆ ಕಾಯಂ ರೈಲ್ವೆ ಪೊಲೀಸರ ಅಗತ್ಯವಿದೆ ಎನ್ನುತ್ತಾರೆ ಗ್ರಾಮದ ರಾಘವೇಂದ್ರ ಕುಲಕರ್ಣಿ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-35-1839916451</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>