ಕಾರಟಗಿ: ಪಟ್ಟಣದ 7ನೇ ವಾರ್ಡಿನಲ್ಲಿರುವ ಐತಿಹಾಸಿಕ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ದೇವಿಯ ಮಾಂಗಲ್ಯವನ್ನೇ ಕಳ್ಳರು ದೋಚಿದ್ದಾರೆ.
ಈ ದೇವಸ್ಥಾನ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದ್ದು ಬೀಗ ಮುರಿದು ಕಳ್ಳತನ ನಡೆಸಲಾಗಿದೆ. ಕಳವು ಆಗಿರುವ ಮಾಂಗಲ್ಯದ ಮೌಲ್ಯ ₹10 ಸಾವಿರ ಎಂದು ಅಂದಾಜಿಸಲಾಗಿದೆ. ಕೃತ್ಯ ಎಸಗುವ ಮೊದಲು ಕಳ್ಳರು ದೀಪಹಚ್ಚಿ ಪೂಜೆ ಸಲ್ಲಿಸಿರುವುದು ಕಂಡುಬಂದಿದೆ.
ಎಎಸ್ಐ ಬೋರಣ್ಣ, ಕಂದಾಯ ನಿರೀಕ್ಷಕಿ ಸಂಗಮ್ಮ ಹಿರೇಮಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.