<p><strong>ಕೊಪ್ಪಳ:</strong> ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದ ಬಳಿ ಇತ್ತೀಚೆಗೆ ನಡೆದಿದ್ದ ಇಬ್ಬರು ಯುವತಿಯರ ಮೇಲಿನ ಅತ್ಯಾಚಾರ ಮತ್ತು ಹಲ್ಲೆ ಪ್ರಕರಣದ ಮೂರನೇ ಆರೋಪಿ ಗಂಗಾವತಿಯ ಶರಣಬಸವರಾಜ ಎಂಬಾತ ಘಟನೆ ನಡೆದ ಬಳಿಕ ಉಟ್ಟ ಬಟ್ಟೆಯಲ್ಲಿಯೇ ರಾತ್ರೋ ರಾತ್ರಿ ಊರು ಬಿಟ್ಟಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ.</p>.<p>ಘಟನೆ ನಡೆದ ಮರುದಿನವೇ ಮಲ್ಲೇಶ ಹಂದಿ ಮತ್ತು ಚೇತನಸಾಯಿ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಿಂದ ಗಾಬರಿಗೆ ಒಳಗಾಗಿದ್ದ ಶರಣಬಸವರಾಜ ತನ್ನ ಬಳಿಯಿದ್ದ ಅಲ್ಪ ಹಣದಲ್ಲಿಯೇ ರಾಯಚೂರಿಗೆ ಹೋಗಿ ಸಂಬಂಧಿಕರಿಂದ ಬೇರೊಬ್ಬರ ಮೊಬೈಲ್ಗೆ ಹಣ ಹಾಕಿಸಿಕೊಂಡು ಅಲ್ಲಿಂದ ತಮಿಳುನಾಡಿನ ವೇಲೂರಿಗೆ ತೆರಳಿದ್ದ. ಆತನ ಬಳಿ ಫೋನ್ ಇಲ್ಲದಿದ್ದರೂ ಅವರ ಆಪ್ತರು, ಕುಟುಂಬದವರಿಗೆ ಬರುತ್ತಿದ್ದ ಫೋನ್ ಕರೆಗಳ ಮೇಲೆ ಕಣ್ಗಾವಲು ಇಟ್ಟು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಇಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.</p>.<p>‘ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದು ಸಾಬೀತಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮದ್ಯ ಸೇವಿಸಿದ ನಶೆಯಲ್ಲಿದ್ದ ಆರೋಪಿಗಳು, ₹100 ನೀಡುವಂತೆ ಪ್ರವಾಸಿಗರನ್ನು ಕೇಳಿದ್ದರು. ಕೇವಲ ₹20 ಕೊಟ್ಟಿದ್ದಕ್ಕೆ ಸಿಟ್ಟಾಗಿದ್ದರು. ಈ ಕಾರಣಕ್ಕೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ, ಒಡಿಶಾದ ಯುವಕನ ಬಳಿ ಇದ್ದ ಎರಡು ಮೊಬೈಲ್ ಮತ್ತು ಹಣ ಕಿತ್ತುಕೊಂಡು ಕಾಲುವೆಗೆ ತಳ್ಳಿದ್ದರು’ ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಇದ್ದರು. </p>.ಸಾಣಾಪುರ | ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರ ಬಂಧನ.ಅತ್ಯಾಚಾರ ಘಟನೆ: ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ ಕೊಪ್ಪಳ ಪೊಲೀಸ್.ಅತ್ಯಾಚಾರ ಪ್ರಕರಣ: ಗಂಗಾವತಿ ರೆಸಾರ್ಟ್ಗಳ ಮಾಲೀಕರಿಗೆ ಕಟ್ಟೆಚ್ಚರ.ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ: ಹೇಯ ಕೃತ್ಯ ಮರುಕಳಿಸದಂತೆ ಎಚ್ಚರ;CM.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದ ಬಳಿ ಇತ್ತೀಚೆಗೆ ನಡೆದಿದ್ದ ಇಬ್ಬರು ಯುವತಿಯರ ಮೇಲಿನ ಅತ್ಯಾಚಾರ ಮತ್ತು ಹಲ್ಲೆ ಪ್ರಕರಣದ ಮೂರನೇ ಆರೋಪಿ ಗಂಗಾವತಿಯ ಶರಣಬಸವರಾಜ ಎಂಬಾತ ಘಟನೆ ನಡೆದ ಬಳಿಕ ಉಟ್ಟ ಬಟ್ಟೆಯಲ್ಲಿಯೇ ರಾತ್ರೋ ರಾತ್ರಿ ಊರು ಬಿಟ್ಟಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ.</p>.<p>ಘಟನೆ ನಡೆದ ಮರುದಿನವೇ ಮಲ್ಲೇಶ ಹಂದಿ ಮತ್ತು ಚೇತನಸಾಯಿ ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಿಂದ ಗಾಬರಿಗೆ ಒಳಗಾಗಿದ್ದ ಶರಣಬಸವರಾಜ ತನ್ನ ಬಳಿಯಿದ್ದ ಅಲ್ಪ ಹಣದಲ್ಲಿಯೇ ರಾಯಚೂರಿಗೆ ಹೋಗಿ ಸಂಬಂಧಿಕರಿಂದ ಬೇರೊಬ್ಬರ ಮೊಬೈಲ್ಗೆ ಹಣ ಹಾಕಿಸಿಕೊಂಡು ಅಲ್ಲಿಂದ ತಮಿಳುನಾಡಿನ ವೇಲೂರಿಗೆ ತೆರಳಿದ್ದ. ಆತನ ಬಳಿ ಫೋನ್ ಇಲ್ಲದಿದ್ದರೂ ಅವರ ಆಪ್ತರು, ಕುಟುಂಬದವರಿಗೆ ಬರುತ್ತಿದ್ದ ಫೋನ್ ಕರೆಗಳ ಮೇಲೆ ಕಣ್ಗಾವಲು ಇಟ್ಟು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಇಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.</p>.<p>‘ಮೂರನೇ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದು ಸಾಬೀತಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮದ್ಯ ಸೇವಿಸಿದ ನಶೆಯಲ್ಲಿದ್ದ ಆರೋಪಿಗಳು, ₹100 ನೀಡುವಂತೆ ಪ್ರವಾಸಿಗರನ್ನು ಕೇಳಿದ್ದರು. ಕೇವಲ ₹20 ಕೊಟ್ಟಿದ್ದಕ್ಕೆ ಸಿಟ್ಟಾಗಿದ್ದರು. ಈ ಕಾರಣಕ್ಕೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ, ಒಡಿಶಾದ ಯುವಕನ ಬಳಿ ಇದ್ದ ಎರಡು ಮೊಬೈಲ್ ಮತ್ತು ಹಣ ಕಿತ್ತುಕೊಂಡು ಕಾಲುವೆಗೆ ತಳ್ಳಿದ್ದರು’ ಎಂದು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಇದ್ದರು. </p>.ಸಾಣಾಪುರ | ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರ ಬಂಧನ.ಅತ್ಯಾಚಾರ ಘಟನೆ: ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ ಕೊಪ್ಪಳ ಪೊಲೀಸ್.ಅತ್ಯಾಚಾರ ಪ್ರಕರಣ: ಗಂಗಾವತಿ ರೆಸಾರ್ಟ್ಗಳ ಮಾಲೀಕರಿಗೆ ಕಟ್ಟೆಚ್ಚರ.ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ: ಹೇಯ ಕೃತ್ಯ ಮರುಕಳಿಸದಂತೆ ಎಚ್ಚರ;CM.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>