<p><strong>ಕೊಪ್ಪಳ</strong>: ನಗರದ ಪ್ರಮುಖ ವೃತ್ತ ಹಾಗೂ ಕೂಡು ರಸ್ತೆಗಳಲ್ಲಿ ಕಸ ಹಾಕುವ ಸ್ಥಳಗಳನ್ನು ಗುರುತಿಸಿರುವ ನಗರಸಭೆ ಸಿಬ್ಬಂದಿ ಪ್ರಧಾನ ಅಂಚೆ ಕಚೇರಿ ಹತ್ತಿರದ ರಸ್ತೆಯಲ್ಲಿ ಗುರುವಾರ ಕಸ ಹಾಕುವುದು ತಡೆಯಲು ರಂಗೋಲಿ ಅರಳಿಸಿ ಜಾಗೃತಿ ಮೂಡಿಸಿದರು.</p>.<p>ನಗರದ ಆರೇಳು ಕಡೆ ಇಂಥ ಸ್ಥಳಗಳನ್ನು ಗುರುತಿಸಿದ್ದು ಕಸ ಹಾಕಿದ್ದ ಅಲ್ಲಿನ ಸ್ಥಳವನ್ನು ಸ್ವಚ್ಚಗೊಳಿಸಿ ರಂಗೋಲಿ ಹಾಕಿ ಕಸ ಎಲ್ಲೆಂದರಲ್ಲಿ ಚೆಲ್ಲದಂತೆ ಜನರಿಗೆ ಮನವಿ ಮಾಡಿದರು. </p>.<p>ನಗರದಲ್ಲಿ ಮನೆ ಹಾಗೂ ಅಂಗಡಿಗಳಿಂದ ಸಂಗ್ರಹವಾಗುವ ಕಸವನ್ನು ಹಸಿ, ಒಣ, ನೈರ್ಮಲ್ಯ ತಾಜ್ಯ, ಎಲೆಕ್ಟ್ರಾನಿಕ್ ತಾಜ್ಯ, ಬಯೋಮೆಡಿಕಲ್ ತಾಜ್ಯ ಹೀಗೆ ಐದು ಬಗೆಯಲ್ಲಿ ವಿಂಗಡಿಸಿ ನೀಡುವಂತೆ ಹನ್ನೊಂದು ಮಹಿಳೆಯರು ಸಮುದಾಯ ಸಂಚಾಲಕರಾಗಿ ನೇಮಕಗೊಂಡು ಮನೆಮನೆಗೆ ತೆರಳಿ ತಿಳಿವಳಿಕೆ ಮೂಡಿಸಿದರು.</p>.<p>ಗುರುವಾರ ನಡೆದ ಬ್ಲಾಕ್ ಸ್ಪಾಟ್ ನಿರ್ಮೂಲನೆ ಕಾರ್ಯಕ್ರಮದಲ್ಲಿ ನಗರಸಭೆ ನೂತನ ಪೌರಾಯುಕ್ತ ವೆಂಕಟೇಶ ನಾಗನೂರ್, ಸದಸ್ಯರಾದ ಪರಶುರಾಮ ಮೇದಾದ, ವ್ಯವಸ್ಥಾಪಕ ಮುನಿಸ್ವಾಮಿ, ಆರೋಗ್ಯ ನಿರೀಕ್ಷಕರಾದ ಲಾಲಸಾಬ್ ಮನಿಯಾರ್, ರಾಘವೇಂದ್ರ ಚೌಹಾಣ್, ವಿಶ್ವನಾಥ ಯಾದವ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ನಗರದ ಪ್ರಮುಖ ವೃತ್ತ ಹಾಗೂ ಕೂಡು ರಸ್ತೆಗಳಲ್ಲಿ ಕಸ ಹಾಕುವ ಸ್ಥಳಗಳನ್ನು ಗುರುತಿಸಿರುವ ನಗರಸಭೆ ಸಿಬ್ಬಂದಿ ಪ್ರಧಾನ ಅಂಚೆ ಕಚೇರಿ ಹತ್ತಿರದ ರಸ್ತೆಯಲ್ಲಿ ಗುರುವಾರ ಕಸ ಹಾಕುವುದು ತಡೆಯಲು ರಂಗೋಲಿ ಅರಳಿಸಿ ಜಾಗೃತಿ ಮೂಡಿಸಿದರು.</p>.<p>ನಗರದ ಆರೇಳು ಕಡೆ ಇಂಥ ಸ್ಥಳಗಳನ್ನು ಗುರುತಿಸಿದ್ದು ಕಸ ಹಾಕಿದ್ದ ಅಲ್ಲಿನ ಸ್ಥಳವನ್ನು ಸ್ವಚ್ಚಗೊಳಿಸಿ ರಂಗೋಲಿ ಹಾಕಿ ಕಸ ಎಲ್ಲೆಂದರಲ್ಲಿ ಚೆಲ್ಲದಂತೆ ಜನರಿಗೆ ಮನವಿ ಮಾಡಿದರು. </p>.<p>ನಗರದಲ್ಲಿ ಮನೆ ಹಾಗೂ ಅಂಗಡಿಗಳಿಂದ ಸಂಗ್ರಹವಾಗುವ ಕಸವನ್ನು ಹಸಿ, ಒಣ, ನೈರ್ಮಲ್ಯ ತಾಜ್ಯ, ಎಲೆಕ್ಟ್ರಾನಿಕ್ ತಾಜ್ಯ, ಬಯೋಮೆಡಿಕಲ್ ತಾಜ್ಯ ಹೀಗೆ ಐದು ಬಗೆಯಲ್ಲಿ ವಿಂಗಡಿಸಿ ನೀಡುವಂತೆ ಹನ್ನೊಂದು ಮಹಿಳೆಯರು ಸಮುದಾಯ ಸಂಚಾಲಕರಾಗಿ ನೇಮಕಗೊಂಡು ಮನೆಮನೆಗೆ ತೆರಳಿ ತಿಳಿವಳಿಕೆ ಮೂಡಿಸಿದರು.</p>.<p>ಗುರುವಾರ ನಡೆದ ಬ್ಲಾಕ್ ಸ್ಪಾಟ್ ನಿರ್ಮೂಲನೆ ಕಾರ್ಯಕ್ರಮದಲ್ಲಿ ನಗರಸಭೆ ನೂತನ ಪೌರಾಯುಕ್ತ ವೆಂಕಟೇಶ ನಾಗನೂರ್, ಸದಸ್ಯರಾದ ಪರಶುರಾಮ ಮೇದಾದ, ವ್ಯವಸ್ಥಾಪಕ ಮುನಿಸ್ವಾಮಿ, ಆರೋಗ್ಯ ನಿರೀಕ್ಷಕರಾದ ಲಾಲಸಾಬ್ ಮನಿಯಾರ್, ರಾಘವೇಂದ್ರ ಚೌಹಾಣ್, ವಿಶ್ವನಾಥ ಯಾದವ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>