<p><strong>ಯಲಬುರ್ಗಾ</strong>: ಮೇ 24ರಂದು ಕೊಪ್ಪಳದಲ್ಲಿ ನಡೆಯಲಿರುವ ಚಿಂತನ ಮಂಥನ ಕಾರ್ಯಕ್ರಮಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ರಾಯಚೂರು ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.</p>.<p>ಪಟ್ಟಣದಲ್ಲಿ ಕಾರ್ಯಕ್ರಮ ಕುರಿತು ಆಯೋಜಿಸಿದ್ದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾಜಿ ಲೋಕಸಭೆ ಸದಸ್ಯ ವಿ.ಎಸ್.ಉಗ್ರಪ್ಪನವರು ಭಾಗವಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲಾತಿ ವಿಚಾರವಾಗಿ ಚಿಂತನಾ ಕಾರ್ಯಕ್ರಮ ಮಾತನಾಡಲಿದ್ದಾರೆ ಎಂದರು.</p>.<p>ಕೊಪ್ಪಳ ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕಾರ ವೇದಿಕೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯದವರಿಗೆ ಶೇ 56 ಮೀಸಲಾತಿಯನ್ನು ನೈನ್ ಶೆಡ್ಯೂಲ್ಗೆ ಸೇರಿಸುವುದಕ್ಕೂ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ. ಈ ಸಂಬಂಧ ಮಧ್ಯಾಹ್ನ 12ಗಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಬಳಿಕ ಮಧ್ಯಾಹ್ನ 12.30 ಗಂಟೆಗೆ ಬಹಿರಂಗ ಸಭೆ ಹಾಗೂ ಚಿಂತನಾ ಮಂಥನ ಜರುಗಲಿದೆ ಎಂದರು.</p>.<p>ಪ.ಪಂ ಮಾಜಿ ಸದಸ್ಯ ಕಳಕಪ್ಪ ತಳವಾರ, ಸಂಘದ ಉಪಾಧ್ಯಕ್ಷ ನಾಗೇಂದ್ರ ನಾಯಕ, ಮುದುಕಪ್ಪ ಆಡಿನ್, ಲಕ್ಷ್ಮಣ್ ಕುಲಕರ್ಣಿ, ರಾಮಣ್ಣ ತಳವಾರ, ಭೀಮಪ್ಪ ಹವಳಿ, ರಾಮಣ್ಣ ಮಾಲಿ, ಶರಣು ಆಡಿನ್, ದೇವಪ್ಪ ಮುದೆನೂರ್, ಮಾದೇವಪ್ಪ ಮುರಾರಿ ಕನಕಪ್ಪ ವಾಲ್ಮೀಕಿ, ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-1496391874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ಮೇ 24ರಂದು ಕೊಪ್ಪಳದಲ್ಲಿ ನಡೆಯಲಿರುವ ಚಿಂತನ ಮಂಥನ ಕಾರ್ಯಕ್ರಮಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ರಾಯಚೂರು ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.</p>.<p>ಪಟ್ಟಣದಲ್ಲಿ ಕಾರ್ಯಕ್ರಮ ಕುರಿತು ಆಯೋಜಿಸಿದ್ದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾಜಿ ಲೋಕಸಭೆ ಸದಸ್ಯ ವಿ.ಎಸ್.ಉಗ್ರಪ್ಪನವರು ಭಾಗವಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲಾತಿ ವಿಚಾರವಾಗಿ ಚಿಂತನಾ ಕಾರ್ಯಕ್ರಮ ಮಾತನಾಡಲಿದ್ದಾರೆ ಎಂದರು.</p>.<p>ಕೊಪ್ಪಳ ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕಾರ ವೇದಿಕೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯದವರಿಗೆ ಶೇ 56 ಮೀಸಲಾತಿಯನ್ನು ನೈನ್ ಶೆಡ್ಯೂಲ್ಗೆ ಸೇರಿಸುವುದಕ್ಕೂ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ. ಈ ಸಂಬಂಧ ಮಧ್ಯಾಹ್ನ 12ಗಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಬಳಿಕ ಮಧ್ಯಾಹ್ನ 12.30 ಗಂಟೆಗೆ ಬಹಿರಂಗ ಸಭೆ ಹಾಗೂ ಚಿಂತನಾ ಮಂಥನ ಜರುಗಲಿದೆ ಎಂದರು.</p>.<p>ಪ.ಪಂ ಮಾಜಿ ಸದಸ್ಯ ಕಳಕಪ್ಪ ತಳವಾರ, ಸಂಘದ ಉಪಾಧ್ಯಕ್ಷ ನಾಗೇಂದ್ರ ನಾಯಕ, ಮುದುಕಪ್ಪ ಆಡಿನ್, ಲಕ್ಷ್ಮಣ್ ಕುಲಕರ್ಣಿ, ರಾಮಣ್ಣ ತಳವಾರ, ಭೀಮಪ್ಪ ಹವಳಿ, ರಾಮಣ್ಣ ಮಾಲಿ, ಶರಣು ಆಡಿನ್, ದೇವಪ್ಪ ಮುದೆನೂರ್, ಮಾದೇವಪ್ಪ ಮುರಾರಿ ಕನಕಪ್ಪ ವಾಲ್ಮೀಕಿ, ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-35-1496391874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>