<p><strong>ಕೊಪ್ಪಳ:</strong> ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐದೂ ಜನ ಒಂದೇ ಕುಟುಂಬದವರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ವರ್ಷದ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರವಾಗಿದೆ.</p>.<p>ಸ್ಕಾರ್ಪಿಯೊ ವಾಹನದಲ್ಲಿದ್ದ ಒಟ್ಟು ಒಂಬತ್ತು ಜನರ ಪೈಕಿ ಐದು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಲ್ಲವಿ (28), ಪುಟ್ಟರಾಜು (7), ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ಪುಟ್ಟರಾಜು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಕಾರಣ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<p><strong>ಮೃತದೇಹ ಹೊರೆತೆಗೆಯಲು ಸಾಹಸ: </strong>ವಾಹನದಲ್ಲಿ ಸಿಲುಕಿದ್ದ ಐದು ಜನರ ಮೃತ ದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಮಾಡಿದರು.</p>.<p>ಕೆಲವರ ಕೈ ಹಾಗೂ ಕಾಲುಗಳು ವಾಹನಗಳ ಒಳಗೆ ಸಿಲುಕಿದ್ದವು. ಸುಮಾರು ಒಂದು ತಾಸು ಕಾರ್ಯಾಚರಣೆ ನಡೆಸಿದ ಬಳಿಕ ಮೃತದೇಹಗಳನ್ನು ಹೊರತಗೆಯಲಾಯಿತು. ಬಳಿಕ ಕುಕನೂರು ತಾಲ್ಲೂಕು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. </p>.<p><strong>ಓದಿ...<a href="https://www.prajavani.net/district/koppal/horrible-road-accident-near-koppal-six-people-dead-957070.html" target="_blank">ಕುಕನೂರು ಸಮೀಪ ಭೀಕರ ರಸ್ತೆ ಅಪಘಾತ: ಐದು ಮಂದಿ ದಾರುಣ ಸಾವು</a></strong> </p>.<p><strong>ಆಗಿದ್ದೇನು:</strong> ಕೊಪ್ಪಳದಲ್ಲಿ ಸದ್ಯ ಪೊಲೀಸ್ ಇಲಾಖೆಯ ಡಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶರಣಪ್ಪ ಕೊಪ್ಪದ ಅವರ ಮೊಮ್ಮಗಳ (ಮಗನ ಮಗಳು) ಜನ್ಮದಿನದ ಕಾರ್ಯಕ್ರಮ ನಗರದ ಹೋಟೆಲ್ವೊಂದರಲ್ಲಿ ಆಯೋಜಿಸಲಾಗಿತ್ತು.</p>.<p>ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವ ಗ್ರಾಮ ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಘಟನೆ ಹೇಗಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.</p>.<p>ಅಪಘಾತದಲ್ಲಿ ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮದ ಗಿರಿಜವ್ವ ಕೊಪ್ಪದ (48), ದೇವಪ್ಪ ಕೊಪ್ಪದ (54), ಪಾರವ್ವ ಬೀರಪ್ಪ ಹಲಗೇರಿ (27), ಶಾಂತವ್ವ ಹನಮಂತಪ್ಪ ಗುಡ್ಲಾನೂರ (34) ಹಾಗೂ ಕಸ್ತೂರೆವ್ವ ನಾಗನಗೌಡ (20) ಮೃತಪಟ್ಟಿದ್ದಾರೆ.</p>.<p>ಪುಟ್ಟರಾಜ ಹಲಗೇರಿ (8), ಭೂಮಿಕಾ ಹಲಗೇರಿ (5), ಪಲ್ಲವಿ ಕರಿಗಾರ (20), ಬಸವರಾಜ ಹಲಗೇರಿ ಹಾಗೂ ಚಾಲಕ ಹರ್ಷವರ್ಧನ ಚನ್ನಳ್ಳಿ ಗಾಯಗೊಂಡಿದ್ದಾರೆ.</p>.<p>ಓದಿ...<a href="https://www.prajavani.net/district/koppal/horrible-road-accident-near-koppal-five-people-dead-on-the-spot-957098.html" target="_blank">ಕೊಪ್ಪಳ | ಮನೆ ಸ್ಮಶಾನವಾಗಿ ಹೋಯ್ತು, ದೇವರಿಗೆ ಕರುಣೆಯೇ ಇಲ್ಲ: ಕುಟುಂಬದ ಆಕ್ರಂದನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐದೂ ಜನ ಒಂದೇ ಕುಟುಂಬದವರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ವರ್ಷದ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರವಾಗಿದೆ.</p>.<p>ಸ್ಕಾರ್ಪಿಯೊ ವಾಹನದಲ್ಲಿದ್ದ ಒಟ್ಟು ಒಂಬತ್ತು ಜನರ ಪೈಕಿ ಐದು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಲ್ಲವಿ (28), ಪುಟ್ಟರಾಜು (7), ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ಪುಟ್ಟರಾಜು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಕಾರಣ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<p><strong>ಮೃತದೇಹ ಹೊರೆತೆಗೆಯಲು ಸಾಹಸ: </strong>ವಾಹನದಲ್ಲಿ ಸಿಲುಕಿದ್ದ ಐದು ಜನರ ಮೃತ ದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಮಾಡಿದರು.</p>.<p>ಕೆಲವರ ಕೈ ಹಾಗೂ ಕಾಲುಗಳು ವಾಹನಗಳ ಒಳಗೆ ಸಿಲುಕಿದ್ದವು. ಸುಮಾರು ಒಂದು ತಾಸು ಕಾರ್ಯಾಚರಣೆ ನಡೆಸಿದ ಬಳಿಕ ಮೃತದೇಹಗಳನ್ನು ಹೊರತಗೆಯಲಾಯಿತು. ಬಳಿಕ ಕುಕನೂರು ತಾಲ್ಲೂಕು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. </p>.<p><strong>ಓದಿ...<a href="https://www.prajavani.net/district/koppal/horrible-road-accident-near-koppal-six-people-dead-957070.html" target="_blank">ಕುಕನೂರು ಸಮೀಪ ಭೀಕರ ರಸ್ತೆ ಅಪಘಾತ: ಐದು ಮಂದಿ ದಾರುಣ ಸಾವು</a></strong> </p>.<p><strong>ಆಗಿದ್ದೇನು:</strong> ಕೊಪ್ಪಳದಲ್ಲಿ ಸದ್ಯ ಪೊಲೀಸ್ ಇಲಾಖೆಯ ಡಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶರಣಪ್ಪ ಕೊಪ್ಪದ ಅವರ ಮೊಮ್ಮಗಳ (ಮಗನ ಮಗಳು) ಜನ್ಮದಿನದ ಕಾರ್ಯಕ್ರಮ ನಗರದ ಹೋಟೆಲ್ವೊಂದರಲ್ಲಿ ಆಯೋಜಿಸಲಾಗಿತ್ತು.</p>.<p>ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವ ಗ್ರಾಮ ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಘಟನೆ ಹೇಗಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.</p>.<p>ಅಪಘಾತದಲ್ಲಿ ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮದ ಗಿರಿಜವ್ವ ಕೊಪ್ಪದ (48), ದೇವಪ್ಪ ಕೊಪ್ಪದ (54), ಪಾರವ್ವ ಬೀರಪ್ಪ ಹಲಗೇರಿ (27), ಶಾಂತವ್ವ ಹನಮಂತಪ್ಪ ಗುಡ್ಲಾನೂರ (34) ಹಾಗೂ ಕಸ್ತೂರೆವ್ವ ನಾಗನಗೌಡ (20) ಮೃತಪಟ್ಟಿದ್ದಾರೆ.</p>.<p>ಪುಟ್ಟರಾಜ ಹಲಗೇರಿ (8), ಭೂಮಿಕಾ ಹಲಗೇರಿ (5), ಪಲ್ಲವಿ ಕರಿಗಾರ (20), ಬಸವರಾಜ ಹಲಗೇರಿ ಹಾಗೂ ಚಾಲಕ ಹರ್ಷವರ್ಧನ ಚನ್ನಳ್ಳಿ ಗಾಯಗೊಂಡಿದ್ದಾರೆ.</p>.<p>ಓದಿ...<a href="https://www.prajavani.net/district/koppal/horrible-road-accident-near-koppal-five-people-dead-on-the-spot-957098.html" target="_blank">ಕೊಪ್ಪಳ | ಮನೆ ಸ್ಮಶಾನವಾಗಿ ಹೋಯ್ತು, ದೇವರಿಗೆ ಕರುಣೆಯೇ ಇಲ್ಲ: ಕುಟುಂಬದ ಆಕ್ರಂದನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>