'ಕೆಲಸದ ಸಮಯದಲ್ಲಿ ವೈದ್ಯರು ಇರಲಿಲ್ಲ. ಮೂರು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರೂ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಅಪರೂಪಕ್ಕೆ ಎನ್ನುವಂತೆ ಬಂದರೂ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಲಿಲ್ಲ. ಇದರಿಂದಾಗಿ ಅಮ್ಮ ಪ್ರಾಣವನ್ನೇ ತೆತ್ತರು' ಎಂದು ಗಂಗಮ್ಮ ಅವರ ಮಗ ಸಿದ್ದಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.