<p>ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷ ಜೈಲು ಹಾಗೂ ₹75 ಸಾವಿರ ದಂಡ ವಿಧಿಸಿ ಇಲ್ಲಿನ ಫೋಕ್ಸೊ ನ್ಯಾಯಾಲಯ ಆದೇಶಿಸಿದೆ.</p>.<p>ಬೂಕನಕಟ್ಟಿ ಗ್ರಾಮದ ಖಾದರಸಾಬ್ ಓಲೇಕಾರ್ ಎಂಬಾತ ಅಪರಾಧಿಯಾಗಿದ್ದು, ನೊಂದ ಬಾಲಕಿಯ ತಂದೆ ಉಪಜೀವನಕ್ಕಾಗಿ ಉಡುಪಿಗೆ ಹೋಗಿದ್ದರು. ಅವರ ಮನೆ ಸಮೀಪದಲ್ಲಿ ವಾಸವಾಗಿದ್ದ ಖಾದರಸಾಬ್ ಬಾಲಕಿಯನ್ನು ಪರಿಚಯಿಸಿಕೊಂಡು ಸಲುಗೆಯಿಂದ ಮಾತನಾಡಿಸುತ್ತಿದ್ದ.</p>.<p>ಅಪರಾಧಿ 2023ರಲ್ಲಿ ಬಾಲಕಿ ಮನೆ ಬಳಿ ಬಂದು ಯಾರೂ ಇಲ್ಲದ ಸಮಯ ದುರುಪಯೋಗ ಪಡಿಸಿಕೊಂಡು ಬಾಲಕಿಯನ್ನು ಹೊಲವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಆಗಿನ ಸಿಪಿಐ ಸುರೇಶ ಡಿ., ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ವಿಚಾರಣೆ ನಡೆಸಿ, ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-35-759160765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷ ಜೈಲು ಹಾಗೂ ₹75 ಸಾವಿರ ದಂಡ ವಿಧಿಸಿ ಇಲ್ಲಿನ ಫೋಕ್ಸೊ ನ್ಯಾಯಾಲಯ ಆದೇಶಿಸಿದೆ.</p>.<p>ಬೂಕನಕಟ್ಟಿ ಗ್ರಾಮದ ಖಾದರಸಾಬ್ ಓಲೇಕಾರ್ ಎಂಬಾತ ಅಪರಾಧಿಯಾಗಿದ್ದು, ನೊಂದ ಬಾಲಕಿಯ ತಂದೆ ಉಪಜೀವನಕ್ಕಾಗಿ ಉಡುಪಿಗೆ ಹೋಗಿದ್ದರು. ಅವರ ಮನೆ ಸಮೀಪದಲ್ಲಿ ವಾಸವಾಗಿದ್ದ ಖಾದರಸಾಬ್ ಬಾಲಕಿಯನ್ನು ಪರಿಚಯಿಸಿಕೊಂಡು ಸಲುಗೆಯಿಂದ ಮಾತನಾಡಿಸುತ್ತಿದ್ದ.</p>.<p>ಅಪರಾಧಿ 2023ರಲ್ಲಿ ಬಾಲಕಿ ಮನೆ ಬಳಿ ಬಂದು ಯಾರೂ ಇಲ್ಲದ ಸಮಯ ದುರುಪಯೋಗ ಪಡಿಸಿಕೊಂಡು ಬಾಲಕಿಯನ್ನು ಹೊಲವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಆಗಿನ ಸಿಪಿಐ ಸುರೇಶ ಡಿ., ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಫೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ವಿಚಾರಣೆ ನಡೆಸಿ, ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-35-759160765</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>