<p><strong>ಕುಕನೂರು (ಕೊಪ್ಪಳ ಜಿಲ್ಲೆ):</strong> ಕುಕನೂರು ತಾಲ್ಲೂಕಿನ ತಳಕಲ್ ಹಾಗೂ ತಳಬಾಳ ಗ್ರಾಮಗಳಲ್ಲಿ ಶನಿವಾರ ಬೆಳಿಗ್ಗೆ ಬೀದಿ ನಾಯಿಯೊಂದು ದಾಳಿ ಮಾಡಿದ್ದರಿಂದ 30ಕ್ಕೂ ಹೆಚ್ಚು ಜನಗಾಯಗೊಂಡಿದ್ದಾರೆ. ಒಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.</p><p>ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಎಂಟು ವರ್ಷದ ಯಮನೂರುಸಾಬ್ ಮಾಬುಸಾಬ್ ನದಾಫ್ ಎಂಬ ಮಗುವಿನ ಮೇಲೆ ನಾಯಿ ತೀವ್ರವಾಗಿ ದಾಳಿ ನಡೆಸಿ ಮಗುವನ್ನು ಗಂಭೀರವಾಗಿ ಗಾಯಗೊಳಿಸಿದೆ. </p><p>ದಾಳಿಯಿಂದ ಮಗುವಿನ ಕೆಳಗಿನ ತುಟಿಯು ಸಂಪೂರ್ಣವಾಗಿ ಹರಿದು ಹೋಗಿದೆ. ಮಗುವಿನ ತಲೆ, ಕೆನ್ನೆ ಮೇಲೆ ಗಂಭೀರ ಗಾಯಗಳಾಗಿವೆ.</p><p>ರಸ್ತೆಯ ಮೇಲೆ ಬೀದಿ ನಾಯಿ ಏಕಾಏಕಿಯಾಗಿ ಆಕ್ರಮಣ ನಡೆಸಿದೆ. ಕಂಡ ಕಂಡವರಿಗೆ ಕಡಿದಿದೆ. ಮಗುವಿನ ಚಿತ್ಕಾರ ಕೇಳಿದ ತಕ್ಷಣ ಅಕ್ಕಪಕ್ಕದವರು ಬಂದು ನಾಯಿಯನ್ನು ಹೊಡೆದೋಡಿಸಿದ್ದಾರೆ. ಇಲ್ಲದಿದ್ದರೆ ಬಾಲಕ ನಾಯಿಯ ದಾಳಿಗೆ ಬಲಿಯಾಗಬೇಕಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ</p><p>ಗಾಯಗೊಂಡಿದ್ದ ಬಾಲಕ ಹಾಗೂ ಸಾರ್ವಜನಿಕರನ್ನು ತಕ್ಷಣ ಸ್ಥಳಿಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.ಬೀದಿ ನಾಯಿ ಪೋಷಣೆ ಎಂದರೆ ಸಾರ್ವಜನಿಕರಿಗೆ ತೊಂದರೆ ನೀಡುವುದಲ್ಲ: ಸುಪ್ರೀಂ ಕೋರ್ಟ್.ಬೀದಿ ನಾಯಿ ಉಪಟಳಕ್ಕೆ ಕಡಿವಾಣ | ಎಲ್ಲರೂ ಹೊಣೆ ನಿಭಾಯಿಸಬೇಕು; ಸುಪ್ರೀಂ ಕೋರ್ಟ್.<div><div class="bigfact-title">ಸಾರ್ವಜನಿಕರ ಆಕ್ರೋಶ</div><div class="bigfact-description">‘ಇತ್ತೀಚಿನ ದಿನಗಳಲ್ಲಿ ಗ್ರಾಮಗಳ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಅವುಗಳನ್ನು ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣವಾಗಿ ವಿಫಲವಾಗಿದ್ದು, ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡುವ ಪರಸ್ಥಿತಿ ನಿರ್ಮಾಣವಾಗಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</div></div>.<p><strong>ಎಚ್ಚೆತ್ತ ಗ್ರಾಮ ಪಂಚಾಯಿತಿ ಅಧಿಕಾರಿಗಳು</strong></p><p>ಬೀದಿನಾಯಿ ದಾಳಿಗೆ ಒಳಗಾದ ಬಾಲಕನ ಪೋಟೊ, ವಿಡಿಯೊ ಹಾಗೂ ಸುದ್ದಿ ಎಲ್ಲೆಡೆ ಹರಿದಾಡಿ, ಸಾರ್ವಜನಿಕರಿಂದ ಅಧಿಕಾರಗಳ ವಿರುದ್ಧ ಆಕ್ರೋಶ ವ್ಯಕ್ತವಾಯಿತು.</p><p>ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ತಕ್ಷಣ ಕಾರ್ಯಪ್ರವೃತ್ತರಾದ ಪಿಡಿಒ ವೀರನಗೌಡ ಅವರು ತುರ್ತು ಸಭೆ ಕರೆದು ಬೀದಿನಾಯಿಗಳನ್ನು ಹಿಡಿದು, ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಚರ್ಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು (ಕೊಪ್ಪಳ ಜಿಲ್ಲೆ):</strong> ಕುಕನೂರು ತಾಲ್ಲೂಕಿನ ತಳಕಲ್ ಹಾಗೂ ತಳಬಾಳ ಗ್ರಾಮಗಳಲ್ಲಿ ಶನಿವಾರ ಬೆಳಿಗ್ಗೆ ಬೀದಿ ನಾಯಿಯೊಂದು ದಾಳಿ ಮಾಡಿದ್ದರಿಂದ 30ಕ್ಕೂ ಹೆಚ್ಚು ಜನಗಾಯಗೊಂಡಿದ್ದಾರೆ. ಒಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.</p><p>ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಎಂಟು ವರ್ಷದ ಯಮನೂರುಸಾಬ್ ಮಾಬುಸಾಬ್ ನದಾಫ್ ಎಂಬ ಮಗುವಿನ ಮೇಲೆ ನಾಯಿ ತೀವ್ರವಾಗಿ ದಾಳಿ ನಡೆಸಿ ಮಗುವನ್ನು ಗಂಭೀರವಾಗಿ ಗಾಯಗೊಳಿಸಿದೆ. </p><p>ದಾಳಿಯಿಂದ ಮಗುವಿನ ಕೆಳಗಿನ ತುಟಿಯು ಸಂಪೂರ್ಣವಾಗಿ ಹರಿದು ಹೋಗಿದೆ. ಮಗುವಿನ ತಲೆ, ಕೆನ್ನೆ ಮೇಲೆ ಗಂಭೀರ ಗಾಯಗಳಾಗಿವೆ.</p><p>ರಸ್ತೆಯ ಮೇಲೆ ಬೀದಿ ನಾಯಿ ಏಕಾಏಕಿಯಾಗಿ ಆಕ್ರಮಣ ನಡೆಸಿದೆ. ಕಂಡ ಕಂಡವರಿಗೆ ಕಡಿದಿದೆ. ಮಗುವಿನ ಚಿತ್ಕಾರ ಕೇಳಿದ ತಕ್ಷಣ ಅಕ್ಕಪಕ್ಕದವರು ಬಂದು ನಾಯಿಯನ್ನು ಹೊಡೆದೋಡಿಸಿದ್ದಾರೆ. ಇಲ್ಲದಿದ್ದರೆ ಬಾಲಕ ನಾಯಿಯ ದಾಳಿಗೆ ಬಲಿಯಾಗಬೇಕಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ</p><p>ಗಾಯಗೊಂಡಿದ್ದ ಬಾಲಕ ಹಾಗೂ ಸಾರ್ವಜನಿಕರನ್ನು ತಕ್ಷಣ ಸ್ಥಳಿಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.ಬೀದಿ ನಾಯಿ ಪೋಷಣೆ ಎಂದರೆ ಸಾರ್ವಜನಿಕರಿಗೆ ತೊಂದರೆ ನೀಡುವುದಲ್ಲ: ಸುಪ್ರೀಂ ಕೋರ್ಟ್.ಬೀದಿ ನಾಯಿ ಉಪಟಳಕ್ಕೆ ಕಡಿವಾಣ | ಎಲ್ಲರೂ ಹೊಣೆ ನಿಭಾಯಿಸಬೇಕು; ಸುಪ್ರೀಂ ಕೋರ್ಟ್.<div><div class="bigfact-title">ಸಾರ್ವಜನಿಕರ ಆಕ್ರೋಶ</div><div class="bigfact-description">‘ಇತ್ತೀಚಿನ ದಿನಗಳಲ್ಲಿ ಗ್ರಾಮಗಳ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಅವುಗಳನ್ನು ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣವಾಗಿ ವಿಫಲವಾಗಿದ್ದು, ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡುವ ಪರಸ್ಥಿತಿ ನಿರ್ಮಾಣವಾಗಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</div></div>.<p><strong>ಎಚ್ಚೆತ್ತ ಗ್ರಾಮ ಪಂಚಾಯಿತಿ ಅಧಿಕಾರಿಗಳು</strong></p><p>ಬೀದಿನಾಯಿ ದಾಳಿಗೆ ಒಳಗಾದ ಬಾಲಕನ ಪೋಟೊ, ವಿಡಿಯೊ ಹಾಗೂ ಸುದ್ದಿ ಎಲ್ಲೆಡೆ ಹರಿದಾಡಿ, ಸಾರ್ವಜನಿಕರಿಂದ ಅಧಿಕಾರಗಳ ವಿರುದ್ಧ ಆಕ್ರೋಶ ವ್ಯಕ್ತವಾಯಿತು.</p><p>ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ತಕ್ಷಣ ಕಾರ್ಯಪ್ರವೃತ್ತರಾದ ಪಿಡಿಒ ವೀರನಗೌಡ ಅವರು ತುರ್ತು ಸಭೆ ಕರೆದು ಬೀದಿನಾಯಿಗಳನ್ನು ಹಿಡಿದು, ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಚರ್ಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>