<p><strong>ಕೊಪ್ಪಳ</strong>: ಜಿಲ್ಲಾ ಕೇಂದ್ರ ಸಮೀಪದ ಬಹದ್ದೂರ್ ಬಂಡಿ -ಬಿ. ಹೊಸಳ್ಳಿ ಗ್ರಾಮಗಳ ನಡುವಿನ ರಸ್ತೆ ಕೆಲ ತಿಂಗಳಿಂದ ಹದಗೆಟ್ಟಿದ್ದು ರಸ್ತೆ ಸಂಚಾರಕ್ಕೆ ಬಹಳ ತೊಂದರೆಯಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಮಳೆಯಾಗದಿದ್ದರೆ ರಸ್ತೆಗಳ ಗುಂಡಿಗಳ ನಡುವೆ ಪರದಾಡಿಕೊಂಡು ಮಾಡುತ್ತ ಸಂಚರಿಸಬೇಕು. ಮಳೆಯಾದರೆ ರಾಡಿ ನಡುವೆ ಓಡಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.</p>.<p>ರಸ್ತೆ ದುರಸ್ತಿಗೆ ಜನಪ್ರತಿನಿಧಿಗಳಿಗೆ ಹೇಳಿ ಸಾಕಾಗಿ ಹೋಗಿದ್ದು, ಸುಮ್ಮನಾಗಿದ್ದರು. ಹೊಸಳ್ಳಿ ಕೆರೆ ಹತ್ತಿರ ರಸ್ತೆ ತೀವ್ರ ಹದಗೆಟ್ಟಿದ್ದರಿಂದ ಕೆರೆಯ ಏರಿ ಮೇಲೆ ಜನ ಸಂಚರಿಸುತ್ತಿದ್ದಾರೆ. ಕೆಲವರು ಬಿದ್ದು ಸಣ್ಣಪುಟ್ಟ ಗಾಯವಾಗಿವೆ.</p>.<p>ಕೆಲ ದಿನಗಳಿಂದ ಸತತ ಮಳೆ ಆಗಿದ್ದರಿಂದ ಹೊಸಳ್ಳಿ ರಸ್ತೆ ಈಗ ಮತ್ತಷ್ಟು ಹದಗೆಟ್ಟಿದ್ದು ವಿದ್ಯಾರ್ಥಿಗಳ ತಾಳ್ಮೆಯ ಕಟ್ಟೆ ಒಡೆಯಿತು.</p>.<p>ಶಾಲಾ ವಿದ್ಯಾರ್ಥಿಗಳು ರಸ್ತೆಗೆ ಅಡ್ಡಲಾಗಿ ಮರದ ಕೊಂಬೆ ಇಟ್ಟು ಸುಮಾರು ಒಂದು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>ಬಸ್ ತಡೆದು ರಸ್ತೆ ದುರಸ್ತಿಗಾಗಿ ಪ್ರತಿಭಟಿಸಿ ಶಾಸಕರು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲಾ ಕೇಂದ್ರ ಸಮೀಪದ ಬಹದ್ದೂರ್ ಬಂಡಿ -ಬಿ. ಹೊಸಳ್ಳಿ ಗ್ರಾಮಗಳ ನಡುವಿನ ರಸ್ತೆ ಕೆಲ ತಿಂಗಳಿಂದ ಹದಗೆಟ್ಟಿದ್ದು ರಸ್ತೆ ಸಂಚಾರಕ್ಕೆ ಬಹಳ ತೊಂದರೆಯಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಮಳೆಯಾಗದಿದ್ದರೆ ರಸ್ತೆಗಳ ಗುಂಡಿಗಳ ನಡುವೆ ಪರದಾಡಿಕೊಂಡು ಮಾಡುತ್ತ ಸಂಚರಿಸಬೇಕು. ಮಳೆಯಾದರೆ ರಾಡಿ ನಡುವೆ ಓಡಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.</p>.<p>ರಸ್ತೆ ದುರಸ್ತಿಗೆ ಜನಪ್ರತಿನಿಧಿಗಳಿಗೆ ಹೇಳಿ ಸಾಕಾಗಿ ಹೋಗಿದ್ದು, ಸುಮ್ಮನಾಗಿದ್ದರು. ಹೊಸಳ್ಳಿ ಕೆರೆ ಹತ್ತಿರ ರಸ್ತೆ ತೀವ್ರ ಹದಗೆಟ್ಟಿದ್ದರಿಂದ ಕೆರೆಯ ಏರಿ ಮೇಲೆ ಜನ ಸಂಚರಿಸುತ್ತಿದ್ದಾರೆ. ಕೆಲವರು ಬಿದ್ದು ಸಣ್ಣಪುಟ್ಟ ಗಾಯವಾಗಿವೆ.</p>.<p>ಕೆಲ ದಿನಗಳಿಂದ ಸತತ ಮಳೆ ಆಗಿದ್ದರಿಂದ ಹೊಸಳ್ಳಿ ರಸ್ತೆ ಈಗ ಮತ್ತಷ್ಟು ಹದಗೆಟ್ಟಿದ್ದು ವಿದ್ಯಾರ್ಥಿಗಳ ತಾಳ್ಮೆಯ ಕಟ್ಟೆ ಒಡೆಯಿತು.</p>.<p>ಶಾಲಾ ವಿದ್ಯಾರ್ಥಿಗಳು ರಸ್ತೆಗೆ ಅಡ್ಡಲಾಗಿ ಮರದ ಕೊಂಬೆ ಇಟ್ಟು ಸುಮಾರು ಒಂದು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>ಬಸ್ ತಡೆದು ರಸ್ತೆ ದುರಸ್ತಿಗಾಗಿ ಪ್ರತಿಭಟಿಸಿ ಶಾಸಕರು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>