<p>ತಾವರಗೇರಾ: ಸ್ಥಳೀಯ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಬಜೆಟ್ ಮಂಡನೆ ಸಭೆ ನಡೆಯಿತು.</p>.<p>ಪ.ಪಂ ಅಧ್ಯಕ್ಷ ನಾರಾಯಣಗೌಡ ಮೆದಿಕೇರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2026–2027ನೇ ಸಾಲಿನ ವಿವಿಧ ಕಾಮಗಾರಿಗಳು, ಅಭಿವೃದ್ಧಿ ಕ್ರಿಯಾಯೋಜನೆ ಅಡಿಯಲ್ಲಿ ತಯಾರಿಸಿದ ಬಜೆಟ್ ಮಂಡನೆ ಮಾಡಲಾಯಿತು.</p>.<p>ನೈರ್ಮಲ್ಯ, ಘನ ತ್ಯಾಜ್ಯ ನಿರ್ವಹಣೆ, ನೀರು ಸರಬರಾಜು, ಮುನ್ಸಿಪಲ್ ಮಾರುಕಟ್ಟೆ, ಸಾಮಾನ್ಯ ಆಡಳಿತ, ಲೋಕೋಪಯೋಗಿ ಕಾಮಗಾರಿ ಚರಂಡಿ ನಿರ್ಮಾಣ, ರಸ್ತೆ ನಿರ್ಮಾಣ, ಸಾರ್ವಜನಿಕ ಆರೋಗ್ಯ,ಮತ್ತು ನಗರ ಬಡತನ ನಿರ್ಮೂಲನೆ, ಸಮಾಜ ಕಲ್ಯಾಣ ಕಾರ್ಯಗಳ ಕ್ರಿಯಾಯೋಜನೆ ಬಜೆಟ್ಅನ್ನು ಸಭೆಯಲ್ಲಿ ಸದಸ್ಯರು ಪರಿಶೀಲಿಸಿದರು.</p>.<p>₹ 7 ಕೋಟಿ 45 ಲಕ್ಷ ಅಂದಾಜು ಸ್ವಿಕೃತಿ, ₹ 7 ಕೋಟಿ 43 ಲಕ್ಷ ಅಂದಾಜು ಪಾವತಿ, ಮತ್ತು ₹ 2 ಕೋಟಿ 56 ಲಕ್ಷ ಉಳಿತಾಯ ಬಜೆಟ್ ಮಂಡನೆ ಮಾಡಲಾಯಿತು.</p>.<p>ನಾರಾಯಣಗೌಡ ಮೆದಿಕೇರಿ ಮಾತನಾಡಿ, ‘ಪ್ರತಿ ವರ್ಷದಂತೆ ಬಜೆಟ್ ತಯಾರಿಸಿದ್ದು, ಪಟ್ಟಣದ ಅಭಿವೃದ್ಧಿಗೆ ಸಮುದಾಯ ಮತ್ತು ಪಟ್ಟಣ ಪಂಚಾಯಿತಿ ಆಡಳಿತ, ಅಧಿಕಾರಿಗಳು, ಸರ್ವ ಸದಸ್ಯರು ಸಹಕಾರ ನೀಡಿದರೆ ಅನುಷ್ಠಾನ ಯಶಸ್ವಿಯಾಗುವುದು’ ಎಂದು ಹೇಳಿದರು</p>.<p>ಪ.ಪಂ ಉಪಾಧ್ಯಕ್ಷೆ ದುರಗಮ್ಮ ಶಿರವಾಟೆ, ಸ್ಥಾಯಿ ಸಮಿತಿ ಅಧ್ಯಕ್ಷ ವೀರನಗೌಡ ಪಾಟೀಲ, ಸದಸ್ಯರು, ನಾಮನಿರ್ದೇಶನ ಸದಸ್ಯರು, ಮುಖ್ಯಾಧಿಕಾರಿ ಮಹೇಶ ಅಂಗಡಿ, ಆರೋಗ್ಯ ನಿರೀಕ್ಷಕ ಫಯಾಜ್, ಎಂಜಿನಿಯರ್ ಮಂಜುನಾಥ, ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-35-2024238111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾವರಗೇರಾ: ಸ್ಥಳೀಯ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಬಜೆಟ್ ಮಂಡನೆ ಸಭೆ ನಡೆಯಿತು.</p>.<p>ಪ.ಪಂ ಅಧ್ಯಕ್ಷ ನಾರಾಯಣಗೌಡ ಮೆದಿಕೇರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2026–2027ನೇ ಸಾಲಿನ ವಿವಿಧ ಕಾಮಗಾರಿಗಳು, ಅಭಿವೃದ್ಧಿ ಕ್ರಿಯಾಯೋಜನೆ ಅಡಿಯಲ್ಲಿ ತಯಾರಿಸಿದ ಬಜೆಟ್ ಮಂಡನೆ ಮಾಡಲಾಯಿತು.</p>.<p>ನೈರ್ಮಲ್ಯ, ಘನ ತ್ಯಾಜ್ಯ ನಿರ್ವಹಣೆ, ನೀರು ಸರಬರಾಜು, ಮುನ್ಸಿಪಲ್ ಮಾರುಕಟ್ಟೆ, ಸಾಮಾನ್ಯ ಆಡಳಿತ, ಲೋಕೋಪಯೋಗಿ ಕಾಮಗಾರಿ ಚರಂಡಿ ನಿರ್ಮಾಣ, ರಸ್ತೆ ನಿರ್ಮಾಣ, ಸಾರ್ವಜನಿಕ ಆರೋಗ್ಯ,ಮತ್ತು ನಗರ ಬಡತನ ನಿರ್ಮೂಲನೆ, ಸಮಾಜ ಕಲ್ಯಾಣ ಕಾರ್ಯಗಳ ಕ್ರಿಯಾಯೋಜನೆ ಬಜೆಟ್ಅನ್ನು ಸಭೆಯಲ್ಲಿ ಸದಸ್ಯರು ಪರಿಶೀಲಿಸಿದರು.</p>.<p>₹ 7 ಕೋಟಿ 45 ಲಕ್ಷ ಅಂದಾಜು ಸ್ವಿಕೃತಿ, ₹ 7 ಕೋಟಿ 43 ಲಕ್ಷ ಅಂದಾಜು ಪಾವತಿ, ಮತ್ತು ₹ 2 ಕೋಟಿ 56 ಲಕ್ಷ ಉಳಿತಾಯ ಬಜೆಟ್ ಮಂಡನೆ ಮಾಡಲಾಯಿತು.</p>.<p>ನಾರಾಯಣಗೌಡ ಮೆದಿಕೇರಿ ಮಾತನಾಡಿ, ‘ಪ್ರತಿ ವರ್ಷದಂತೆ ಬಜೆಟ್ ತಯಾರಿಸಿದ್ದು, ಪಟ್ಟಣದ ಅಭಿವೃದ್ಧಿಗೆ ಸಮುದಾಯ ಮತ್ತು ಪಟ್ಟಣ ಪಂಚಾಯಿತಿ ಆಡಳಿತ, ಅಧಿಕಾರಿಗಳು, ಸರ್ವ ಸದಸ್ಯರು ಸಹಕಾರ ನೀಡಿದರೆ ಅನುಷ್ಠಾನ ಯಶಸ್ವಿಯಾಗುವುದು’ ಎಂದು ಹೇಳಿದರು</p>.<p>ಪ.ಪಂ ಉಪಾಧ್ಯಕ್ಷೆ ದುರಗಮ್ಮ ಶಿರವಾಟೆ, ಸ್ಥಾಯಿ ಸಮಿತಿ ಅಧ್ಯಕ್ಷ ವೀರನಗೌಡ ಪಾಟೀಲ, ಸದಸ್ಯರು, ನಾಮನಿರ್ದೇಶನ ಸದಸ್ಯರು, ಮುಖ್ಯಾಧಿಕಾರಿ ಮಹೇಶ ಅಂಗಡಿ, ಆರೋಗ್ಯ ನಿರೀಕ್ಷಕ ಫಯಾಜ್, ಎಂಜಿನಿಯರ್ ಮಂಜುನಾಥ, ಸಿಬ್ಬಂದಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-35-2024238111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>