ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಹೊಸ ಲಿಂಗಾಪುರ ಗ್ರಾಮದ ಆಶ್ರಯ ಕಾಲೊನಿಯ ಮೂರನೇ ವಾರ್ಡಿನಲ್ಲಿ ಒಂದೇ ಕುಟುಂಬದ ಮೂವರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಜೇಶ್ವರಿ( 50) ವಸಂತ (28) ಮತ್ತು ವಸಂತ ಅವರ 5 ವರ್ಷದ ಮಗ ಸಾಯಿತೇಜ ಮೃತಪಟ್ಟವರು. ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು.
ಘಟನೆ ನಡೆದ ಸುತ್ತಮುತ್ತಲಿನ ಮನೆಗಳ ಜನ ಮಂಗಳವಾರ ಬೆಳಿಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮುನಿರಾಬಾದ್ ಠಾಣಯ ಪಿಎಸ್ ಐ ಎಚ್.ಸುನಿಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು. ಶ್ವಾನ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು.