ಕುಕನೂರು: ಭರತ ಖಂಡದ ಧಾರ್ಮಿಕ ಪರಂಪರೆಯ ರಾಯಭಾರಿ ಸೇವಾಲಾಲ್ ಎಂದು ಗ್ರೇಡ್-2 ತಹಶೀಲ್ದಾರ್ ಮುರಳಿಧರ್ ಕುಲಕರ್ಣಿ ಹೇಳಿದರು. ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿಯಲ್ಲಿ ಮಾತನಾಡಿದರು.
ಸೇವಾಲಾಲರು ತಮ್ಮ ಸಾಮಾಜಿಕ ಕಾರ್ಯಗಳಿಂದ ಇಂದಿಗೂ ಜನ ಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಅಭಿಪ್ರಾಯಪಟ್ಟರು. ಸಮಾಜದ ಮುಖಂಡ ಸುರೇಶ ಬಳೂಟಗಿ ಮಾತನಾಡಿ, ಸದ್ಗರು ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮಾಜ ಸರಿದಂತೆ ಎಲ್ಲರಿಗೂ ಸನ್ಮಾರ್ಗದ ಬೋಧನೆ ಮಾಡಿದರು. ಎಲ್ಲ ಸಂತ ಶರಣರು ಹೇಳಿದ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕಿದೆ ಎಂದರು.