ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ದಿನದೊಳಗೆ ನೀರು ಪೂರೈಕೆ: ಬಸವರಾಜ ದಢೇಸೂಗೂರು

Last Updated 4 ಮೇ 2021, 4:57 IST
ಅಕ್ಷರ ಗಾತ್ರ

ಕನಕಗಿರಿ: ಕೆ. ಕಾಟಾಪುರ ಕೆರೆಯಿಂದ ಶಿರಿವಾರ ಹಾಗೂ ಕರಡೋಣ ಗ್ರಾಮದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಮುಗಿದಿದೆ. ಇನ್ನೂ 10 ದಿನದೊಳಗೆ ಪೈಪ್‌ಲೈನ್‌ ಮೂಲಕ ಕೆರೆಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಶಾಸಕ ಬಸವರಾಜ ದಢೇಸೂಗೂರು ತಿಳಿಸಿದರು.

ಸಮೀಪದ ಕೆ. ಕಾಟಾಪುರದ ಕೆರೆಗೆ ಸೋಮವಾರ ಭೇಟಿ ನೀಡಿ ನಂತರ ಮಾತನಾಡಿದರು. ತುಂಗಾಭದ್ರಾ ಕಾಲುವೆಯಿಂದ ಪೈಪ್‌ಲೈನ್‌ ಮೂಲಕ ಕಾಟಾಪುರ ಕೆರೆಯಲ್ಲಿ ಸಂಗ್ರಹವಾಗುವ ನೀರನ್ನು ಮತ್ತೆ ಶಿರಿವಾರ, ಕರಡೋಣ ಗ್ರಾಮದ ಕೆರೆಗಳಿಗೆ ಪೂರೈಕೆ ಮಾಡಲಾಗುವುದು, ನೀರು ಪೂರೈಕೆಗೆ ವಿದ್ಯುತ್ ಸಂಪರ್ಕ ಸೇರಿದಂತೆ ಇತರ ತಾಂತ್ರಿಕ ಸಮಸ್ಯೆ ಇದ್ದ ಕಾರಣ ಅದು ಈಗ ಬಗೆಹರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೆರೆಗಳಿಗೆ ನೀರು ಭರ್ತಿ ಮಾಡುವುದರಿಂದ ಗೋಡಿನಾಳ, ಹಿರೇಖೇಡ ಸೇರಿ ಇತರ ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು, ಕೃಷಿ, ವಾಣಿಜ್ಯ ಕ್ಷೇತ್ರ ಅಭಿವೃದ್ದಿ ಕಾಣಲಿದೆ ಎಂದು ತಿಳಿಸಿದರು. ಕಾರಟಗಿ ಪುರಸಭೆ ಸದಸ್ಯ ತಿಮ್ಮನಗೌಡ, ಪ್ರಮುಖರಾದ , ಮೋಹನರಾವ್ ಹಾಗೂ ಬಸವರಾಜ ಹುಳ್ಕಿಹಾಳ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT