<p><strong>ಕೊಪ್ಪಳ:</strong> ಕೆಲಸ ಮಾಡಿಸಿಕೊಂಡು ಬಾಕಿ ಉಳಿಸಿಕೊಂಡಿದ್ದ ₹200 ಕೂಲಿ ನೀಡಲು ಸತಾಯಿಸಿದ್ದರಿಂದ ವ್ಯಕ್ತಿಯೊಬ್ಬ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಕೊಪ್ಪಳ ತಾಲ್ಲೂಕಿನ ನಾಗೇಶನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.</p><p>ರೇಣುಕಮ್ಮ (62) ಎಂಬುವರು ಕೊಲೆಗೀಡಾಗಿದ್ದು, ಆರೋಪಿ ಮಹೇಶ ಗೊಲ್ಲರ ಎಂಬಾತನನ್ನು ಬಂಧಿಸಲಾಗಿದೆ.</p><p><strong>ಏನಿದು ಘಟನೆ:</strong> </p><p>ಕೂಲಿ ಕೆಲಸಕ್ಕಾಗಿ ರೇಣುಕಮ್ಮ ಅವರ ಪತಿ ಅಳ್ಳಪ್ಪ ಆರೋಪಿ ಮಹೇಶ ಸೇರಿದಂತೆ ಕೆಲವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು. ನಿತ್ಯ ₹650 ಕೂಲಿ ಇದ್ದು ಒಟ್ಟು ನಾಲ್ಕು ದಿನ ಮಹೇಶ ಕೆಲಸ ಮಾಡಿದ್ದ. ಇದರಲ್ಲಿ ಅಳ್ಳಪ್ಪ ₹200 ಉಳಿಸಿಕೊಂಡಿದ್ದರು.</p><p>ಬಾಕಿ ಹಣದ ವಿಚಾರವಾಗಿ ಮಹೇಶ ಮತ್ತು ಅಳ್ಳಪ್ಪ ನಡುವೆ ಭಾನುವಾರ ಸಂಜೆ ನಾಗೇಶನಹಳ್ಳಿಯಲ್ಲಿ ಜಗಳ ನಡೆದು ಅದು ವಾಗ್ವಾದಕ್ಕೆ ತಿರುಗಿತ್ತು. ’ಈಗ ನನ್ನ ಬಳಿ ಹಣವಿಲ್ಲ; ನಂತರ ಕೊಡುವೆ’ ಎಂದು ಅಳ್ಳಪ್ಪ ಹೇಳಿದ್ದರಿಂದ ಮಹೇಶ ಆಕ್ರೋಶಗೊಂಡಿದ್ದ. </p><p>ಸೋಮವಾರ ರಾತ್ರಿ ಕೂಡ ಇದೇ ವಿಷಯಕ್ಕೆ ಮತ್ತೆ ನಡೆದ ಜಗಳ ಬಿಡಿಸಲು ಬಂದ ಅಳ್ಳಪ್ಪನ ಪತ್ನಿ ರೇಣುಕಮ್ಮಳಿಗೆ ಮಹೇಶ ಕಟ್ಡಿಗೆಯಿಂದ ಬಲವಾಗಿ ಹೊಡೆದಿದ್ದರಿಂದ ರೇಣುಕಮ್ಮ ಗಾಯಗೊಂಡಿದ್ದರು. ಅವರನ್ನು ಜಿಲ್ಲಾಸ್ಪತ್ರೆಗೆ ಕರೆ ತರವಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಆರೋಪಿ ವಿರುದ್ದ ರೇಣುಕಪ್ಪ ಮಗಳು ಹುಲಿಗೆಮ್ಮ ಮಂಗಳವಾರ ನೀಡಿದ ದೂರಿನ ಅನ್ವಯ ತಾಲ್ಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಕೆಲಸ ಮಾಡಿಸಿಕೊಂಡು ಬಾಕಿ ಉಳಿಸಿಕೊಂಡಿದ್ದ ₹200 ಕೂಲಿ ನೀಡಲು ಸತಾಯಿಸಿದ್ದರಿಂದ ವ್ಯಕ್ತಿಯೊಬ್ಬ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಕೊಪ್ಪಳ ತಾಲ್ಲೂಕಿನ ನಾಗೇಶನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.</p><p>ರೇಣುಕಮ್ಮ (62) ಎಂಬುವರು ಕೊಲೆಗೀಡಾಗಿದ್ದು, ಆರೋಪಿ ಮಹೇಶ ಗೊಲ್ಲರ ಎಂಬಾತನನ್ನು ಬಂಧಿಸಲಾಗಿದೆ.</p><p><strong>ಏನಿದು ಘಟನೆ:</strong> </p><p>ಕೂಲಿ ಕೆಲಸಕ್ಕಾಗಿ ರೇಣುಕಮ್ಮ ಅವರ ಪತಿ ಅಳ್ಳಪ್ಪ ಆರೋಪಿ ಮಹೇಶ ಸೇರಿದಂತೆ ಕೆಲವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು. ನಿತ್ಯ ₹650 ಕೂಲಿ ಇದ್ದು ಒಟ್ಟು ನಾಲ್ಕು ದಿನ ಮಹೇಶ ಕೆಲಸ ಮಾಡಿದ್ದ. ಇದರಲ್ಲಿ ಅಳ್ಳಪ್ಪ ₹200 ಉಳಿಸಿಕೊಂಡಿದ್ದರು.</p><p>ಬಾಕಿ ಹಣದ ವಿಚಾರವಾಗಿ ಮಹೇಶ ಮತ್ತು ಅಳ್ಳಪ್ಪ ನಡುವೆ ಭಾನುವಾರ ಸಂಜೆ ನಾಗೇಶನಹಳ್ಳಿಯಲ್ಲಿ ಜಗಳ ನಡೆದು ಅದು ವಾಗ್ವಾದಕ್ಕೆ ತಿರುಗಿತ್ತು. ’ಈಗ ನನ್ನ ಬಳಿ ಹಣವಿಲ್ಲ; ನಂತರ ಕೊಡುವೆ’ ಎಂದು ಅಳ್ಳಪ್ಪ ಹೇಳಿದ್ದರಿಂದ ಮಹೇಶ ಆಕ್ರೋಶಗೊಂಡಿದ್ದ. </p><p>ಸೋಮವಾರ ರಾತ್ರಿ ಕೂಡ ಇದೇ ವಿಷಯಕ್ಕೆ ಮತ್ತೆ ನಡೆದ ಜಗಳ ಬಿಡಿಸಲು ಬಂದ ಅಳ್ಳಪ್ಪನ ಪತ್ನಿ ರೇಣುಕಮ್ಮಳಿಗೆ ಮಹೇಶ ಕಟ್ಡಿಗೆಯಿಂದ ಬಲವಾಗಿ ಹೊಡೆದಿದ್ದರಿಂದ ರೇಣುಕಮ್ಮ ಗಾಯಗೊಂಡಿದ್ದರು. ಅವರನ್ನು ಜಿಲ್ಲಾಸ್ಪತ್ರೆಗೆ ಕರೆ ತರವಷ್ಟರಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಆರೋಪಿ ವಿರುದ್ದ ರೇಣುಕಪ್ಪ ಮಗಳು ಹುಲಿಗೆಮ್ಮ ಮಂಗಳವಾರ ನೀಡಿದ ದೂರಿನ ಅನ್ವಯ ತಾಲ್ಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>