ಇದೇ ವೇಳೆ 100 ಮಾನವ ದಿನಗಳ ಕೆಲಸ ಮಾಡಿದ ಕಾರ್ಮಿಕರನ್ನು ಕಾಯಕ ಸನ್ಮಾನ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಯೋಗಕ್ಷೇಮದ ಬಗ್ಗೆ ವಿಚಾರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಣೆಪ್ಪ ಜಿರ್ಲಿ, ಸಾಮಾಜಿಕ ಅರಣ್ಯ ಇಲಾಖೆ ಆರ್ಎಫ್ಒ ಬಸವರಾಜ ಗೋಗೇರಿ, ತಾ.ಪಂ.ತಾಂತ್ರಿಕ ಸಂಯೋಜಕ ಸಂತೋಷ ನಂದಾಪೂರ, ಎಂಐಎಸ್ ಸಂಯೋಜಕ ಬಸವರಾಜ ದೊಡ್ಡಮನಿ, ಗುರುರಾಜ, ಶಾಮಿದ್ಸಾಬ ಸೇರಿ ಅನೇಕರು ಹಾಜರಿದ್ದರು.