ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ತುಂಗಭದ್ರಾ 31ನೇ ನಾಲೆಯಿಂದ ಜೆಪಿ ನಗರಕ್ಕೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ.
ಚರಂಡಿಗಳು ತುಂಬಿ ನೀರು ರಸ್ತೆಗೆ ಹರಿಯುತ್ತಿವೆ. ಮನೆಗಳಿಗೂ ನೀರು ನುಗ್ಗಿದೆ. ರಸ್ತೆಗಳಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, 6ನೇ ವಾರ್ಡ್ ವ್ಯಾಪ್ತಿಯ ಕಲಾವತಿ ಹಂಪಯ್ಯಸ್ವಾಮಿ ಎಂಬುವರ ಮನೆ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.