ಬಡ ಕುಟುಂಬದಲ್ಲಿ ಜನಿಸಿದ ಚೇತನ್ ಕಷ್ಟಗಳ ಮಧ್ಯೆಯೇ ಬೆಳೆದು ಬಂದಿದ್ದಾರೆ.
ತಂದೆ ನಾಗಪ್ಪ ಕೂಲಿ, ನಾಲಿ ಮಾಡಿ ಮಗನನ್ನು ಓದಿಸಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಪಟ್ಟಣದಲ್ಲಿಯೇ ಪೂರೈಸಿ, ಹೆಚ್ಚಿನ ವಿದ್ಯಾಭ್ಯಾಸವನ್ನು ಮೈಸೂರಿನ ಎನ್ಸಿಇ ಕಾಲೇಜಿನಲ್ಲಿ
ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಎರಡನೇ ಪ್ರಯತ್ನದಲ್ಲಿಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಸಾಫ್ಟ್ವೇರ್ನಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆನರಾ ಬ್ಯಾಂಕ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸ್ಪರ್ಧಾತ್ಮಕಪರೀಕ್ಷೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಇವರು, ಇದನ್ನೇ ಸವಾಲಾಗಿ ಸ್ವೀಕರಿಸಿ ಈಗಗ್ರೇಡ್-1 ಮುಖ್ಯಾಧಿಕಾರಿಯಾಗಿ ಆಯ್ಕೆಗೊಂಡಿದ್ದು, ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.