ಇದೇ ಸಮಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮಾದರಿಯಲ್ಲಿ ನಡೆದ ಮೊದಲ ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನಕ್ಕೆ ಬರುವಂತೆ ಸೂಚಿಸಲಾಗಿದೆ. ಬಹಳಷ್ಟು ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬನೆಯಾಗಿದ್ದು, ಮೌಲ್ಯಮಾಪನ ಮತ್ತು ಪರೀಕ್ಷೆ ಎರಡನ್ನೂ ಒಟ್ಟಿಗೆ ನಿಭಾಯಿಸುವುದು ಹೇಗೆ ಎನ್ನುವ ಪ್ರಶ್ನೆ ಪ್ರಾಚಾರ್ಯರನ್ನು ಕಾಡುತ್ತಿದೆ. ಈ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಿವೆ.