<p><strong>ಮುನಿರಾಬಾದ್</strong>: ‘ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ, ಬದಲಿಗೆ ಹೊಣೆಗಾರಿಕೆಯಾಗಿದೆ’ ಎಂದು ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಹೇಳಿದರು.</p>.<p>ಇಲ್ಲಿನ ಭಾರತೀಯ ಎಂಜಿನಿಯರ್ಗಳ ಸಂಘದ ಆಶ್ರಯದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣ ಉಲ್ಲೇಖಿಸಿ ಮಾತನಾಡಿದ ಅವರು, ‘ಜಲಾಶಯ ನಿರ್ಮಾಣ ಸಂದರ್ಭದಲ್ಲಿ ತಯಾರಿಸಿದ ನಕ್ಷೆ ಮತ್ತು ವಿನ್ಯಾಸ ನಿಖರವಾಗಿದೆ. ಅದರ ಅನ್ವಯ ಗೇಟ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು ಯಶಸ್ವಿಯಾಗುವ ಭರವಸೆ ಇದೆ’ ಎಂದರು.</p>.<p>ಸಂಘದ ಅಧ್ಯಕ್ಷ ಎಸ್.ಎಂ.ಶಶಿಧರ ಮಾತನಾಡಿದರು. ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ.) ರಾಜೇಶ ಅಮ್ಮಿನಭಾವಿ, ತುಂಗಭದ್ರಾ ಯೋಜನೆಯ ಪ್ರಭಾರ ಮುಖ್ಯ ಎಂಜಿನಿಯರ್ ಎಲ್. ಬಸವರಾಜ, ಸಂಸ್ಥೆಯ ಸದಸ್ಯರಾದ ಪ್ರಹ್ಲಾದ, ಸೈಯದ್ ನದೀಮುಲ್ಲಾ ಖಾದ್ರಿ, ಜಿ. ನಂದಿನಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನಿರಾಬಾದ್</strong>: ‘ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ, ಬದಲಿಗೆ ಹೊಣೆಗಾರಿಕೆಯಾಗಿದೆ’ ಎಂದು ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಹೇಳಿದರು.</p>.<p>ಇಲ್ಲಿನ ಭಾರತೀಯ ಎಂಜಿನಿಯರ್ಗಳ ಸಂಘದ ಆಶ್ರಯದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣ ಉಲ್ಲೇಖಿಸಿ ಮಾತನಾಡಿದ ಅವರು, ‘ಜಲಾಶಯ ನಿರ್ಮಾಣ ಸಂದರ್ಭದಲ್ಲಿ ತಯಾರಿಸಿದ ನಕ್ಷೆ ಮತ್ತು ವಿನ್ಯಾಸ ನಿಖರವಾಗಿದೆ. ಅದರ ಅನ್ವಯ ಗೇಟ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು ಯಶಸ್ವಿಯಾಗುವ ಭರವಸೆ ಇದೆ’ ಎಂದರು.</p>.<p>ಸಂಘದ ಅಧ್ಯಕ್ಷ ಎಸ್.ಎಂ.ಶಶಿಧರ ಮಾತನಾಡಿದರು. ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ.) ರಾಜೇಶ ಅಮ್ಮಿನಭಾವಿ, ತುಂಗಭದ್ರಾ ಯೋಜನೆಯ ಪ್ರಭಾರ ಮುಖ್ಯ ಎಂಜಿನಿಯರ್ ಎಲ್. ಬಸವರಾಜ, ಸಂಸ್ಥೆಯ ಸದಸ್ಯರಾದ ಪ್ರಹ್ಲಾದ, ಸೈಯದ್ ನದೀಮುಲ್ಲಾ ಖಾದ್ರಿ, ಜಿ. ನಂದಿನಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>