<p>ಕುಕನೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಬೆಳೆದ ಮಾವು ನಾಶವಾಗಿದೆ. ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಮುಖಂಡ ಈಶಪ್ಪ ಅಂಗಡಿ ಮಾತನಾಡಿ, ‘ರೈತರಿಗೆ ಈ ಬಾರಿ ಸಾಕಷ್ಟು ಬೆಳೆ ಹಾನಿಯಾಗಿದೆ. ಮಾವಿನ ಬೆಳೆ ಹಾನಿಗೊಳಗಾಗಿದ್ದಕ್ಕಾಗಿ ಪರಿಹಾರ ನೀಡಬೇಕು. ನೀರಾವರಿ ಬೆಳೆಗಳೂ ಹಾಳಾಗಿವೆ. ಪರಿಹಾರ ಮತ್ತು ಬೆಳೆವಿಮೆ ನೀಡಬೇಕು. ಬೆಳೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡದೇ ಆದಷ್ಟು ಬೇಗನೆ ಪರಿಹಾರ ಒದಗಿಸಬೇಕು’ ಎಂದು ಮನವಿ ಸಲ್ಲಿಸಿದರು.</p>.<p>ದ್ಯಾಮಣ್ಣ ಜಮಖಂಡಿ, ಗಿರೀಶ ದೇಸಾಯಿ, ಅಡವಿರಾವ್ ದೇಸಾಯಿ, ಮಹೇಶ ಬಾರಕೇರ, ಶ್ರೀಕಾಂತ ಪೂಜಾರ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-35-732806276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಕನೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಬೆಳೆದ ಮಾವು ನಾಶವಾಗಿದೆ. ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಮುಖಂಡ ಈಶಪ್ಪ ಅಂಗಡಿ ಮಾತನಾಡಿ, ‘ರೈತರಿಗೆ ಈ ಬಾರಿ ಸಾಕಷ್ಟು ಬೆಳೆ ಹಾನಿಯಾಗಿದೆ. ಮಾವಿನ ಬೆಳೆ ಹಾನಿಗೊಳಗಾಗಿದ್ದಕ್ಕಾಗಿ ಪರಿಹಾರ ನೀಡಬೇಕು. ನೀರಾವರಿ ಬೆಳೆಗಳೂ ಹಾಳಾಗಿವೆ. ಪರಿಹಾರ ಮತ್ತು ಬೆಳೆವಿಮೆ ನೀಡಬೇಕು. ಬೆಳೆ ಪರಿಹಾರ ನೀಡುವಲ್ಲಿ ಯಾವುದೇ ತಾರತಮ್ಯ ಮಾಡದೇ ಆದಷ್ಟು ಬೇಗನೆ ಪರಿಹಾರ ಒದಗಿಸಬೇಕು’ ಎಂದು ಮನವಿ ಸಲ್ಲಿಸಿದರು.</p>.<p>ದ್ಯಾಮಣ್ಣ ಜಮಖಂಡಿ, ಗಿರೀಶ ದೇಸಾಯಿ, ಅಡವಿರಾವ್ ದೇಸಾಯಿ, ಮಹೇಶ ಬಾರಕೇರ, ಶ್ರೀಕಾಂತ ಪೂಜಾರ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-35-732806276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>