<p><strong>ಕೊಪ್ಪಳ</strong>: ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುಟ್ಟರಾಜು ಹಲಗೇರಿ (7) ಹಾಗೂ ಭೂಮಿಕಾ ಹಲಗೇರಿ (5) ಇಬ್ಬರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ಸೋಮವಾರ ಸ್ಥಳಾಂತರಿಸಲಾಗಿದೆ.</p>.<p>ಇನ್ನುಳಿದ ಪಲ್ಲವಿ ಕರಿಗಾರ (20) ಅವರಿಗೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.</p>.<p>ಅಧಿಕಾರಿಗಳ ಭೇಟಿ: ಅಪಘಾತದಲ್ಲಿ ತಾಯಿ ಮೃತಪಟ್ಟಿದ್ದರಿಂದ ಅನಾಥರಾದ ಮಕ್ಕಳ ಮನೆಗೆ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.</p>.<p>ಯಲಬುರ್ಗಾ ತಾಲ್ಲೂಕಿನ ಸಿಡಿಪಿಒ ಸಿಂಧು ಯಲಿಗಾರ, ವಲಯ ಮೇಲ್ವಿಚಾರಕಿಯರಾದ ರಾಧಿಕಾ ಪವಾರ್, ಮಾಧವಿ ವೈದ್ಯ ಅವರು ಬಿನ್ನಾಳ ಗ್ರಾಮಕ್ಕೆ ತೆರಳಿ 10 ವರ್ಷದ ಬಸವರಾಜಗೆ ಧೈರ್ಯ ತುಂಬಿದರು.</p>.<p>ಅಪಘಾತದಲ್ಲಿ ಪಾರವ್ವ ಹಲಗೇರ ಮೃತಪಟ್ಟಿದ್ದಾರೆ. ಇವರ ಪತಿ ಬೀರಪ್ಪ ಹೋದ ವರ್ಷ ತೀರಿಕೊಂಡಿದ್ದರು. ಈ ದಂಪತಿಗೆ ಬಸವರಾಜ, ಪುಟ್ಟರಾಜ ಮತ್ತು ಭೂಮಿಕಾ ಎನ್ನುವ ಮೂರು ಜನ ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪುಟ್ಟರಾಜು ಹಲಗೇರಿ (7) ಹಾಗೂ ಭೂಮಿಕಾ ಹಲಗೇರಿ (5) ಇಬ್ಬರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಿಂದ ನಗರದ ಖಾಸಗಿ ಆಸ್ಪತ್ರೆಗೆ ಸೋಮವಾರ ಸ್ಥಳಾಂತರಿಸಲಾಗಿದೆ.</p>.<p>ಇನ್ನುಳಿದ ಪಲ್ಲವಿ ಕರಿಗಾರ (20) ಅವರಿಗೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.</p>.<p>ಅಧಿಕಾರಿಗಳ ಭೇಟಿ: ಅಪಘಾತದಲ್ಲಿ ತಾಯಿ ಮೃತಪಟ್ಟಿದ್ದರಿಂದ ಅನಾಥರಾದ ಮಕ್ಕಳ ಮನೆಗೆ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.</p>.<p>ಯಲಬುರ್ಗಾ ತಾಲ್ಲೂಕಿನ ಸಿಡಿಪಿಒ ಸಿಂಧು ಯಲಿಗಾರ, ವಲಯ ಮೇಲ್ವಿಚಾರಕಿಯರಾದ ರಾಧಿಕಾ ಪವಾರ್, ಮಾಧವಿ ವೈದ್ಯ ಅವರು ಬಿನ್ನಾಳ ಗ್ರಾಮಕ್ಕೆ ತೆರಳಿ 10 ವರ್ಷದ ಬಸವರಾಜಗೆ ಧೈರ್ಯ ತುಂಬಿದರು.</p>.<p>ಅಪಘಾತದಲ್ಲಿ ಪಾರವ್ವ ಹಲಗೇರ ಮೃತಪಟ್ಟಿದ್ದಾರೆ. ಇವರ ಪತಿ ಬೀರಪ್ಪ ಹೋದ ವರ್ಷ ತೀರಿಕೊಂಡಿದ್ದರು. ಈ ದಂಪತಿಗೆ ಬಸವರಾಜ, ಪುಟ್ಟರಾಜ ಮತ್ತು ಭೂಮಿಕಾ ಎನ್ನುವ ಮೂರು ಜನ ಮಕ್ಕಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>