ಬೆಂಗಳೂರು, ಮೈಸೂರು, ಬೀದರ್, ಹುಬ್ಬಳ್ಳಿ ಸೇರಿ ತಾಲ್ಲೂಕಿನ ವಿವಿಧ ಗ್ರಾಮಕ್ಕೆ ತೆರಳಲು ಪಟ್ಟಣದ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಕುಡಿಯುವ ನೀರಿನ ಸಮಸ್ಯೆ ನಿತ್ಯ ಕಾಡುತ್ತಿದೆ. ಆದರೆ ಬೇಸಿಗೆಯಲ್ಲಿ ಬೆಂಕಿಯಂತೆ ಸುಡುವ ಬಿಸಿಲಿನಲ್ಲಿ ಪ್ರಯಾಣಿಕರ ದಾಹ ನೀಗಿಸುವ ವ್ಯವಸ್ಥೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಮುಂದಾಗಿಲ್ಲ. ಇದರಿಂದ ನಿತ್ಯ ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣಕ್ಕೆ ಬರುವ 1 ಸಾವಿರದಿಂದ 2 ಸಾವಿರ ಪ್ರಯಾಣಿಕರು, ವಿದ್ಯಾರ್ಥಿಗಳು ನೀರಿಗೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.