<p><strong>ಕುಕನೂರು:</strong> ತಾಲ್ಲೂಕಿನ ತಳಕಲ್ ಗ್ರಾಮದ ಉಡಚಲಮ್ಮ ದೇವಿ ದೇವಾಲಯದ ಬಳಿ 13ನೇ ಶತಮಾನದ ಶಾಸನ ಪತ್ತೆಯಾಗಿದೆ ಎಂದು ಗಂಗಾವತಿಯ ಇತಿಹಾಸ ಸಂಶೋಧಕ ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ.</p>.<p>ಶಾಸನವು ಕಪ್ಪು ಶಿಲೆಯಲ್ಲಿ ಇದ್ದು 20 ಸಾಲುಗಳಲ್ಲಿ ಬರೆಯಲಾಗಿದೆ. ಶಿಲ್ಪ ಭಾಗದಲ್ಲಿ ಅಶ್ವ, ತ್ರಿಶೂಲವಿರುವ ಶಿಬಾರಗಟ್ಟೆ, ಖಡ್ಗ ಮತ್ತು ಚಾಮರಗಳ ಕೊರೆದ ಚಿತ್ರಗಳಿವೆ. ಹಾಗಾಗಿ ಇದು ಮೈಲಾರಲಿಂಗೇಶ್ವರ ಪರಂಪರೆಗೆ ಸಂಬಂಧಿಸಿದ ಶಾಸನವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಗಣೇಶ, ಸರಸ್ವತಿ ಹಾಗೂ ಶಿವಸ್ತುತಿಯೊಂದಿಗೆ ಪ್ರಾರಂಭವಾಗುವ ಶಾಸನವು ಸ್ವಸ್ತಿ ಶ್ರೀ ಶಕ ವರ್ಷದ 1201 ಪ್ರಮಾದಿ ಸಂವತ್ಸರದ ಚೈತ್ರ ಬಹುಳ ಶುದ್ಧ 15ರ ಗ್ರಹಣ ಕಾಲವನ್ನು ಉಲ್ಲೇಖಿಸುತ್ತದೆ. ಇದು ಪ್ರಸಕ್ತ ಶಕೆ 1279ಕ್ಕೆ ಸರಿ ಹೊಂದುತ್ತದೆ. ಶಾಸನವು ಪ್ರಧಾನವಾಗಿ ಪಂಡಿತರಿಗೆ ಮತ್ತು ಕೆಲವು ಗಣ್ಯ ವ್ಯಕ್ತಿಗಳಿಗೆ ದಾನ ನೀಡಿದ ವಿಷಯವನ್ನು ಒಳಗೊಂಡಿದೆ ಆದರೆ ದಾನಿಯ ಹೆಸರು ಅಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಶಾಸನವಿರುವ ತಳಕಲ್ ಗ್ರಾಮವನ್ನು ತಳ್ಕಲ್ಲು ಉಲ್ಲೇಖಿಸಿದೆ. ಅದು ಒಂದು ಅಗ್ರಹಾರ ವಾಗಿತ್ತು ಅಲ್ಲಿ ಮಹಾಜನಗಳೆಂಬ ಪಂಡಿತರಿದ್ದ ಬಗ್ಗೆ ಶಾಸನ ತಿಳಿಸುತ್ತದೆ. ಅವರಿಗೂ ಮತ್ತು ಕೆಲ ಸಂಗೀತಗಾರರಿಗೆ ದಾನ ನೀಡಿದ ವಿಷಯವನ್ನು ಹೇಳಲಾಗಿದೆ. ಅವರ ಪೈಕಿ ಮಹೇಶ್ವರಿ ಎಂಬ ಗಾಯಕಿಯ ಗಾನಕ್ಕೆ 12 ಪಣ, ಜೋಗಮ ಎಂಬ ಗಾಯಕನ ಗಾನಕ್ಕೆ 12 ಪಣ, ಖೇಮಣ್ಣನಿಗೆ ಎರಡು ಪಣ ಮತ್ತು 12 ಹೊನ್ನು ದಾನವಾಗಿ ನೀಡಿದ ಬಗ್ಗೆ ತಿಳಿಸಲಾಗಿದೆ. ಮತ್ತು ಹೊಂನಕಹಾಳ ಎಂಬ ಗ್ರಾಮದಲ್ಲಿ ಭೂಮಿ ಕೊಟ್ಟ ಬಗ್ಗೆ ವಿವರಿಸಲಾಗಿದೆ. ಪ್ರಾಸಂಗಿಕವಾಗಿ ದಾನದ ಜಮೀನುಗಳ ಮೇರೆಗಳು ಮತ್ತು ದಿಕ್ಕುಗಳ ವಿವರಗಳನ್ನು ನೀಡಲಾಗಿದೆ. ಶಾಸನದ ಬಗ್ಗೆ ಹೆಚ್ಚಿನ ಶೋಧನೆಯನ್ನು ನಡೆಸಲಾಗುವುದೆಂದು ತಿಳಿಸಿದ್ದಾರೆ.</p>.<p>ಶಾಸನ ಶೋಧನೆಯಲ್ಲಿ ಪ್ರಧಾನವಾಗಿ ತಳಕಲ್ ಗ್ರಾಮದ ಯುವ ಮುಖಂಡರು ಇತಿಹಾಸ ಆಸಕ್ತರಾದ ಉದಯ್ ರಾಯರಡ್ಡಿ, ಸಂಶೋಧಕರಾದ ಚನ್ನಬಸಪ್ಪ ಮಲ್ಕಂದಿನ್ನಿ, ಸಿದ್ದಲಿಂಗಪ್ಪ ಕೊಟ್ನೆಕಲ್, ರಮೇಶ್ ಗಬ್ಬೂರ್ ,ಡಾ.ಜಾಜಿ ದೇವೇಂದ್ರಪ್ಪ ,ಬದ್ರಿ ಪ್ರಸಾದ್ ಸಹಕರಿಸಿದ್ದಾರೆಂದು ಕೋಲ್ಕಾರ್ ತಿಳಿಸಿದ್ದಾರೆ. ಪ್ರಸ್ತುತ ಶಾಸನವನ್ನು ಉದಯ್ ರೆಡ್ಡಿ ಅವರು ಗ್ರಾಮಸ್ಥರ ಸಹಕಾರದಿಂದ ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ಒಂದು ಕಟ್ಟೆಯನ್ನು ನಿರ್ಮಿಸಿ ಅಲ್ಲಿ ಸಂರಕ್ಷಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-35-1715610321</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ತಾಲ್ಲೂಕಿನ ತಳಕಲ್ ಗ್ರಾಮದ ಉಡಚಲಮ್ಮ ದೇವಿ ದೇವಾಲಯದ ಬಳಿ 13ನೇ ಶತಮಾನದ ಶಾಸನ ಪತ್ತೆಯಾಗಿದೆ ಎಂದು ಗಂಗಾವತಿಯ ಇತಿಹಾಸ ಸಂಶೋಧಕ ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ.</p>.<p>ಶಾಸನವು ಕಪ್ಪು ಶಿಲೆಯಲ್ಲಿ ಇದ್ದು 20 ಸಾಲುಗಳಲ್ಲಿ ಬರೆಯಲಾಗಿದೆ. ಶಿಲ್ಪ ಭಾಗದಲ್ಲಿ ಅಶ್ವ, ತ್ರಿಶೂಲವಿರುವ ಶಿಬಾರಗಟ್ಟೆ, ಖಡ್ಗ ಮತ್ತು ಚಾಮರಗಳ ಕೊರೆದ ಚಿತ್ರಗಳಿವೆ. ಹಾಗಾಗಿ ಇದು ಮೈಲಾರಲಿಂಗೇಶ್ವರ ಪರಂಪರೆಗೆ ಸಂಬಂಧಿಸಿದ ಶಾಸನವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಗಣೇಶ, ಸರಸ್ವತಿ ಹಾಗೂ ಶಿವಸ್ತುತಿಯೊಂದಿಗೆ ಪ್ರಾರಂಭವಾಗುವ ಶಾಸನವು ಸ್ವಸ್ತಿ ಶ್ರೀ ಶಕ ವರ್ಷದ 1201 ಪ್ರಮಾದಿ ಸಂವತ್ಸರದ ಚೈತ್ರ ಬಹುಳ ಶುದ್ಧ 15ರ ಗ್ರಹಣ ಕಾಲವನ್ನು ಉಲ್ಲೇಖಿಸುತ್ತದೆ. ಇದು ಪ್ರಸಕ್ತ ಶಕೆ 1279ಕ್ಕೆ ಸರಿ ಹೊಂದುತ್ತದೆ. ಶಾಸನವು ಪ್ರಧಾನವಾಗಿ ಪಂಡಿತರಿಗೆ ಮತ್ತು ಕೆಲವು ಗಣ್ಯ ವ್ಯಕ್ತಿಗಳಿಗೆ ದಾನ ನೀಡಿದ ವಿಷಯವನ್ನು ಒಳಗೊಂಡಿದೆ ಆದರೆ ದಾನಿಯ ಹೆಸರು ಅಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಶಾಸನವಿರುವ ತಳಕಲ್ ಗ್ರಾಮವನ್ನು ತಳ್ಕಲ್ಲು ಉಲ್ಲೇಖಿಸಿದೆ. ಅದು ಒಂದು ಅಗ್ರಹಾರ ವಾಗಿತ್ತು ಅಲ್ಲಿ ಮಹಾಜನಗಳೆಂಬ ಪಂಡಿತರಿದ್ದ ಬಗ್ಗೆ ಶಾಸನ ತಿಳಿಸುತ್ತದೆ. ಅವರಿಗೂ ಮತ್ತು ಕೆಲ ಸಂಗೀತಗಾರರಿಗೆ ದಾನ ನೀಡಿದ ವಿಷಯವನ್ನು ಹೇಳಲಾಗಿದೆ. ಅವರ ಪೈಕಿ ಮಹೇಶ್ವರಿ ಎಂಬ ಗಾಯಕಿಯ ಗಾನಕ್ಕೆ 12 ಪಣ, ಜೋಗಮ ಎಂಬ ಗಾಯಕನ ಗಾನಕ್ಕೆ 12 ಪಣ, ಖೇಮಣ್ಣನಿಗೆ ಎರಡು ಪಣ ಮತ್ತು 12 ಹೊನ್ನು ದಾನವಾಗಿ ನೀಡಿದ ಬಗ್ಗೆ ತಿಳಿಸಲಾಗಿದೆ. ಮತ್ತು ಹೊಂನಕಹಾಳ ಎಂಬ ಗ್ರಾಮದಲ್ಲಿ ಭೂಮಿ ಕೊಟ್ಟ ಬಗ್ಗೆ ವಿವರಿಸಲಾಗಿದೆ. ಪ್ರಾಸಂಗಿಕವಾಗಿ ದಾನದ ಜಮೀನುಗಳ ಮೇರೆಗಳು ಮತ್ತು ದಿಕ್ಕುಗಳ ವಿವರಗಳನ್ನು ನೀಡಲಾಗಿದೆ. ಶಾಸನದ ಬಗ್ಗೆ ಹೆಚ್ಚಿನ ಶೋಧನೆಯನ್ನು ನಡೆಸಲಾಗುವುದೆಂದು ತಿಳಿಸಿದ್ದಾರೆ.</p>.<p>ಶಾಸನ ಶೋಧನೆಯಲ್ಲಿ ಪ್ರಧಾನವಾಗಿ ತಳಕಲ್ ಗ್ರಾಮದ ಯುವ ಮುಖಂಡರು ಇತಿಹಾಸ ಆಸಕ್ತರಾದ ಉದಯ್ ರಾಯರಡ್ಡಿ, ಸಂಶೋಧಕರಾದ ಚನ್ನಬಸಪ್ಪ ಮಲ್ಕಂದಿನ್ನಿ, ಸಿದ್ದಲಿಂಗಪ್ಪ ಕೊಟ್ನೆಕಲ್, ರಮೇಶ್ ಗಬ್ಬೂರ್ ,ಡಾ.ಜಾಜಿ ದೇವೇಂದ್ರಪ್ಪ ,ಬದ್ರಿ ಪ್ರಸಾದ್ ಸಹಕರಿಸಿದ್ದಾರೆಂದು ಕೋಲ್ಕಾರ್ ತಿಳಿಸಿದ್ದಾರೆ. ಪ್ರಸ್ತುತ ಶಾಸನವನ್ನು ಉದಯ್ ರೆಡ್ಡಿ ಅವರು ಗ್ರಾಮಸ್ಥರ ಸಹಕಾರದಿಂದ ದೇವಾಲಯದ ಗೋಡೆಗೆ ಹೊಂದಿಕೊಂಡಂತೆ ಒಂದು ಕಟ್ಟೆಯನ್ನು ನಿರ್ಮಿಸಿ ಅಲ್ಲಿ ಸಂರಕ್ಷಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-35-1715610321</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>