<p>ಗಂಗಾವತಿ: ನಗರದ ಮಲ್ಲಿಕಾರ್ಜುನ ಮಠದ ಆವರಣದಲ್ಲಿ ಶನಿವಾರ ಹಾನಗಲ್ಲ ಕುಮಾರ ಶಿವಯೋಗಿಗಳ 158ನೇ ಜಯಂತ್ಯೋತ್ಸವದ ಸಮಾರೋಪ ಸಮಾರಂಭ ಜರು ಗಿತು.</p>.<p>ಕುದರಿಮೊತಿ ವಿಜಯಮಹಾಂತ ಸ್ವಾಮೀಜಿ ಮಾತನಾಡಿ, ‘ಕುಮಾರೇಶ್ವರರು ತಮಗಾಗಿ ಏನೂ ಮಾಡಿಕೊಳ್ಳದೇ ಎಲ್ಲವನ್ನೂ ಸಮಾಜಕ್ಕಾಗಿ ಮಾಡಿದ್ದಾರೆ. ಹಳ್ಳಿ ಹಳ್ಳಿಗೆ ಓಡಾಡಿ ಜನರಿಗೆ ಶಿಕ್ಷಣ ನೀಡಿದರು. ಶಿವಯೋಗ ಮಂದಿರ ಸ್ಥಾಪಿಸಿದರು. ಸಮಾಜಕ್ಕೆ ಅವರ ಕೊಡುಗೆ ಅಪಾರ’ ಎಂದರು.</p>.<p>ಶಾಸಕ ಜಿ.ಜನಾರ್ದನರೆಡ್ಡಿ ಮಾತನಾಡಿ, ‘ಕುಮಾರೇಶ್ವರರು ಮೈಸೂರಿನ ಬಳಿ 12 ವರ್ಷ ತಪಸ್ಸು ಮಾಡಿದ್ದಾರೆ ಎಂದು ಓದಿದ್ದೇನೆ. ಅವರು ತಮ್ಮ ಸ್ವಾರ್ಥಕ್ಕೆ ತಪಸ್ಸು ಮಾಡಲಿಲ್ಲ, ಸಮಾಜಕ್ಕೆ ಶಿಕ್ಷಣ ನೀಡಲೆಂದು ತಪಸ್ಸು ಮಾಡಿದರು’ ಎಂದರು.</p>.<p>ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ‘ಕುಮಾರೇಶ್ವರರ ಜಯಂತಿ ಕೇವಲ ಧಾರ್ಮಿಕ ಕೆಲಸಕ್ಕೆ ಸೀಮಿತವಾಗಿಲ್ಲ. ಬದಲಾಗಿ ಯುವಕರನ್ನು ದುಶ್ಚಟಗಳಿಂದ ದೂರ ಮಾಡುವ ಕೆಲಸ ಮಾಡಿದ್ದು ಶ್ಲಾಘನೀಯ’ ಎಂದರು. </p>.<p>ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಲಾಯಿತು. ಬೆಳಿಗ್ಗೆ ನಗರದದಲ್ಲಿ ಸ್ವಾಮೀಜಿಗಳಿಂದ ಸದ್ಭಾವನ ಯಾತ್ರೆ ಜರುಗಿತು.</p>.<p>ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜಿ.ವೀರಪ್ಪ ಸೇರಿ ವಿವಿಧ ಮಠಗಳ ಮಠಾಧೀಶರು, ಸಮಾಜದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ನಗರದ ಮಲ್ಲಿಕಾರ್ಜುನ ಮಠದ ಆವರಣದಲ್ಲಿ ಶನಿವಾರ ಹಾನಗಲ್ಲ ಕುಮಾರ ಶಿವಯೋಗಿಗಳ 158ನೇ ಜಯಂತ್ಯೋತ್ಸವದ ಸಮಾರೋಪ ಸಮಾರಂಭ ಜರು ಗಿತು.</p>.<p>ಕುದರಿಮೊತಿ ವಿಜಯಮಹಾಂತ ಸ್ವಾಮೀಜಿ ಮಾತನಾಡಿ, ‘ಕುಮಾರೇಶ್ವರರು ತಮಗಾಗಿ ಏನೂ ಮಾಡಿಕೊಳ್ಳದೇ ಎಲ್ಲವನ್ನೂ ಸಮಾಜಕ್ಕಾಗಿ ಮಾಡಿದ್ದಾರೆ. ಹಳ್ಳಿ ಹಳ್ಳಿಗೆ ಓಡಾಡಿ ಜನರಿಗೆ ಶಿಕ್ಷಣ ನೀಡಿದರು. ಶಿವಯೋಗ ಮಂದಿರ ಸ್ಥಾಪಿಸಿದರು. ಸಮಾಜಕ್ಕೆ ಅವರ ಕೊಡುಗೆ ಅಪಾರ’ ಎಂದರು.</p>.<p>ಶಾಸಕ ಜಿ.ಜನಾರ್ದನರೆಡ್ಡಿ ಮಾತನಾಡಿ, ‘ಕುಮಾರೇಶ್ವರರು ಮೈಸೂರಿನ ಬಳಿ 12 ವರ್ಷ ತಪಸ್ಸು ಮಾಡಿದ್ದಾರೆ ಎಂದು ಓದಿದ್ದೇನೆ. ಅವರು ತಮ್ಮ ಸ್ವಾರ್ಥಕ್ಕೆ ತಪಸ್ಸು ಮಾಡಲಿಲ್ಲ, ಸಮಾಜಕ್ಕೆ ಶಿಕ್ಷಣ ನೀಡಲೆಂದು ತಪಸ್ಸು ಮಾಡಿದರು’ ಎಂದರು.</p>.<p>ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ‘ಕುಮಾರೇಶ್ವರರ ಜಯಂತಿ ಕೇವಲ ಧಾರ್ಮಿಕ ಕೆಲಸಕ್ಕೆ ಸೀಮಿತವಾಗಿಲ್ಲ. ಬದಲಾಗಿ ಯುವಕರನ್ನು ದುಶ್ಚಟಗಳಿಂದ ದೂರ ಮಾಡುವ ಕೆಲಸ ಮಾಡಿದ್ದು ಶ್ಲಾಘನೀಯ’ ಎಂದರು. </p>.<p>ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಲಾಯಿತು. ಬೆಳಿಗ್ಗೆ ನಗರದದಲ್ಲಿ ಸ್ವಾಮೀಜಿಗಳಿಂದ ಸದ್ಭಾವನ ಯಾತ್ರೆ ಜರುಗಿತು.</p>.<p>ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜಿ.ವೀರಪ್ಪ ಸೇರಿ ವಿವಿಧ ಮಠಗಳ ಮಠಾಧೀಶರು, ಸಮಾಜದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>