<p><strong>ಕುಷ್ಟಗಿ</strong>: ಯಶವಂತಪುರ, ಬೆಂಗಳೂರು, ಹೊಸಪೇಟೆ ಹಾಗೂ ಹೊಸಪೇಟೆ ಹರಿಹರ ರೈಲುಗಳ ಸಂಚಾರವನ್ನು ಕುಷ್ಟಗಿವರೆಗೆ ವಿಸ್ತರಿಸುವ ವಿಷಯ ಪರಿಶೀಲನೆ ಹಂತದಲ್ಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ ಎಂದು ತಿಳಿಸಲಾಗಿದೆ.</p>.<p>ಈ ಕುರಿತು ಗುರುವಾರ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿ ರೈಲು ನಿಲ್ದಾಣದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಸಿದ್ದು ನೂತನ ರೈಲು ಸಂಚಾರ ಸೇವೆಗಳಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ ಎಂದು ಇಲ್ಲಿಯ ರೈಲ್ವೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ ವಿವರಿಸಿದರು.</p>.<p>ಕುಷ್ಟಗಿಯಿಂದ ಯಶವಂತಪುರ, ಬೆಂಗಳೂರುವರೆಗೆ ರೈಲು ಸಂಚಾರ ಸೇವೆ ವಿಷಯಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ ಎರಡು ವಾರಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು ಎಂದೂ ಬಂಗಾರಶೆಟ್ಟರ ಹೇಳಿದರು.</p>.<p>ಗದಗ– ವಾಡಿ ರೈಲು ಮಾರ್ಗದಲ್ಲಿ ಒಂದು ರೈಲು ಮಾತ್ರ ಹುಬ್ಬಳ್ಳಿ–ಕುಷ್ಟಗಿ ಮಧ್ಯೆ ಸಂಚರಿಸುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿತ್ಯ ನೂರಾರು ಪ್ರಯಾಣಿಕರು ಕುಷ್ಟಗಿಯಿಂದಲೇ ಸಂಚರಿಸುತ್ತಿದ್ದಾರೆ. ಹಾಗಾಗಿ ಇಲ್ಲಿಂದ ಯಶವಂತಪುರ ಬೆಂಗಳೂರುವರೆಗೂ ರೈಲು ಸೇವೆ ಆರಂಭಗೊಂಡರೆ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಅಲ್ಲದೆ ಈ ಪ್ರದೇಶದ ಅಭಿವೃದ್ಧಿಗೂ ಪೂರಕವಾಗುತ್ತದೆ ಎಂಬುದು ಈ ಭಾಗದ ಜನರ ಆಶಯವಾಗಿದ್ದು ಈ ಬಗ್ಗೆ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರೈಲ್ವೆ ಹೋರಾಟ ಸಮಿತಿಯವರು ಸಚಿವ ಸೋಮಣ್ಣ ಅವರಿಗೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.</p>.<p>ಇದೇ ಸಂದರ್ಭದಲ್ಲಿ ಹಾಜರಿದ್ದ ಕುಷ್ಟಗಿ ನರಗುಂದ ಘಟಪ್ರಭ ನೂತನ ರೈಲು ಮಾರ್ಗದ ಹೋರಾಟ ಸಮಿತಿ ಅಧ್ಯಕ್ಷ ಚನ್ನಬಸಪ್ಪ ನಂದಿ, ಆರ್.ಕೆ.ಕದಂ ಇತರರು ಈ ಮಾರ್ಗದ ಸಮೀಕ್ಷೆಗೆ ಮುಂದಾಗುವಂತೆ ಪ್ರತ್ಯೇಕ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ, ಎಸ್.ಎನ್.ಘೋರ್ಪಡೆ, ಮಹಾಂತೇಶ ಮಂಗಳೂರು, ಮಂಜುನಾಥ ಮಹಾಲಿಂಗಪುರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ಯಶವಂತಪುರ, ಬೆಂಗಳೂರು, ಹೊಸಪೇಟೆ ಹಾಗೂ ಹೊಸಪೇಟೆ ಹರಿಹರ ರೈಲುಗಳ ಸಂಚಾರವನ್ನು ಕುಷ್ಟಗಿವರೆಗೆ ವಿಸ್ತರಿಸುವ ವಿಷಯ ಪರಿಶೀಲನೆ ಹಂತದಲ್ಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ ಎಂದು ತಿಳಿಸಲಾಗಿದೆ.</p>.<p>ಈ ಕುರಿತು ಗುರುವಾರ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿ ರೈಲು ನಿಲ್ದಾಣದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಸಿದ್ದು ನೂತನ ರೈಲು ಸಂಚಾರ ಸೇವೆಗಳಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ ಎಂದು ಇಲ್ಲಿಯ ರೈಲ್ವೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ ವಿವರಿಸಿದರು.</p>.<p>ಕುಷ್ಟಗಿಯಿಂದ ಯಶವಂತಪುರ, ಬೆಂಗಳೂರುವರೆಗೆ ರೈಲು ಸಂಚಾರ ಸೇವೆ ವಿಷಯಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ ಎರಡು ವಾರಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು ಎಂದೂ ಬಂಗಾರಶೆಟ್ಟರ ಹೇಳಿದರು.</p>.<p>ಗದಗ– ವಾಡಿ ರೈಲು ಮಾರ್ಗದಲ್ಲಿ ಒಂದು ರೈಲು ಮಾತ್ರ ಹುಬ್ಬಳ್ಳಿ–ಕುಷ್ಟಗಿ ಮಧ್ಯೆ ಸಂಚರಿಸುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿತ್ಯ ನೂರಾರು ಪ್ರಯಾಣಿಕರು ಕುಷ್ಟಗಿಯಿಂದಲೇ ಸಂಚರಿಸುತ್ತಿದ್ದಾರೆ. ಹಾಗಾಗಿ ಇಲ್ಲಿಂದ ಯಶವಂತಪುರ ಬೆಂಗಳೂರುವರೆಗೂ ರೈಲು ಸೇವೆ ಆರಂಭಗೊಂಡರೆ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಅಲ್ಲದೆ ಈ ಪ್ರದೇಶದ ಅಭಿವೃದ್ಧಿಗೂ ಪೂರಕವಾಗುತ್ತದೆ ಎಂಬುದು ಈ ಭಾಗದ ಜನರ ಆಶಯವಾಗಿದ್ದು ಈ ಬಗ್ಗೆ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರೈಲ್ವೆ ಹೋರಾಟ ಸಮಿತಿಯವರು ಸಚಿವ ಸೋಮಣ್ಣ ಅವರಿಗೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.</p>.<p>ಇದೇ ಸಂದರ್ಭದಲ್ಲಿ ಹಾಜರಿದ್ದ ಕುಷ್ಟಗಿ ನರಗುಂದ ಘಟಪ್ರಭ ನೂತನ ರೈಲು ಮಾರ್ಗದ ಹೋರಾಟ ಸಮಿತಿ ಅಧ್ಯಕ್ಷ ಚನ್ನಬಸಪ್ಪ ನಂದಿ, ಆರ್.ಕೆ.ಕದಂ ಇತರರು ಈ ಮಾರ್ಗದ ಸಮೀಕ್ಷೆಗೆ ಮುಂದಾಗುವಂತೆ ಪ್ರತ್ಯೇಕ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ, ಎಸ್.ಎನ್.ಘೋರ್ಪಡೆ, ಮಹಾಂತೇಶ ಮಂಗಳೂರು, ಮಂಜುನಾಥ ಮಹಾಲಿಂಗಪುರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>