<p><strong>ಕುಷ್ಟಗಿ</strong>: ಪಟ್ಟಣದ 5ನೇ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿರುವ ಒತ್ತುವರಿ ತೆರವುಗೊಳಿಸದೆ ಪುರಸಭೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸುತ್ತಿರುವುದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2024-25ನೇ ಹಣಕಾಸು ವರ್ಷದ ₹15 ಲಕ್ಷ ಅನುದಾನದಲ್ಲಿ ಕೆಆರ್ಐಡಿಎಲ್ ಏಜೆನ್ಸಿ ಕಾಂಕ್ರೀಟ್ ಮೂಲಕ ರಸ್ತೆ ಅಭಿವೃದ್ಧಿಗೆ ಮುಂದಾಗಿದೆ. ಈಗಾಗಲೇ ಒಂದಷ್ಟು ಕೆಲಸ ನಡೆಸಲಾಗಿದ್ದು ರಸ್ತೆಗೆ ಅಡ್ಡಲಾಗಿರುವ ಒತ್ತುವರಿ ತೆರವುಗೊಳಿಸದೆ ಕಾಟಾಚಾರಕ್ಕೆ ಕಾಮಗಾರಿ ಮುಗಿಸಿ ಕೈತೊಳೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ವಾರ್ಡ್ನ ನಿವಾಸಿ ಆರೋಪ.</p>.<p><span class="bold"><strong>ಮನವಿ:</strong> </span>ಈ ಮಧ್ಯೆ ರಸ್ತೆ ಜಾಗ ಅತಿಕ್ರಮಗಣ ತೆರವುಗೊಳಿಸದೆ ಕೆಲಸ ಮುಂದುವರೆಸದಂತೆ ಸಾರ್ವಜನಿಕರು ಪುರಸಭೆಗೆ ಒತ್ತಾಯಿಸಿದ್ದು ಈ ಕುರಿತು ಗುರುವಾರ ಮುಖ್ಯಾಧಿಕಾರಿ ವೆಂಕಪ್ಪ ಬೀಳಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಾಹಿತಿಗೆ ಸಂಪರ್ಕಿಸಿದರೆ ಮುಖ್ಯಾಧಿಕಾರಿ ಕರೆ ಸ್ವೀಕರಿಸಲಿಲ್ಲ.</p>.<p>ಈ ವಿಷಯ ಕುರಿತು ವಿವರಿಸಿದ ಕೆಆರ್ಐಡಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇರ್ಫಾನ್, ಒತ್ತುವರಿ ತೆರವಿಗೆ ಜನರು ಒತ್ತಾಯಿಸಿದ್ದು ಈ ವಿಷಯವನ್ನು ಪುರಸಭೆ ಗಮನಕ್ಕೆ ತರಲಾಗಿದೆ. ಪುರಸಭೆಯವರು ರಸ್ತೆ ಅಭಿವೃದ್ಧಿಗೆ ಅಗತ್ಯವಾಗಿರುವ ರಸ್ತೆ ಜಾಗವನ್ನು ಗುರುತಿಸಬೇಕಾಗುತ್ತದೆ. ಹಾಗಾಗಿ ಅಲ್ಲಿಯ ವರೆಗೂ ಕೆಲಸ ಸ್ಥಗಿತಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ಪಟ್ಟಣದ 5ನೇ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿರುವ ಒತ್ತುವರಿ ತೆರವುಗೊಳಿಸದೆ ಪುರಸಭೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸುತ್ತಿರುವುದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.</p>.<p>ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2024-25ನೇ ಹಣಕಾಸು ವರ್ಷದ ₹15 ಲಕ್ಷ ಅನುದಾನದಲ್ಲಿ ಕೆಆರ್ಐಡಿಎಲ್ ಏಜೆನ್ಸಿ ಕಾಂಕ್ರೀಟ್ ಮೂಲಕ ರಸ್ತೆ ಅಭಿವೃದ್ಧಿಗೆ ಮುಂದಾಗಿದೆ. ಈಗಾಗಲೇ ಒಂದಷ್ಟು ಕೆಲಸ ನಡೆಸಲಾಗಿದ್ದು ರಸ್ತೆಗೆ ಅಡ್ಡಲಾಗಿರುವ ಒತ್ತುವರಿ ತೆರವುಗೊಳಿಸದೆ ಕಾಟಾಚಾರಕ್ಕೆ ಕಾಮಗಾರಿ ಮುಗಿಸಿ ಕೈತೊಳೆದುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ವಾರ್ಡ್ನ ನಿವಾಸಿ ಆರೋಪ.</p>.<p><span class="bold"><strong>ಮನವಿ:</strong> </span>ಈ ಮಧ್ಯೆ ರಸ್ತೆ ಜಾಗ ಅತಿಕ್ರಮಗಣ ತೆರವುಗೊಳಿಸದೆ ಕೆಲಸ ಮುಂದುವರೆಸದಂತೆ ಸಾರ್ವಜನಿಕರು ಪುರಸಭೆಗೆ ಒತ್ತಾಯಿಸಿದ್ದು ಈ ಕುರಿತು ಗುರುವಾರ ಮುಖ್ಯಾಧಿಕಾರಿ ವೆಂಕಪ್ಪ ಬೀಳಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಾಹಿತಿಗೆ ಸಂಪರ್ಕಿಸಿದರೆ ಮುಖ್ಯಾಧಿಕಾರಿ ಕರೆ ಸ್ವೀಕರಿಸಲಿಲ್ಲ.</p>.<p>ಈ ವಿಷಯ ಕುರಿತು ವಿವರಿಸಿದ ಕೆಆರ್ಐಡಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇರ್ಫಾನ್, ಒತ್ತುವರಿ ತೆರವಿಗೆ ಜನರು ಒತ್ತಾಯಿಸಿದ್ದು ಈ ವಿಷಯವನ್ನು ಪುರಸಭೆ ಗಮನಕ್ಕೆ ತರಲಾಗಿದೆ. ಪುರಸಭೆಯವರು ರಸ್ತೆ ಅಭಿವೃದ್ಧಿಗೆ ಅಗತ್ಯವಾಗಿರುವ ರಸ್ತೆ ಜಾಗವನ್ನು ಗುರುತಿಸಬೇಕಾಗುತ್ತದೆ. ಹಾಗಾಗಿ ಅಲ್ಲಿಯ ವರೆಗೂ ಕೆಲಸ ಸ್ಥಗಿತಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>