<p>ಕುಷ್ಟಗಿ: ‘ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ. ಮಹಿಳೆಯರಿಗೆ ಸಮಾನತೆ, ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳು ಸಿಗಬೇಕಿದೆ’ ಎಂದು ಇತಿಹಾಸ ಉಪನ್ಯಾಸಕಿ ಪ್ರಿಯದರ್ಶಿನಿ ಆಮದಿಹಾಳ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜದ ಮುಖ್ಯವಾಹಿನಿಗೆ ಬರುವುದಕ್ಕೆ ಹಿಂದೆ ಅಡೆತಡೆಗಳಿದ್ದವು ಆದರೆ ಈಗ ಕಾಲ ಬದಲಾದಂತೆ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ಲಭ್ಯವಾಗುತ್ತಿವೆ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ದಾಪುಗಾಲು ಇಡುತ್ತಿದ್ದಾರೆ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯೆ ವಿದ್ಯಾವತಿ ಗೋಟೂರು ಮಾತನಾಡಿ, ‘ಮಹಿಳೆಯರ ಸುರಕ್ಷತೆಗೆ ಹಾಗೂ ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಲು ಸಮಾಜದ ಸಹಕಾರ ಅಗತ್ಯ’ ಎಂದರು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಲಾಯಿತು.</p>.<p>ಮಹಿಳಾ ಸಬಲೀಕರಣ ಘಟಕದ ಸಂಚಾಲಕಿ ಅನಿತಾ ಪಾಟೀಲ, ಉಪನ್ಯಾಸಕಿ ಅಂಜುಂ ಮತೀನ್, ದುರುಗೇಶ್, ಸುರೇಶ್, ನಿಂಗಪ್ಪ ಗೋಟೂರು, ಶಿವರಾಜ ಕೋಳೂರು, ಈರಣ್ಣ ಹುರಳಿ, ಅಮೀನ್ಸಾಬ್, ಪ್ರಕಾಶ್, ಪ್ರಕಾಶ್ ಬಳಗಾನೂರ, ಮಂಜುನಾಥ, ಸುರೇಶ ದಡ್ಡಿ ಸೇರಿದಂತೆ ಅನೇಕರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-35-1056608130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಷ್ಟಗಿ: ‘ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ. ಮಹಿಳೆಯರಿಗೆ ಸಮಾನತೆ, ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳು ಸಿಗಬೇಕಿದೆ’ ಎಂದು ಇತಿಹಾಸ ಉಪನ್ಯಾಸಕಿ ಪ್ರಿಯದರ್ಶಿನಿ ಆಮದಿಹಾಳ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮಾಜದ ಮುಖ್ಯವಾಹಿನಿಗೆ ಬರುವುದಕ್ಕೆ ಹಿಂದೆ ಅಡೆತಡೆಗಳಿದ್ದವು ಆದರೆ ಈಗ ಕಾಲ ಬದಲಾದಂತೆ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ಲಭ್ಯವಾಗುತ್ತಿವೆ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ದಾಪುಗಾಲು ಇಡುತ್ತಿದ್ದಾರೆ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯೆ ವಿದ್ಯಾವತಿ ಗೋಟೂರು ಮಾತನಾಡಿ, ‘ಮಹಿಳೆಯರ ಸುರಕ್ಷತೆಗೆ ಹಾಗೂ ಆತ್ಮಸ್ಥೈರ್ಯ ವೃದ್ಧಿಸಿಕೊಳ್ಳಲು ಸಮಾಜದ ಸಹಕಾರ ಅಗತ್ಯ’ ಎಂದರು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಲಾಯಿತು.</p>.<p>ಮಹಿಳಾ ಸಬಲೀಕರಣ ಘಟಕದ ಸಂಚಾಲಕಿ ಅನಿತಾ ಪಾಟೀಲ, ಉಪನ್ಯಾಸಕಿ ಅಂಜುಂ ಮತೀನ್, ದುರುಗೇಶ್, ಸುರೇಶ್, ನಿಂಗಪ್ಪ ಗೋಟೂರು, ಶಿವರಾಜ ಕೋಳೂರು, ಈರಣ್ಣ ಹುರಳಿ, ಅಮೀನ್ಸಾಬ್, ಪ್ರಕಾಶ್, ಪ್ರಕಾಶ್ ಬಳಗಾನೂರ, ಮಂಜುನಾಥ, ಸುರೇಶ ದಡ್ಡಿ ಸೇರಿದಂತೆ ಅನೇಕರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-35-1056608130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>