<p><strong>ಕುಷ್ಟಗಿ:</strong> ಇಲ್ಲಿಯ ರೈಲು ನಿಲ್ದಾಣದಿಂದ ಬೆಂಗಳೂರುವರೆಗೆ ರೈಲು ಸೇವೆ ಒದಗಿಸುವ ನಿಟ್ಟಿನಲ್ಲಿ ಎರಡು ತಿಂಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.</p>.<p>ಗುರುವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿ ರೈಲು ಸಂಪರ್ಕ ಸೇವೆಗೆ ಸಂಬಂಧಿಸಿದಂತೆ ರೈಲ್ವೆ ಹೋರಾಟ ಸಮಿತಿ ನಿಯೋಗ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪರಿಶೀಲನೆ ನಡೆಸಿ ನೂತನ ರೈಲ್ವೆ ಮಾರ್ಗದಲ್ಲಿ ಉತ್ತಮ ಸಂಪರ್ಕ ಸೇವೆಗೆ ಹೊಸರೂಪ ನೀಡಿ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.</p>.<p>ನಿಯೋಗದ ನೇತೃತ್ವ ವಹಿಸಿದ್ದ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು, ಕುಷ್ಟಗಿಯಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭಿಸುವುದು ಹೆಚ್ಚು ಅಗತ್ಯವಾಗಿದೆ. ಕುಷ್ಟಗಿ - ಕೊಪ್ಪಳ ಮಾರ್ಗವಾಗಿ ಅಥವಾ ಕುಷ್ಟಗಿ - ಹುಬ್ಬಳ್ಳಿ ಮಾರ್ಗವಾಗಿಯಾದರೂ ರೈಲು ಸೇವೆ ಆರಂಭಿಸಬೇಕು. ಆರಂಭಿಕ ಹಂತದಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿಗೆ ಬೋಗಿ ಸಂಪರ್ಕ ಕಲ್ಪಿಸುವುದಕ್ಕಾದರೂ ಕ್ರಮ ಕೈಗೊಳ್ಳುವಂತೆ ಸೋಮಣ್ಣ ಅವರಿಗೆ ಮನವಿ ಮಾಡಿದರು.</p>.<p>‘ರೈಲು ಸಂಚಾರ ಸೇವೆಯಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆ ತಪ್ಪಿಸುವುದು ಮತ್ತು ಸಮಯದ ಉಳಿತಾಯವಾಗುತ್ತದೆ. ಅದಕ್ಕಾಗಿ ಈ ವಿಷಯದಲ್ಲಿ ಹೊಸತನ ತರುವ ಚಿಂತನೆ ಇದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿನ ಹಲವಾರು ಮಾರ್ಗಗಳಲ್ಲಿ ರೈಲು ಸೇವೆ ಕಲ್ಪಿಸುವಲ್ಲಿ ಇಲಾಖೆ ಇತಿಹಾಸ ನಿರ್ಮಿಸಲಿದೆ. ಅದೇ ರೀತಿ ಗದಗ-ವಾಡಿವರೆಗಿನ ಮಾರ್ಗವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಬದ್ಧತೆ ತೋರಲಾಗುತ್ತದೆ' ಎಂದು ಸಚಿವ ಸೋಮಣ್ಣ ಹೇಳಿದ್ದಾಗಿ ನಿಯೋಗದ ಮೂಲಗಳು ತಿಳಿಸಿವೆ.</p>.<p>ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಕೆ.ಬಸವರಾಜ, ರೈಲ್ವೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ ಸೇರಿದಂತೆ ಸಮಿತಿ ಪ್ರತಿನಿಧಿಗಳು ನಿಯೋಗದಲ್ಲಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಇಲ್ಲಿಯ ರೈಲು ನಿಲ್ದಾಣದಿಂದ ಬೆಂಗಳೂರುವರೆಗೆ ರೈಲು ಸೇವೆ ಒದಗಿಸುವ ನಿಟ್ಟಿನಲ್ಲಿ ಎರಡು ತಿಂಗಳ ಒಳಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.</p>.<p>ಗುರುವಾರ ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿ ರೈಲು ಸಂಪರ್ಕ ಸೇವೆಗೆ ಸಂಬಂಧಿಸಿದಂತೆ ರೈಲ್ವೆ ಹೋರಾಟ ಸಮಿತಿ ನಿಯೋಗ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪರಿಶೀಲನೆ ನಡೆಸಿ ನೂತನ ರೈಲ್ವೆ ಮಾರ್ಗದಲ್ಲಿ ಉತ್ತಮ ಸಂಪರ್ಕ ಸೇವೆಗೆ ಹೊಸರೂಪ ನೀಡಿ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.</p>.<p>ನಿಯೋಗದ ನೇತೃತ್ವ ವಹಿಸಿದ್ದ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು, ಕುಷ್ಟಗಿಯಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭಿಸುವುದು ಹೆಚ್ಚು ಅಗತ್ಯವಾಗಿದೆ. ಕುಷ್ಟಗಿ - ಕೊಪ್ಪಳ ಮಾರ್ಗವಾಗಿ ಅಥವಾ ಕುಷ್ಟಗಿ - ಹುಬ್ಬಳ್ಳಿ ಮಾರ್ಗವಾಗಿಯಾದರೂ ರೈಲು ಸೇವೆ ಆರಂಭಿಸಬೇಕು. ಆರಂಭಿಕ ಹಂತದಲ್ಲಿ ಹಂಪಿ ಎಕ್ಸ್ಪ್ರೆಸ್ ರೈಲಿಗೆ ಬೋಗಿ ಸಂಪರ್ಕ ಕಲ್ಪಿಸುವುದಕ್ಕಾದರೂ ಕ್ರಮ ಕೈಗೊಳ್ಳುವಂತೆ ಸೋಮಣ್ಣ ಅವರಿಗೆ ಮನವಿ ಮಾಡಿದರು.</p>.<p>‘ರೈಲು ಸಂಚಾರ ಸೇವೆಯಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆ ತಪ್ಪಿಸುವುದು ಮತ್ತು ಸಮಯದ ಉಳಿತಾಯವಾಗುತ್ತದೆ. ಅದಕ್ಕಾಗಿ ಈ ವಿಷಯದಲ್ಲಿ ಹೊಸತನ ತರುವ ಚಿಂತನೆ ಇದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿನ ಹಲವಾರು ಮಾರ್ಗಗಳಲ್ಲಿ ರೈಲು ಸೇವೆ ಕಲ್ಪಿಸುವಲ್ಲಿ ಇಲಾಖೆ ಇತಿಹಾಸ ನಿರ್ಮಿಸಲಿದೆ. ಅದೇ ರೀತಿ ಗದಗ-ವಾಡಿವರೆಗಿನ ಮಾರ್ಗವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಬದ್ಧತೆ ತೋರಲಾಗುತ್ತದೆ' ಎಂದು ಸಚಿವ ಸೋಮಣ್ಣ ಹೇಳಿದ್ದಾಗಿ ನಿಯೋಗದ ಮೂಲಗಳು ತಿಳಿಸಿವೆ.</p>.<p>ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಕೆ.ಬಸವರಾಜ, ರೈಲ್ವೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ವೀರೇಶ ಬಂಗಾರಶೆಟ್ಟರ ಸೇರಿದಂತೆ ಸಮಿತಿ ಪ್ರತಿನಿಧಿಗಳು ನಿಯೋಗದಲ್ಲಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>