<p><strong>ಕೊಪ್ಪಳ: </strong>ಕೊರೊನಾ ಲಾಕ್ಡೌನ್ನಿಂದ ಕಾರ್ಮಿಕ ವಲಯಕ್ಕೆ ತಾಂತ್ರಿಕ ಕಾರಣದಿಂದ ಸರ್ಕಾರ ನೀಡಿದ ಸೌಲಭ್ಯ ದೊರೆಯುತ್ತಿಲ್ಲ ಎಂದು ಆರೋಪಿಸಿಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ, ಸಿಐಟಿಯು, ಎಐಯುಟಿಯುಸಿ, ಎಐಟಿಯುಸಿ, ಐಎನ್ಟಿಯುಸಿ ಸಂಘಟನೆಗಳ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಘಟಕದ ಸಂಚಾಲಕ ಶರಣು ಗಡ್ಡಿ ಮಾತನಾಡಿ, ಲಾಕ್ಡೌನ್ ಪರಿಹಾರವಾಗಿ 3ಸಾವಿರ ಘೋಷಣೆಯಾಗಿದೆ. ಆದರೆ ಕಾರ್ಮಿಕರ ಆಧಾರ್ ಕಾರ್ಡ್, ಬ್ಯಾಂಕ್ ವಿಲೀನದ ಗೊಂದಲ, ಐಎಫ್ಸಿ ಕೋಡ್ ಬದಲಾ ವಣೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಹಣ ಕೈಸೇರಿಲ್ಲ ಎಂದರು.</p>.<p>ದಿನಸಿ ಕಿಟ್, ಸುರಕ್ಷತಾ ಕಿಟ್ಗಳು ಸೇರಿದಂತೆ ಬಹುತೇಕ ಕಾರ್ಮಿಕರಿಗೆ ದೊರೆತಿಲ್ಲ. ಅರ್ಹ ಬಡ ಕಾರ್ಮಿಕರ ಖಾತೆಗೆ ಹಣ ಇನ್ನೂ ಬರುತ್ತಿಲ್ಲ. ಈ ಕುರಿತು ಸಂಬಂಧಿಸಿದವರಿಗೆ ಮೇಲಿಂದ ಮೇಲೆ ಗಮನಕ್ಕೆ ತಂದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಷಣ್ಮುಖ, ಸುರೇಶ, ಶ್ಯಾಮ್ ಸುಂದರ್, ಪರಸಪ್ಪ, ಈರಪ್ಪ ಶಾಸ್ತ್ರಿ, ತಿರುಪತಿ, ಇಮಾಮಸಾಬ್, ದುರ್ಗಪ್ಪ, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಕೊರೊನಾ ಲಾಕ್ಡೌನ್ನಿಂದ ಕಾರ್ಮಿಕ ವಲಯಕ್ಕೆ ತಾಂತ್ರಿಕ ಕಾರಣದಿಂದ ಸರ್ಕಾರ ನೀಡಿದ ಸೌಲಭ್ಯ ದೊರೆಯುತ್ತಿಲ್ಲ ಎಂದು ಆರೋಪಿಸಿಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ, ಸಿಐಟಿಯು, ಎಐಯುಟಿಯುಸಿ, ಎಐಟಿಯುಸಿ, ಐಎನ್ಟಿಯುಸಿ ಸಂಘಟನೆಗಳ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಘಟಕದ ಸಂಚಾಲಕ ಶರಣು ಗಡ್ಡಿ ಮಾತನಾಡಿ, ಲಾಕ್ಡೌನ್ ಪರಿಹಾರವಾಗಿ 3ಸಾವಿರ ಘೋಷಣೆಯಾಗಿದೆ. ಆದರೆ ಕಾರ್ಮಿಕರ ಆಧಾರ್ ಕಾರ್ಡ್, ಬ್ಯಾಂಕ್ ವಿಲೀನದ ಗೊಂದಲ, ಐಎಫ್ಸಿ ಕೋಡ್ ಬದಲಾ ವಣೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಹಣ ಕೈಸೇರಿಲ್ಲ ಎಂದರು.</p>.<p>ದಿನಸಿ ಕಿಟ್, ಸುರಕ್ಷತಾ ಕಿಟ್ಗಳು ಸೇರಿದಂತೆ ಬಹುತೇಕ ಕಾರ್ಮಿಕರಿಗೆ ದೊರೆತಿಲ್ಲ. ಅರ್ಹ ಬಡ ಕಾರ್ಮಿಕರ ಖಾತೆಗೆ ಹಣ ಇನ್ನೂ ಬರುತ್ತಿಲ್ಲ. ಈ ಕುರಿತು ಸಂಬಂಧಿಸಿದವರಿಗೆ ಮೇಲಿಂದ ಮೇಲೆ ಗಮನಕ್ಕೆ ತಂದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಮುಖಂಡರಾದ ಷಣ್ಮುಖ, ಸುರೇಶ, ಶ್ಯಾಮ್ ಸುಂದರ್, ಪರಸಪ್ಪ, ಈರಪ್ಪ ಶಾಸ್ತ್ರಿ, ತಿರುಪತಿ, ಇಮಾಮಸಾಬ್, ದುರ್ಗಪ್ಪ, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>