<p><strong>ಕನಕಗಿರಿ</strong>: ತಾಲ್ಲೂಕಿನ ಬಸರಿಹಾಳ ಗ್ರಾಮದ ಕೆರೆ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರಕ್ಕೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ.</p>.<p>ಕೆರೆಯ ನೀರು ಗೌರಿಪುರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಹರಿಯುತ್ತಿದ್ದು ಪಾದಚಾರಿಗಳು, ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ. ರಸ್ತೆಯಲ್ಲಿ ಹಾಕಿದ ಡಾಂಬರ್ ಕಿತ್ತು ಹೋಗಿದ್ದು ಬೃಹತ್ ಪ್ರಮಾಣದ ತೆಗ್ಗುಗುಂಡಿಗಳು ನಿರ್ಮಾಣವಾಗಿವೆ.</p>.<p>ಟಾಟಾ ಏಸ್ ವಾಹನದಲ್ಲಿ ಅಡುಗೆ ಅನಿಲವನ್ನು ಗೌರಿಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾಗ ವಾಹನ ಒಂದೆಡೆ ವಾಲಿದ್ದು, ಅದೃಷ್ಟಕ್ಕೆ ಅನಾಹುತ ತಪ್ಪಿದೆ. ರಸ್ತೆ ಮೇಲೆ ನೀರು ಹರಿಯುತ್ತಿರುವುದು ಹಾಗೂ ರಸ್ತೆ ಹದಗೆಟ್ಟಿರುವುದರಿಂದ ಯಲಬುರ್ಗಾ, ಕನಕಗಿರಿಗೆ ಹೋಗುವ ಬಸ್ಗಳ ಓಡಾಟ ಸ್ಥಗಿತಗೊಂಡಿದೆ.</p>.<p>‘ಬಸರಿಹಾಳದಿಂದ ಗೌರಿಪುರದ ರಸ್ತೆ ಮೂಲಕ ಹೋಗುವ ಬದಲಾಗಿ ಬೈಲಕ್ಕುಂಪುರ ಗ್ರಾಮದ ಮೂಲಕ ಕನಕಗಿರಿ, ಯಲಬುರ್ಗಾಕ್ಕೆ ಹೋಗಲಾಗುತ್ತಿದೆ. ಇದರಿಂದ ಬಸರಿಹಾಳ ಗ್ರಾಮದ ಜನರಿಗೆ ತೊಂದರೆಯಾಗುತ್ತಿದೆ’ ಎಂದು ಉಪನ್ಯಾಸಕ ಬಾಲಪ್ಪ ತಿಳಿಸಿದರು.</p>.<p>ಕೆರೆಯ ನೀರು ಕೆರೆ ಸುತ್ತಮುತ್ತಲ್ಲಿನ ಹೊಲಗಳಲ್ಲಿಯೂ ಹರಿದು ಬೆಳೆಗಳಿಗೂ ಹಾನಿ ಮಾಡಿದೆ. ರೈತರು ಬೆಳೆ ಕಟಾವ್ ಮಾಡುವ ಸಮಯದಲ್ಲಿ ನೀರು ಹೊಲದಲ್ಲಿ ನಿಂತಿರುವುದರಿಂದ ಸಮಸ್ಯೆಯಾಗಿದೆ ಎಂದು ರೈತ ಕನಕಪ್ಪ ಕುಟಗಮರಿ ತಿಳಿಸಿದರು.</p>.<p>ರಸ್ತೆಯಲ್ಲಿ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ತಾಲ್ಲೂಕಿನ ಬಸರಿಹಾಳ ಗ್ರಾಮದ ಕೆರೆ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರಕ್ಕೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ.</p>.<p>ಕೆರೆಯ ನೀರು ಗೌರಿಪುರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಹರಿಯುತ್ತಿದ್ದು ಪಾದಚಾರಿಗಳು, ವಾಹನ ಸವಾರರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ. ರಸ್ತೆಯಲ್ಲಿ ಹಾಕಿದ ಡಾಂಬರ್ ಕಿತ್ತು ಹೋಗಿದ್ದು ಬೃಹತ್ ಪ್ರಮಾಣದ ತೆಗ್ಗುಗುಂಡಿಗಳು ನಿರ್ಮಾಣವಾಗಿವೆ.</p>.<p>ಟಾಟಾ ಏಸ್ ವಾಹನದಲ್ಲಿ ಅಡುಗೆ ಅನಿಲವನ್ನು ಗೌರಿಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾಗ ವಾಹನ ಒಂದೆಡೆ ವಾಲಿದ್ದು, ಅದೃಷ್ಟಕ್ಕೆ ಅನಾಹುತ ತಪ್ಪಿದೆ. ರಸ್ತೆ ಮೇಲೆ ನೀರು ಹರಿಯುತ್ತಿರುವುದು ಹಾಗೂ ರಸ್ತೆ ಹದಗೆಟ್ಟಿರುವುದರಿಂದ ಯಲಬುರ್ಗಾ, ಕನಕಗಿರಿಗೆ ಹೋಗುವ ಬಸ್ಗಳ ಓಡಾಟ ಸ್ಥಗಿತಗೊಂಡಿದೆ.</p>.<p>‘ಬಸರಿಹಾಳದಿಂದ ಗೌರಿಪುರದ ರಸ್ತೆ ಮೂಲಕ ಹೋಗುವ ಬದಲಾಗಿ ಬೈಲಕ್ಕುಂಪುರ ಗ್ರಾಮದ ಮೂಲಕ ಕನಕಗಿರಿ, ಯಲಬುರ್ಗಾಕ್ಕೆ ಹೋಗಲಾಗುತ್ತಿದೆ. ಇದರಿಂದ ಬಸರಿಹಾಳ ಗ್ರಾಮದ ಜನರಿಗೆ ತೊಂದರೆಯಾಗುತ್ತಿದೆ’ ಎಂದು ಉಪನ್ಯಾಸಕ ಬಾಲಪ್ಪ ತಿಳಿಸಿದರು.</p>.<p>ಕೆರೆಯ ನೀರು ಕೆರೆ ಸುತ್ತಮುತ್ತಲ್ಲಿನ ಹೊಲಗಳಲ್ಲಿಯೂ ಹರಿದು ಬೆಳೆಗಳಿಗೂ ಹಾನಿ ಮಾಡಿದೆ. ರೈತರು ಬೆಳೆ ಕಟಾವ್ ಮಾಡುವ ಸಮಯದಲ್ಲಿ ನೀರು ಹೊಲದಲ್ಲಿ ನಿಂತಿರುವುದರಿಂದ ಸಮಸ್ಯೆಯಾಗಿದೆ ಎಂದು ರೈತ ಕನಕಪ್ಪ ಕುಟಗಮರಿ ತಿಳಿಸಿದರು.</p>.<p>ರಸ್ತೆಯಲ್ಲಿ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>