ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಭವದ ಲಕ್ಷ ತುಳಸಿ ಅರ್ಚನೆ

Last Updated 28 ನವೆಂಬರ್ 2022, 4:18 IST
ಅಕ್ಷರ ಗಾತ್ರ

ಕೊಪ್ಪಳ: ಇಲ್ಲಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ಶನಿವಾರ ಲಕ್ಷ ತುಳಸಿ ಅರ್ಚನೆ ಮತ್ತು ರಾಯರ ಬೃಂದಾವನ ಪ್ರತಿಷ್ಠಾಪಿಸಿದ ರಘುವೀರತೀರ್ಥ ಶ್ರೀಪಾದಂಗಳವರ ಆರಾಧನಾ ಮಹೋತ್ಸವ ವೈಭವದಿಂದ ಜರುಗಿತು.

ಮಠದಲ್ಲಿ ಕಾರ್ತಿಕ ದಾಮೋದರನಿಗೆ ಲಕ್ಷ ತುಳಸಿಯಿಂದ ಅರ್ಚನೆ ಮಾಡಲಾಯಿತು. ಸುಪ್ರಭಾತ, ವಿಷ್ಣು ಸಹಸ್ರನಾಮ ಪಾರಾಯಣ, ಶ್ರೀನಿವಾಸ ಕಲ್ಯಾಣ ಪಾರಾಯಣ, ಗ್ರಾಮ ಪ್ರದಕ್ಷಣೆ, ನೈವೇದ್ಯ, ಹಸ್ತೋದಕ, ಬೆಂಗಳೂರಿನ ಅಂಬರೀಷಾಚಾರ್‌ ಅವರಿಂದ ಪ್ರವಚನ, ಹುಬ್ಬಳ್ಳಿಯ ಕೃಷ್ಣೇಂದ್ರ ವಾಡೇಕರ್‌ ಅವರಿಂದ ಭಕ್ತಿ ಸಂಗೀತ ಮತ್ತು ದಿಪೋತ್ಸವ ಹಮ್ಮಿಕೊಳ್ಳಲಾಗಿತ್ತು.

ದೀಪೋತ್ಸವ ಸಮಯದಲ್ಲಿ ಮಠದ ಆವರಣದಲ್ಲಿ ವಿದ್ಯುತ್‌ ದೀಪಗಳನ್ನು ಬಂದ್ ಮಾಡಿ ದೀಪಗಳನ್ನು ಹಚ್ಚಿ ಆವರಣದ ಅಂದ ಹೆಚ್ಚಿಸುವಂತೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT