ತಾಲ್ಲೂಕಿನಲ್ಲಿ ಮೆಕ್ಕೆಜೋಳವನ್ನೇ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಬೆಳೆಯು ವಿವಿಧ ರೀತಿಯಲ್ಲಿ ನಾಶಕ್ಕೆ ಕಾರಣವಾಗಿದೆ. ಪ್ರಕೃತಿ ವಿಕೋಪದಿಂದಾದ ಈ ನಾಶಕ್ಕೆ ಸರ್ಕಾರ ಸೂಕ್ತ ಪರಿಹಾರ ಘೋಷಣೆ ಮಾಡಬೇಕಾಗಿದೆ. ಅನೇಕ ಕಡೆ ಯಾವುದೇ ರೋಗ ಬಾಧೆ ಕಾಣಸಿಕೊಳ್ಳದಿದ್ದರೂ ಹೆಚ್ಚಿನ ತೇವಾಂಶದಿಂದ ಬೆಳೆ ಕೊಳೆತು ಹೋಗಿ ಸಂಪೂರ್ಣ ನಾಶವಾಗುತ್ತಿದೆ. ಈ ಕಾರಣದಿಂದ ಪರಿಹಾರ ಒದಗಿಸಿ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಮುಂದಾಗಬೇಕು ಎಂದು ರಕ್ಷಣಾ ವೇದಿಕೆಯ ಶಿವಕುಮಾರ ನಾಗನಗೌಡ್ರ ಆಗ್ರಹಿಸಿದ್ದಾರೆ.