<p><strong>ಕೊಪ್ಪಳ: ‘</strong>ಕಲ್ಯಾಣ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನೆಲೆ ಕಳೆದುಕೊಂಡಿದೆ. ಅಲ್ಲಿ ಬಕೆಟ್ ಹಿಡಿಯುವವರಿಗೆ ಆದ್ಯತೆ ನೀಡಲಾಗುತ್ತದೆ’ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರದೀಪ್ಗೌಡ ಪಾಟೀಲ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕ.ಕ ಭಾಗವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಮನನೊಂದು ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ಅವರು ತಿಳಿಸಿದರು.</p>.<p>ದಶಕದಿಂದ ಪಕ್ಷ ಸಂಘಟನೆಗಾಗಿ ದುಡಿದಿದ್ದೇನೆ. ಆದರೆ, ಸೂಕ್ತ ಸ್ಥಾನಮಾನ ದೊರೆಯಲಿಲ್ಲ. ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಆಗಲೂ ವರಿಷ್ಠರು ಬೆಂಬಲ ನೀಡಲಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ ಎಂದರು.</p>.<p>ನನ್ನ ಹಿಂದೆಯೇ ಜಿಲ್ಲೆಯ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ. ಕ್ಷೇತ್ರದ ಜನರು ನನ್ನ ಬೆಂಬಲಕ್ಕಿದ್ದು, ಎಲ್ಲರೊಡನೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುವೆ ಎಂದರು.</p>.<p>ಪ್ರದೀಪಗೌಡ ಕೊಪ್ಪಳ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದು, ಅಳವಂಡಿ-ಕವಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಬಿಜೆಪಿ ಅವರನ್ನು ಸಂಪರ್ಕಿಸಿದ್ದು, ನಿರ್ಧಾರ ಕೈಗೊಂಡಿಲ್ಲ. ಗ್ರಾಮೀಣ ಭಾಗದಲ್ಲಿ ಬಿಜೆಪಿ ದುರ್ಬಲವಿದ್ದು, ಪ್ರದೀಪ್ಗೌಡ ಪಾಟೀಲ ಪಕ್ಷ ಸೇರಿದರೆ ಲಾಭವಾಗಲಿದೆ ಎಂಬುವುದು ಪಕ್ಷದ ಮುಖಂಡರ ಅಂಬೋಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: ‘</strong>ಕಲ್ಯಾಣ ಕರ್ನಾಟಕ ಭಾಗದಲ್ಲಿ ಜೆಡಿಎಸ್ ನೆಲೆ ಕಳೆದುಕೊಂಡಿದೆ. ಅಲ್ಲಿ ಬಕೆಟ್ ಹಿಡಿಯುವವರಿಗೆ ಆದ್ಯತೆ ನೀಡಲಾಗುತ್ತದೆ’ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರದೀಪ್ಗೌಡ ಪಾಟೀಲ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕ.ಕ ಭಾಗವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಮನನೊಂದು ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ಅವರು ತಿಳಿಸಿದರು.</p>.<p>ದಶಕದಿಂದ ಪಕ್ಷ ಸಂಘಟನೆಗಾಗಿ ದುಡಿದಿದ್ದೇನೆ. ಆದರೆ, ಸೂಕ್ತ ಸ್ಥಾನಮಾನ ದೊರೆಯಲಿಲ್ಲ. ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಆಗಲೂ ವರಿಷ್ಠರು ಬೆಂಬಲ ನೀಡಲಿಲ್ಲ. ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ ಎಂದರು.</p>.<p>ನನ್ನ ಹಿಂದೆಯೇ ಜಿಲ್ಲೆಯ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ. ಕ್ಷೇತ್ರದ ಜನರು ನನ್ನ ಬೆಂಬಲಕ್ಕಿದ್ದು, ಎಲ್ಲರೊಡನೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸುವೆ ಎಂದರು.</p>.<p>ಪ್ರದೀಪಗೌಡ ಕೊಪ್ಪಳ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದು, ಅಳವಂಡಿ-ಕವಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಬಿಜೆಪಿ ಅವರನ್ನು ಸಂಪರ್ಕಿಸಿದ್ದು, ನಿರ್ಧಾರ ಕೈಗೊಂಡಿಲ್ಲ. ಗ್ರಾಮೀಣ ಭಾಗದಲ್ಲಿ ಬಿಜೆಪಿ ದುರ್ಬಲವಿದ್ದು, ಪ್ರದೀಪ್ಗೌಡ ಪಾಟೀಲ ಪಕ್ಷ ಸೇರಿದರೆ ಲಾಭವಾಗಲಿದೆ ಎಂಬುವುದು ಪಕ್ಷದ ಮುಖಂಡರ ಅಂಬೋಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>