ಪ್ರದೀಪಗೌಡ ಕೊಪ್ಪಳ ಜಿಲ್ಲೆಯ ಪ್ರಭಾವಿ ಜೆಡಿಎಸ್ ಮುಖಂಡರಾಗಿದ್ದು, ಅಳವಂಡಿ-ಕವಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಬಿಜೆಪಿ ಅವರನ್ನು ಸಂಪರ್ಕಿಸಿದ್ದು, ನಿರ್ಧಾರ ಕೈಗೊಂಡಿಲ್ಲ. ಗ್ರಾಮೀಣ ಭಾಗದಲ್ಲಿ ಬಿಜೆಪಿ ದುರ್ಬಲವಿದ್ದು, ಪ್ರದೀಪ್ಗೌಡ ಪಾಟೀಲ ಪಕ್ಷ ಸೇರಿದರೆ ಲಾಭವಾಗಲಿದೆ ಎಂಬುವುದು ಪಕ್ಷದ ಮುಖಂಡರ ಅಂಬೋಣವಾಗಿದೆ.