ಅದೇ ರೀತಿ ಸುತ್ತಲಿನ ಅನೇಕ ಹಳ್ಳಿಗಳಲ್ಲಿ ಎಲೆಬಳ್ಳಿ, ಬಾಳೆ ಗಿಡ, ಪಪ್ಪಾಯಿ ಮತ್ತಿತರೆ ಬೆಳೆಗಳಿಗಳಿಗೂ ಬಹಳಷ್ಟು ಹಾನಿ ಸಂಭವಿಸಿದೆ, ಮಾವಿನ ಕಾಯಿಗಳು ಉದುರಿಬಿದ್ದಿವೆ ಎಂದು ಮೂಲಗಳು ತಿಳಿಸಿವೆ. ನೈಸರ್ಗಿಕ ವಿಕೋಪದಿಂದ ಬೆಳೆಹಾನಿ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು, ಈ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸಬೇಕು ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.