ಕೊಪ್ಪಳ:ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ವತಿಯಿಂದ ಕೃಷಿ ಮತ್ತು ಉಸ್ತುವಾರಿ ಸಚಿವ ಸಚಿವ ಬಿ.ಸಿ.ಪಾಟೀಲ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಅಧಿವೇಶನದಲ್ಲಿ ಮಾತನಾಡಬೇಕು. ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಪ್ರಮುಖವಾಗಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು. ಯಾವುದೇ ಕಾರಣಕ್ಕೂ ಉಪನ್ಯಾಸಕರನ್ನು ಸೇವೆಯಿಂದ ತೆಗೆಯಬಾರದು ಎಂದು ಅವರು ಆಗ್ರಹಿಸಿದರು.
ಬಾಕಿ ಇರುವ ವೇತನವನ್ನು ಈ ಕೂಡಲೇ ಪಾವತಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಸಮಿತಿಯ ಜಿಲ್ಲಾ ಸಂಚಾಲಕ ಶರಣಬಸವ ಪಾಟೀಲ್, ಸಂಯೋಜಕ ಶರಣು ಗಡ್ಡಿ, ಉಪನ್ಯಾಸಕರಾದ ಮಹಾಂತೇಶ್ ನೆಲಗಣಿ, ಕಲ್ಲಯ್ಯ ವಿ.ಪೂಜಾರ್, ಬಸವರಾಜ್ ಆರ್. ಹುಳಕಣ್ಣನವರ್, ಶಿವಪ್ರಸಾದ್ ಹಾದಿಮನಿ, ಗವಿಸಿದ್ದಯ್ಯ ಒಡೆಯರ್ ಇದ್ದರು.