ಈ ವಿಷಯ ಕುರಿತು ಶನಿವಾರ ಇಲ್ಲಿ ಹೇಳಿಕೆ ನೀಡಿದ ಅವರು, ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿನ ಷರತ್ತಿನ ಪ್ರಕಾರ ಉದ್ಯಾನ, ನಾಗರಿಕ ಸೌಲಭ್ಯಕ್ಕೆ ಮೀಸಲಾದ ಸರ್ಕಾರದ ಜಾಗಗಳು ಸರ್ಕಾರದ ಆಸ್ತಿಯಾಗಿರುತ್ತವೆ. ಆದರೆ ಅನೇಕ ವರ್ಷಗಳು ಕಳೆದರೂ ಬಡಾವಣೆ ಮಾಲೀಕರು ಸರ್ಕಾರದ ನಿಯಮಗಳನ್ನು ಕಡೆಗಣಿಸಿದ್ದಾರೆ. ಹಾಗಾಗಿ ಕಟ್ಟಡಗಳು ಅಥವಾ ಯಾವುದೇ ನಿರ್ಮಾಣಗಳಿದ್ದರೂ ಇದ್ದ ಸ್ಥಿತಿಯಲ್ಲಿ ಅವುಗಳನ್ನು ಪುರಸಭೆಗೆ ಒಪ್ಪಿಸಬೇಕು ಮತ್ತು ಸರ್ಕಾರಕ್ಕೆ ನೋಂದಣಿ ಕಡ್ಡಾಯವಾಗಿ ಮಾಡಿಸಿಕೊಡಲೇ ಬೇಕು. ಈ ಕಾರಣಕ್ಕೆ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಂದೊಮ್ಮೆ ಅದಕ್ಕೆ ಮಣಿಯದಿದ್ದರೆ ಪುರಸಭೆ ಮುಲಾಜಿಲ್ಲದೆ ಕಾನೂನು ಕ್ರಮಗಳನ್ನು ಜರುಗಿಸಲಿದೆ ಎಂದರು.