<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿಯ ವಾಲಿಕಿಲ್ಲಾ ಆದಿಶಕ್ತಿ ದೇಗುಲದ ಬಳಿ ಶನಿವಾರ ಚಿರತೆಯ ದಾಳಿಯಿಂದ ಹೈದರಾಬಾದ್ನ ಹೃತಿಕ್ (9) ಎಂಬ ಬಾಲಕ ಗಾಯಗೊಂಡಿದ್ದಾನೆ.</p>.<p>ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹೃತಿಕ್ಗೆ ಹಿಂಬದಿಯಿಂದ ಚಿರತೆ ದಾಳಿ ಮಾಡಿತು. ಪೋಷಕರು ಮತ್ತು ಪ್ರವಾಸಿಗರು ಒಮ್ಮೆಲೇ ಕೂಗಿಕೊಂಡ ಕಾರಣ ಚಿರತೆ ಓಡಿ ಹೋಯಿತು. ಹೃತಿಕ್ ತಲೆಗೆ ಪರಚಿದ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.</p>.<p class="Subhead">ಡಿಎಫ್ಒ ಭೇಟಿ: ಚಿರತೆ ದಾಳಿ ಹಿನ್ನೆಲೆಯಲ್ಲಿ ಭಾನುವಾರ ತಾಲ್ಲೂಕಿನ ಆನೆಗೊಂದಿ, ಸಾಣಾಪೂರ, ಹನುಮನಹಳ್ಳಿ ಜಂಗ್ಲಿ ರಂಗಾಪೂರ ಗುಡ್ಡ ಪ್ರದೇಶಕ್ಕೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು, ತಾಲ್ಲೂಕು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಜಂಗ್ಲಿ ರಂಗಾಪುರದಲ್ಲಿ ಚಿರತೆ ಸೆರೆಗಾಗಿ ಎರಡು ಬೋನುಗಳನ್ನು ಇಡಲು ಅವರು ಸೂಚಿಸಿದ್ದಾರೆ.</p>.<p>ತಾಲ್ಲೂಕಿನ ಆನೆಗೊಂದಿ, ಜಂಗ್ಲಿ ರಂಗಾಪುರ, ಚಿಕ್ಕ ರಾಂಪುರ ಮತ್ತು ಅಂಜನಾದ್ರಿಯಲ್ಲಿ ಎರಡು ದಿನಗಳಿಂದ ಚಿರತೆ ಮತ್ತು ಕರಡಿಗಳು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಜಂಗ್ಲಿ ರಂಗಾಪುರದಲ್ಲಿ ಈಚೆಗೆ ಜಾನುವಾರು ಮೇಯಿಸಲು ಹೋಗಿದ್ದ ಮಹಿಳೆ ಮೇಲೂ ಚಿರತೆ ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿಯ ವಾಲಿಕಿಲ್ಲಾ ಆದಿಶಕ್ತಿ ದೇಗುಲದ ಬಳಿ ಶನಿವಾರ ಚಿರತೆಯ ದಾಳಿಯಿಂದ ಹೈದರಾಬಾದ್ನ ಹೃತಿಕ್ (9) ಎಂಬ ಬಾಲಕ ಗಾಯಗೊಂಡಿದ್ದಾನೆ.</p>.<p>ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹೃತಿಕ್ಗೆ ಹಿಂಬದಿಯಿಂದ ಚಿರತೆ ದಾಳಿ ಮಾಡಿತು. ಪೋಷಕರು ಮತ್ತು ಪ್ರವಾಸಿಗರು ಒಮ್ಮೆಲೇ ಕೂಗಿಕೊಂಡ ಕಾರಣ ಚಿರತೆ ಓಡಿ ಹೋಯಿತು. ಹೃತಿಕ್ ತಲೆಗೆ ಪರಚಿದ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.</p>.<p class="Subhead">ಡಿಎಫ್ಒ ಭೇಟಿ: ಚಿರತೆ ದಾಳಿ ಹಿನ್ನೆಲೆಯಲ್ಲಿ ಭಾನುವಾರ ತಾಲ್ಲೂಕಿನ ಆನೆಗೊಂದಿ, ಸಾಣಾಪೂರ, ಹನುಮನಹಳ್ಳಿ ಜಂಗ್ಲಿ ರಂಗಾಪೂರ ಗುಡ್ಡ ಪ್ರದೇಶಕ್ಕೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು, ತಾಲ್ಲೂಕು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಜಂಗ್ಲಿ ರಂಗಾಪುರದಲ್ಲಿ ಚಿರತೆ ಸೆರೆಗಾಗಿ ಎರಡು ಬೋನುಗಳನ್ನು ಇಡಲು ಅವರು ಸೂಚಿಸಿದ್ದಾರೆ.</p>.<p>ತಾಲ್ಲೂಕಿನ ಆನೆಗೊಂದಿ, ಜಂಗ್ಲಿ ರಂಗಾಪುರ, ಚಿಕ್ಕ ರಾಂಪುರ ಮತ್ತು ಅಂಜನಾದ್ರಿಯಲ್ಲಿ ಎರಡು ದಿನಗಳಿಂದ ಚಿರತೆ ಮತ್ತು ಕರಡಿಗಳು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಜಂಗ್ಲಿ ರಂಗಾಪುರದಲ್ಲಿ ಈಚೆಗೆ ಜಾನುವಾರು ಮೇಯಿಸಲು ಹೋಗಿದ್ದ ಮಹಿಳೆ ಮೇಲೂ ಚಿರತೆ ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>