ಡಿಎಫ್ಒ ಭೇಟಿ: ಚಿರತೆ ದಾಳಿ ಹಿನ್ನೆಲೆಯಲ್ಲಿ ಭಾನುವಾರ ತಾಲ್ಲೂಕಿನ ಆನೆಗೊಂದಿ, ಸಾಣಾಪೂರ, ಹನುಮನಹಳ್ಳಿ ಜಂಗ್ಲಿ ರಂಗಾಪೂರ ಗುಡ್ಡ ಪ್ರದೇಶಕ್ಕೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು, ತಾಲ್ಲೂಕು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಜಂಗ್ಲಿ ರಂಗಾಪುರದಲ್ಲಿ ಚಿರತೆ ಸೆರೆಗಾಗಿ ಎರಡು ಬೋನುಗಳನ್ನು ಇಡಲು ಅವರು ಸೂಚಿಸಿದ್ದಾರೆ.