<p><strong>ಕುಕನೂರು</strong>: ‘ಕೋವಿಡ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಚರಿಸುತ್ತಿರುವ ಮಾಸ್ಕ್ ದಿನಾಚರಣೆಯು ಬದಲಾದ ಕಾಲಮಾನದ ಮತ್ತು ಅವಶ್ಯಕತೆಯ ಸಂಕೇತ. ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೊನಾ ತಡೆಯೋಣ’ ಎಂದು ಪಟ್ಟಣ ಪಂಚಾಯಿತಿ ಸಿಬ್ಬಂದಿ ಬಸಯ್ಯ ಪೊಲೀಸ್ ಪಾಟೀಲ ಹೇಳಿದರು.</p>.<p>ಪಟ್ಟಣ ಪಂಚಾಯಿತಿ ವತಿಯಿಂದ ಶುಕ್ರವಾರ ಇಲ್ಲಿ ನಡೆದ ಮಾಸ್ಕ್ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಜನರು ಎಲ್ಲೆಂದರಲ್ಲಿ, ಕಟ್ಟೆಗಳ ಮೇಲೆ ಗುಂಪಾಗಿ ಕುಳಿತು ಚರ್ಚಿಸುವುದು, ಒಟ್ಟಾಗಿ ಕುಳಿತುಕೊಳ್ಳುವುದು ಮಾಡುತ್ತಿದ್ದಾರೆ. ಈ ರೀತಿ ನಡೆದುಕೊಳ್ಳುವುದು ಅವರ ಜೀವಕ್ಕೆ ಅಪಾಯ ಎನ್ನುವ ಸಂದೇಶವನ್ನು ಅವರಿಗೆ ತಲುಪಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಜೀವನ ನಿರ್ವಹಿಸಬೇಕು ಎಂದು ತಿಳಿಸಬೇಕು ಎಂದರು.</p>.<p>ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು, ಆಗಾಗ್ಗೆ ಕೈತೊಳೆದುಕೊಳ್ಳುವ ಮೂಲಕ ಕೊರೊನಾ ಸೋಂಕಿನ ವಿರುದ್ಧ ಜಯ ಸಾಧಿಸಬಹುದು ಎನ್ನುವ ಸಂದೇಶವನ್ನು ತಲುಪಿಸುವುದೇ ಮಾಸ್ಕ್ ದಿನಾಚರಣೆಯ ಉದ್ದೇಶ ಎಂದು ತಿಳಿಸಿದರು.</p>.<p>ಪ್ರಕಾಶ್ ಬಂಡಿ , ಶ್ರೀಕಾಂತ್ ಬಾರಿಗಿಡದ, ವೇದಾವತಿ, ಎಂ.ಡಿ ರಾಜೇಶ್ವರಿ ಜಗದೀಶ ಚಲವಾದಿ, ಮಂಜುನಾಥ್ ಪೊಲೀಸ್ ಪಾಟೀಲ, ಮನೋಹರ ಹಾಗೂ ಪೌರ ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು</strong>: ‘ಕೋವಿಡ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಚರಿಸುತ್ತಿರುವ ಮಾಸ್ಕ್ ದಿನಾಚರಣೆಯು ಬದಲಾದ ಕಾಲಮಾನದ ಮತ್ತು ಅವಶ್ಯಕತೆಯ ಸಂಕೇತ. ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೊನಾ ತಡೆಯೋಣ’ ಎಂದು ಪಟ್ಟಣ ಪಂಚಾಯಿತಿ ಸಿಬ್ಬಂದಿ ಬಸಯ್ಯ ಪೊಲೀಸ್ ಪಾಟೀಲ ಹೇಳಿದರು.</p>.<p>ಪಟ್ಟಣ ಪಂಚಾಯಿತಿ ವತಿಯಿಂದ ಶುಕ್ರವಾರ ಇಲ್ಲಿ ನಡೆದ ಮಾಸ್ಕ್ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಜನರು ಎಲ್ಲೆಂದರಲ್ಲಿ, ಕಟ್ಟೆಗಳ ಮೇಲೆ ಗುಂಪಾಗಿ ಕುಳಿತು ಚರ್ಚಿಸುವುದು, ಒಟ್ಟಾಗಿ ಕುಳಿತುಕೊಳ್ಳುವುದು ಮಾಡುತ್ತಿದ್ದಾರೆ. ಈ ರೀತಿ ನಡೆದುಕೊಳ್ಳುವುದು ಅವರ ಜೀವಕ್ಕೆ ಅಪಾಯ ಎನ್ನುವ ಸಂದೇಶವನ್ನು ಅವರಿಗೆ ತಲುಪಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಜೀವನ ನಿರ್ವಹಿಸಬೇಕು ಎಂದು ತಿಳಿಸಬೇಕು ಎಂದರು.</p>.<p>ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು, ಆಗಾಗ್ಗೆ ಕೈತೊಳೆದುಕೊಳ್ಳುವ ಮೂಲಕ ಕೊರೊನಾ ಸೋಂಕಿನ ವಿರುದ್ಧ ಜಯ ಸಾಧಿಸಬಹುದು ಎನ್ನುವ ಸಂದೇಶವನ್ನು ತಲುಪಿಸುವುದೇ ಮಾಸ್ಕ್ ದಿನಾಚರಣೆಯ ಉದ್ದೇಶ ಎಂದು ತಿಳಿಸಿದರು.</p>.<p>ಪ್ರಕಾಶ್ ಬಂಡಿ , ಶ್ರೀಕಾಂತ್ ಬಾರಿಗಿಡದ, ವೇದಾವತಿ, ಎಂ.ಡಿ ರಾಜೇಶ್ವರಿ ಜಗದೀಶ ಚಲವಾದಿ, ಮಂಜುನಾಥ್ ಪೊಲೀಸ್ ಪಾಟೀಲ, ಮನೋಹರ ಹಾಗೂ ಪೌರ ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>