<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿಯ ಮಹಿಳೆಯೊಬ್ಬರನ್ನು ಕೊಲೆಗೈದಿದ್ದ ಅಪರಾಧಿಗೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಪ್ರಕಟಿಸಿದೆ.</p>.<p>2018ರ ಜೂನ್ನಲ್ಲಿ ಆನೆಗೊಂದಿಯ ಡಿ.ಪಿ. ಕುಮಾರಸ್ವಾಮಿ ಎಂಬಾತ ಅದೇ ಗ್ರಾಮದ ಲಕ್ಷ್ಮೀ ಎಂಬುವವರ ಮನೆಗೆ ನುಗ್ಗಿ ಚಿನ್ನದ ತಾಳಿಸರ ಕೊಡುವಂತೆ ಒತ್ತಾಯಿಸಿದ್ದ. ಮಹಿಳೆ ಸರ ಕೊಡದಿದ್ದಾಗ ಆಕೆಯನ್ನು ಕೊಲ್ಲುವ ಉದ್ದೇಶದಿಂದ ಹಲ್ಲೆ ನಡೆಸಿದ್ದರಿಂದ ತೀವ್ರತರ ಗಾಯಗಳಾಗಿ ಮೃತಪಟ್ಟಿದ್ದರು. ಈ ಕುರಿತು ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿ ಜೀವಾವಧಿ ಹಾಗೂ ₹1 ಲಕ್ಷಗಳ ದಂಡವನ್ನು ತೀರ್ಪಿನ ದಿನಾಂಕದಿಂದ ಮೂರು ತಿಂಗಳ ಒಳಗೆ ಮೃತಳ ತಾಯಿಗೆ ನೀಡುವಂತೆ ತಿಳಿಸಿದ್ದಾರೆ. </p>.<p>ದಂಡ ಪಾವತಿಸದಿದ್ದಲ್ಲ 1 ವರ್ಷ ಸಾದಾ ಕಾರಾಗೃಹ, ಹಾಗೂ ಕಲಂ 392ರ ಅಪರಾಧಕ್ಕೆ 7 ವರ್ಷ ಕಾರಾಗೃಹ ಹಾಗೂ ₹10 ಸಾವಿರ ದಂಡವನ್ನು ಮೂರು ತಿಂಗಳಲ್ಲಿ ಭರಿಸಬೇಕು. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ವಾಸ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.</p>.<p> ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ಅವರು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿಯ ಮಹಿಳೆಯೊಬ್ಬರನ್ನು ಕೊಲೆಗೈದಿದ್ದ ಅಪರಾಧಿಗೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಪ್ರಕಟಿಸಿದೆ.</p>.<p>2018ರ ಜೂನ್ನಲ್ಲಿ ಆನೆಗೊಂದಿಯ ಡಿ.ಪಿ. ಕುಮಾರಸ್ವಾಮಿ ಎಂಬಾತ ಅದೇ ಗ್ರಾಮದ ಲಕ್ಷ್ಮೀ ಎಂಬುವವರ ಮನೆಗೆ ನುಗ್ಗಿ ಚಿನ್ನದ ತಾಳಿಸರ ಕೊಡುವಂತೆ ಒತ್ತಾಯಿಸಿದ್ದ. ಮಹಿಳೆ ಸರ ಕೊಡದಿದ್ದಾಗ ಆಕೆಯನ್ನು ಕೊಲ್ಲುವ ಉದ್ದೇಶದಿಂದ ಹಲ್ಲೆ ನಡೆಸಿದ್ದರಿಂದ ತೀವ್ರತರ ಗಾಯಗಳಾಗಿ ಮೃತಪಟ್ಟಿದ್ದರು. ಈ ಕುರಿತು ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿ ಜೀವಾವಧಿ ಹಾಗೂ ₹1 ಲಕ್ಷಗಳ ದಂಡವನ್ನು ತೀರ್ಪಿನ ದಿನಾಂಕದಿಂದ ಮೂರು ತಿಂಗಳ ಒಳಗೆ ಮೃತಳ ತಾಯಿಗೆ ನೀಡುವಂತೆ ತಿಳಿಸಿದ್ದಾರೆ. </p>.<p>ದಂಡ ಪಾವತಿಸದಿದ್ದಲ್ಲ 1 ವರ್ಷ ಸಾದಾ ಕಾರಾಗೃಹ, ಹಾಗೂ ಕಲಂ 392ರ ಅಪರಾಧಕ್ಕೆ 7 ವರ್ಷ ಕಾರಾಗೃಹ ಹಾಗೂ ₹10 ಸಾವಿರ ದಂಡವನ್ನು ಮೂರು ತಿಂಗಳಲ್ಲಿ ಭರಿಸಬೇಕು. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ವಾಸ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.</p>.<p> ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ನಾಗಲಕ್ಷ್ಮೀ ಅವರು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>